ಹಿರಿಯೂರು:
ಕಾಂಗ್ರೆಸ್ ಭದ್ರ ಕೋಟೆಯಲ್ಲಿ ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳ 88,794 ಮತಗಳನ್ನು ಪಡೆದು ಗೆಲುವು ಸಾಧಿಸಿರುವುದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಕ್ಷೇತ್ರದ ಮಾಜಿಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಅವರಿಗೆ ತೀವ್ರ ಹಿನ್ನಡೆಯಾಗಿದೆ.
ವಿಧಾನಸಭೆ ಚುನಾವಣೆಯಲ್ಲಿ ದಾಖಲೆ ಗೆಲುವು, ಗ್ಯಾರಂಟಿಯೋಜನೆಯ ಜನಪ್ರಿಯತೆ ಕೈ ಹಿಡಿಯಲಿದೆ. ಹೆಚ್ಚು ಲೀಡ್ ಸಿಗಲಿದೆ ಎನ್ನುವ ಅತಿಯಾದ ಾತ್ಮ ವಿಶ್ವಾಸಕ್ಕೆ ಪೆಟ್ಟು ಬಿದ್ದಿದೆ. ಫಲಿತಾಂಶ ಕಾಂಗ್ರೆಸ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಿಗೆ ಎಚ್ಚರಿಕೆಯ ಗಂಟೆ ಭಾರಿಸಿದೆ.
ಬಿಜೆಪಿ ತೊರೆದು ಹಸ್ತಲಾಘವ ಮಾಡಿದ್ದ ಮಾಜಿ ಶಾಸಕಿ ಪೂರ್ಣಿಮಾ, ಯಾದವ ಮತ ಸೆಳೆಯುವಲ್ಲಿ ವಿಫಲರಾಗಿದ್ದಾರೆ ಎಂದೇ ವಿಶ್ಲೇಷಿಸಲಾಗುತ್ತಿದೆ. ರಾಜಕೀಯ ವೈರತ್ವ ಮರೆತು ಕೈ ಅಭ್ಯರ್ಥಿ ಗೆಲುವಿಗೆ ಪಣ ತೊಟ್ಟಿದ್ದ ಸಚಿವ ಡಿ.ಸುಧಾಕರ್ ಹಾಗೂ ಕ್ಷೇತ್ರದ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಹೋರಾಟಕ್ಕೆ ಭಾರಿ ಹಿನ್ನಡೆಯಾಗಿದೆ.
ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ಸುಧಾಕರ್ 92 ಸಾವಿರ, ಬಿಜೆಪಿಯಿಂದ ಸ್ಪರ್ಧಿಸಿದ್ದ ಪೂರ್ಣಿಮಾ 62 ಸಾವಿರ, ಒಟ್ಟು ಮತಗಳು 1 ಲಕ್ಷದ 55 ಸಾವಿರ ಆದರೆ, ಲೋಕಸಭಾ ಚುನಾವಣೆಯಲ್ಲಿ ಬಿ.ಎನ್. ಚಂದ್ರಪ್ಪ 82,597 ಮತ ಪಡೆದಿದ್ದಾರೆ.ಜತೆಗೆ ಕ್ಷೇತ್ರದ ಜಿ.ಎಸ್. ಮಂಜುನಾಥ್ ಅವರಿಗೆ ಮಂಡಳಿ ಉಪಾಧ್ಯಕ್ಷ ಸ್ಥಾನ ನೀಡಿದ್ದು ಕೂಡ ಕೈಗೆ ಫಲ ನೀಡಲಿಲ್ಲ.
ಚಿತ್ರದುರ್ಗ-ತುಮಕೂರು ಲೋಕಸಭಾ ಕ್ಷೇತ್ರಗಳಲ್ಲಿ ನಿರ್ಣಾಯಕ ಪಾತ್ರ ವಹಿಸುವ ಕಾಡುಗೊಲ್ಲರ ಮತ ಪಡೆಯಲು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಎಸ್ಟಿ ಮೀಸಲಾತಿ ಅಸ್ತ್ರ ಪ್ರಯೋಗಿಸಿದ್ದು, ಈ ಬಾರಿ ಆ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ಬೆಂಬಲಿಸಿದ್ದು, ಕಾಂಗ್ರೆಸ್ ಹಿನ್ನಡೆಗೆ ಪ್ರಮುಖ ಕಾರಣ ಎನ್ನಲಾಗಿದೆ.
ಅದೃಷ್ಟದ ಕ್ಷೇತ್ರದಲ್ಲಿ ಗೆದ್ದು 2 ನೇ ಬಾರಿ ಮಂತ್ರಿ ಪದವಿ ಜತೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಗೆ ಲೋಕಸಭೆ ಚುನಾವಣೆಯಲ್ಲಿ ಕೈ ಗೆಲುವು ಪ್ರತಿಷ್ಠೆಯಾಗಿತ್ತು. ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿ ಲೀಡ್ ಸಿಕ್ಕಿರುವುದು ಸುಧಾಕರರ್ ನಿದ್ದೆಗೆಡಿಸಿದೆ. ರಾಜ್ಯ ಸಚಿವ ಸಂಪುಟ ಮರು ರಚನೆಯಾದರೆ ಸಚಿವ ಸ್ಥಾನ ಕೈ ತಪ್ಪಲಿದೆ ಎನ್ನುವ ಚರ್ಚೆ ರಾಜಕೀಯ ವಲಯದಲ್ಲಿ ಶುರುವಾಗಿದೆ.
ಹಿರಿಯೂರು ಕ್ಷೇತ್ರದಲ್ಲಿ ಒಕ್ಕಲಿಗ- ಕಾಡುಗೊಲ್ಲ ಹಾಗೂ ದಲಿತ, ಲಿಂಗಾಯತ ಇತರ ಜಾತಿಗಳ ಮತ ಕ್ರೂಡಿಕರಣಕ್ಕೆ ಬಿಜೆಪಿ- ಜೆಡಿಎಸ್ ಮೈತ್ರಿ ಮತ್ತಷ್ಟು ಬಲ ತುಂಬಿದೆ ಎನ್ನಲಾಗಿದೆ. ವಿಧಾನ ಸಭೆ ಚುನಾವಣೆಯಲ್ಲಿ ಸತತ 4 ನೇ ಬಾರಿ ಸೋತು ಅಸ್ಥಿತ್ವ ಕಳೆದುಕೊಳ್ಳುವ ಭಿತಿಯಲ್ಲಿದ್ದ ಜೆಡಿಎಸ್ ಗೆ ಲೋಕಸಭಾ ಚುನಾವಣೆ ಆನೆ ಬಲ ತಂದಿದೆ.
2023ರ ವಿಧಾನಸಭಾ ಚುನಾವಣೆಯಲ್ಲಿ ಸೋತ ಕ್ಷೇತ್ರದ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಬಿಜೆಪಿ ತೊರೆದ ನಂತರ ಸಮರ್ಥ ನಾಯಕತ್ವ ಇಲ್ಲದೆ ಕಳೆಗುಂದಿದ್ದ ಕಮಲಕ್ಕೆ ಕಾರ್ಯ ಕರ್ತರೇ ಶಕ್ತಿಯಾಗಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments