ಆನೇಕಲ್ : ಕಾಡಾನೆ ದಾಳಿಗೆ ತುತ್ತಾದ ಮಹಿಳೆಯೊಬ್ಬಳು ಮಹದೇವಮ್ಮ (48) ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬನ್ನೇರುಘಟ್ಟ ಪೊಲೀಸ್ ಠಾಣೆ ವ್ಯಾಪ್ತಿಯ ಹಕ್ಕಿಪಿಕ್ಕಿ ಕಾಲೋನಿಯಲ್ಲಿ ನಡೆದಿದೆ.
ಆನೇಕಲ್ ತಾಲೂಕಿನ ಬನ್ನೇರುಘಟ್ಟ ಅಕ್ಕಿಪಿಕ್ಕಿ ಕಾಲೋನಿಯಲ್ಲಿ ಇಂದು ಸಂಜೆ 4 ಗಂಟೆಯಲ್ಲಿ ಮಹದೇವಮ್ಮ ಹೊಲದಲ್ಲಿ ಹಸುಗಳನ್ನು ಮೇಯಿಸುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದೆ, ಕಾಡಾನೆ ದಾಳಿಗೆ ಸ್ಥಳದಲ್ಲೇ ಮಹದೇವಮ್ಮ ಮೃತಪಟ್ಟಿದ್ದಾಳೆ ಎಂದು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ಕೊಟ್ಟರೆ ಯಾರಿಗೂ ಗೊತ್ತಾಗದ ಹಾಗೆ ಮೃತ ದೇಹವನ್ನು ತೆಗೆದುಕೊಂಡು ಹೋಗುವಂತೆ ಒತ್ತಾಯಿಸಿದರಂತೆ. ಅಧಿಕಾರಿಗಳ ಯಾವ ಒತ್ತಡಕ್ಕೂ ಮಣಿಯದೆ ಮೃತ ಕುಟುಂಬಕ್ಕೆ ಪರಿಹಾರ ನೀಡುವಂತೆ ಅರಣ್ಯ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.
0 Comments