ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾಡುಗೊಲ್ಲರ ತಾಲೂಕು ಸಂಘ ಹಾಗೂ ಸಮುದಾಯದಿಂದ ಪ್ರತಿಭಟನೆ.

by | 20/11/23 | ಪ್ರತಿಭಟನೆ


ಚಳ್ಳಕೆರೆ ನ.20. ಕಾಡುಗೊಲ್ಲರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರದಲ್ ತಾಲೂಕು ಕಚೇರಿ ಮುಂದೆ ತಾಲೂಕು ಕಾಡುಗೊಲ್ಲರ ಸಂಘ,ಕರ್ನಾಟಕ ಕಾಡುಗೊಲ್ಲರ ಸಂಘಗಳ ಸಂಯುಕ್ತಾಶ್ರಯದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.


ಡಾ ಕಾಂತರಾಜ್ ನಿಕಟಪೂರ್ವ ಹಿಂದಳಿದ ವರ್ಗಗಳ ಆಯೋಗದ ಅಧ್ಯಕ್ಷರ ವರದಿಯನ್ನು ಕೂಡಲೇ ಅನುಷ್ಠಾನಗೊಳಸ ಬೇಕು12 ಜಿಲ್ಲೆಯಗಳಲ್ಲಿ 40 ತಾಲೂಕುಗಳಲ್ಲಿ1250 ಕ್ಕೂ ಹೆಚ್ಚಿನ ಗೊಲ್ಲರಹಟ್ಟಿಗಳಲ್ಲಿ ಹಾಗೂ ಉದ್ಯೋಗ ಹಾಗೂ ವಿದ್ಯಾಭ್ಯಾಸ ಸಲುವಾಗಿ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಸುಮಾರು 6 ರಿಂದ 8 ಲಕ್ಷ ಜನ ಸಂಖ್ಯೆ ಹೊಂದಿರುವ ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಶಿಫಾರಸ್ಸು ಮಾಡಿದ್ದರೂ ಸಹ ಕೇಂದ್ರ ಸರ್ಕಾರ ಅನುಷ್ಠಾನಕ್ಕೆ ತರುವಲ್ಲಿ ಮೀನಾಮೇಷ ಎಣಿಸುತ್ತಿದೆ. ಹಲವು ಬಾರಿ ಪ್ರತಿಭಟನೆ ಮಾಡಿದರೂ ಸಹ ಸರಕಾರಗಳು ತಮ್ಮಬೇಡಿಯನ್ನು ಈಡೇರಿಸಲು ಇಚ್ಚಾ ಶಕ್ತಿ ತೋರುತ್ತಿಲ್ಲ ಕಾಡುಗೊಲ್ಲರನ್ನು ಕೇವಲ ಮತ ಬ್ಯಾಂಕ್ ಮಾಡಿಕೊಂಡಿದ್ದಾರೆ.

ಕಾಡುಗೊಲ್ಲ ಸಮುದಾಯವನ್ನು ಜಾತಿಪಟ್ಟಿಗೆ ಸೇರಿಸುವಲ್ಲಿ ಯಶಸ್ವಿಯಾಗಿರುವ ಕಾಡುಗೊಲ್ಲ ಇನ್ನೂ ಜಾತಿ ಪ್ರಮಾಣ ಪತ್ರ ಸಿಕ್ಕಿಲ್ಲ, ಸಂಬಂಧಿಸಿದವರನ್ನು ಕೇಳಿದರೆ ಕೆಲವು ಕಾನೂನು ತೊಡಕುಗಳಿಂದ ವಿಳಂಬವಾಗಿದೆ ಎನ್ನುತ್ತಾರೆ. ಕೂಡಲೇ ರಾಜ್ಯ ಸರ್ಕಾರ ಕಾಡುಗೊಲ್ಲ ಸಮುದಾಯಕ್ಕೆ ಎಲ್ಲಾ ತಾಲ್ಲೂಕು ಕಚೇರಿಗಳಲ್ಲೂ ಜಾತಿ ಪ್ರಮಾಣ ಪತ್ರ ವಿತರಣೆಗೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಕಾಡುಗೊಲ್ಲರು ಬುಡಕಟ್ಟು ಸಂಸ್ಕೃತಿ ಇಂದಿಗೂ ಆಚರಣೆಯಲ್ಲಿದೆ ಶೈಕ್ಷಣಿಕವಾಗಿ , ಆರ್ಥಿಕವಾಗಿ ಹಿಂದುಳಿದಿದ್ದು ಕೆಲವು ಕಡೆ ಕಾಡುಗೊಲ್ಲ ಎಂದು ಜಾತ್ರಿ ಪ್ರಮಾಣ ಪತ್ರ ನೀಡಿದ್ದರೂ ಸಹ ಸರಕಾರ ಕಾಡುಗೊಲ್ಲರ ಬೇಡಿಕೆ ಈಡೇರಿಸುವಲ್ಲಿ ವಿಳಂಭ ದೋರಣೆ ಮಾಡುತ್ತಿದದ್ದು ನಮ್ಮತಾಳ್ಮೆ ಪರಿಕ್ಷೆ ಮಾಡುತ್ತಿದೆ ಇನ್ನೇ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು ಅಷ್ಟರಲ್ಲಿ ನಮ್ಮ ಬೇಡಿಕೆ ಈಡೇರಿಸದಿದ್ದಲ್ಲಿ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸ ಬೇಕಾಗುತ್ತದೆ ಎಂದು ಕಾಡುಗೊಲ್ಲ ಸಮುದಾಯದ ಮುಖಂಡರು ಅಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನೆಯಲ್ಲಿ ತಾಲೂಕ ಕಾಡುಗೊಲ್ಲ ಸಂಘದ ಅಧ್ಯಕ್ಷರು ಸದಸ್ಯರು, ಜಿಲ್ಲಾ ಪಂಚಾಯತ್ , ತಾಲೂಕ ಪಂಚಾಯತ್ ಮಾಜಿ ಸದಸ್ಯರು, ನಗರಸಭೆ, ಗ್ರಾಮಪಂಚಾಯಿತಿ ಸದಸ್ಯರು ಹಾಗೂ ಕಾಡುಗೊಲ್ಲ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.
ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page