ಚಳ್ಳಕೆರೆ ಡಿ26. ಕೃಷ್ಣಮೃಗ ಬೇಟೆಯಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂದಿಸಿರುವುದು ಬೆಳಕಿಗೆ ಬಂದಿದೆ. ಚಳ್ಳಕೆರೆ ತಾಲೂಕಿನ ಕಾಪರಹಳ್ಳಿ ಗ್ರಾಮದ ಸಮೀಪ ಬಡವನಹಳ್ಳಿ ಕಾವಲು ಅರಣ್ಯ ಪ್ರದೇಶದಲ್ಲಿ ಚಳ್ಳಕೆರೆ ನಗರದ ನಿವಾಸಿಗಳು ಎಂದು ತಿಳಿದು ಬಂದಿದ್ದು ಒಂದು ಕೃಷ್ಣ ಮೃಗ ಬೇಟಿಯಾಡುತ್ತಿರುವಾಗ ಸಾರ್ವಜನಿಕರು ಪ್ರಾದೇಶಿಕ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರಿಂದ ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿ ಮೃತಪಟ್ಟ ಕೃಷ್ಣಮೃಗ ಹಾಗೂ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ ಹೆಚ್ಚಿ ಲನ ಮಾಹಿತಿ ತನಿಖೆ ನಂತರ ಬಯಲಾಗಬೇಕಿದೆ.
ಅಳಿವಿನಂಚಿಗೆ ತಲುಪಿರುವ ಇವುಗಳ ಮಾಂಸಕ್ಕೆ ಬಹಳ ಬೇಡಿಕೆಯಿದ್ದು, ಎಷ್ಟೇ ಎಚ್ಚರಿಕೆ ವಹಿಸಿದರೂ ಅರಣ್ಯ ಇಲಾಖೆಯ ಕಣ್ತಪ್ಪಿಸಿ ಹಲವಾರು ವರ್ಷಗಳಿಂದಲೂ ಕದ್ದುಮುಚ್ಚಿ ಹಗಲು ಎನ್ನದೆ ಮಾಂಸಕ್ಕಾಗಿ ಬೇಟೆಯಾಡುವವರ ಸಂಖ್ಯೆ ಹೆಚ್ಚಾಗಿ ಕಂಡು ಬರುತ್ತಿದೆ.ಇಂತಹ ಕಾಡು ಪ್ರಾಣಿಗಳ ಬೇಟೆಗಾರರಿಗೆ ತಕ್ಕ ಪಾಠಕಲಿಸಬೇಕಾಗಿದೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments