ಚಳ್ಳಕೆರೆ:ಕಾಯಕ ಶರಣರು ಜಾತಿ, ಧರ್ಮ, ವರ್ಣ, ವರ್ಗವನ್ನು ಮೀರಿದವರು. ಅವರ ವಚನಗಳು ಇಂದಿಗೂ ಪ್ರಸ್ತುತ’ ಎಂದು ತಹಶಿಲ್ದಾರ್ ರೆಹಾನ್ ಪಾಷಾ ಅಭಿಪ್ರಾಯಪಟ್ಟರು.
ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತ ರಾಷ್ಟ್ರೀಯ ಹಬ್ಬಗಳ ಸಮಿತಿ ಹಾಗೂ ದಲಿತ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಕಾಯಕ ಶರಣರ ಜಯಂತಿ ಕಾರ್ಯಕ್ರಮವನ್ನು ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಉದ್ಘಾಟಿಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಬಸವಣ್ಣನವರ ಅನುಭವ ಮಂಟಪದಲ್ಲಿ ಎಲ್ಲ ವರ್ಗದ ಶರಣರಿದ್ದರು. ಅವರಲ್ಲಿ ಮಾದಾರ ಚನ್ನಯ್ಯ, ಸಮಗಾರ ಹರಳಯ್ಯ, ಉರಿಲಿಂಗಿಪೆದ್ದಿ, ಮಾದಾರ ದೂಳಯ್ಯ, ಡೋಹರ ಕಕ್ಕಯ್ಯ ಎಂಬ ಐವರು ಕಾಯಕ ಶರಣರು ಪ್ರಮುಖರಾಗಿದ್ದರು. ಅವರ ಜೀವನ ಹಾಗೂ ಮೌಲ್ಯಗಳನ್ನು ಸಮಾಜಕ್ಕೆ ಬಿತ್ತರಿಸುವ ನಿಟ್ಟಿನಲ್ಲಿ ಸರ್ಕಾರ ಜಯಂತಿ ಆಚರಣೆ ಮಾಡುತ್ತಿದೆ’ ಎಂದರು.
![](https://janadhwani.in/wp-content/uploads/2024/02/IMG-20240213-WA0184-1.jpg)
ಮಾದಾರ ಚನ್ನಯ್ಯ ಅವರು ಕಾಯಕಕ್ಕೆ ಹೆಚ್ಚು ಗೌರವ ತಂದು ಕೊಟ್ಟರು. ಉರಿಲಿಂಗಿಪೆದ್ದಿ ಅವರ 366 ಮಾದಾರ ಚನ್ನಯ್ಯ 12, ಡೋಹಾರ ಕಕ್ಕಯ್ಯ 13, ಮಾದಾರ ದೂಳಯ್ಯ 33 ವಚನಗಳು ಲಭ್ಯವಿದ್ದು ಇವುಗಳು ಮಾನವೀಯ ಮೌಲ್ಯಗಳನ್ನು ಹೊಂದಿವೆ ಸಮ ಸಮಾಜ ನಿರ್ಮಾಣಕ್ಕಾಗಿ ಶರಣರ ವಚನಗಳನ್ನು ಅಧ್ಯಯನ ಮಾಡಬೇಕು’ಎಂದು ತಿಳಿಸಿದರು.
ಚೆನ್ನಮ್ಮನಾಗತಿಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಆನಂದ್ ಕುಮಾರ್ ಮಾತನಾಡಿ, 12ನೇ ಶತಮಾನದಲ್ಲಿ ಧಾರ್ಮಿಕ ಸಾಮಾಜಿಕ ರಾಜಕೀಯ ಕ್ರಾಂತಿಗಳು ನಡೆದವು ಅವುಗಳಲ್ಲಿ ಧಾರ್ಮಿಕ ಕ್ರಾಂತಿ ಅತ್ಯಂತ ಪ್ರಭಾವಶಾಲಿಯಾಗಿ ಮಾನವರ ಜೀವಿತದ ಮೇಲೆ ಪರಿಣಾಮ ಬೀರಿದವು ಎಲ್ಲ ದಾರ್ಮಿಕರು ಕಾಯಕದ ತತ್ವವನ್ನು ಸಾರಿ ಹೇಳಿದ್ದಾರೆ ಈಗಿನ ದಿನಗಳಲ್ಲಿ ಧರ್ಮದ ಹೆಸರಿನಲ್ಲಿ ಕಚ್ಚಾಟ ನಡೆಸಿ ಸಮಾಜದ ಶಾಂತಿ ಕದಡುತ್ತಿರುವುದು ವಿಪರ್ಯಾಸ. ಅಸ್ಪೃಶ್ಯತೆ ಹೋಗಲಾಡಿಸಲು ಸರ್ಕಾರ ಅನೇಕ ಕಾನೂನುಗಳನ್ನು ಜಾರಿಗೆ ತಂದಿದೆ. ಕಾಯಕ ಶರಣರ ವಚನಗಳ ಅಧ್ಯಯನ ಮೂಲಕ ಸಮಾಜದಲ್ಲಿರುವ ಕಂದಾಚಾರ, ಜಾತಿ ಪದ್ಧತಿಗಳನ್ನು ಹೋಗಲಾಡಿಸಬೇಕು’ ಎಂದರು. ಸಾಹಿತಿ ಮೈತ್ರಿ ದ್ಯಾಮಯ್ಯ ಮಾತನಾಡಿ, ‘12ನೇ ಶತಮಾನದಲ್ಲಿದ್ದ ಶರಣರು ಸಮಾಜದಲ್ಲಿದ್ದ ಅಂಕುಡೊಂಕುಗಳ ಕುರಿತು ಸರಳ ಭಾಷೆಯ ಮೂಲಕ ಸಾಮಾನ್ಯ ಜನರಿಗೆ ತಿಳಿಸುವ ಕಾರ್ಯ ಮಾಡಿದರು ಎಂದರು.
ಈ ಸಂದರ್ಭದಲ್ಲಿ ನಗರ ಸಭೆ ಪೌರಾಯುಕ್ತ ಚಂದ್ರಪ್ಪ ಬೆಸ್ಕಾಂ ಇಲಾಖೆ ಅಧಿಕಾರಿ ರಾಜು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಂಜುನಾಥ್ ಶ್ರೀನಿವಾಸ್ ಶಿವರಾಜ್ ಮುಖಂಡರಾದ ಚನ್ನಿಗ ರಾಮಯ್ಯ ವಿಜಯ್ ಕುಮಾರ್ ಹೊನ್ನೂರ್ ಸ್ವಾಮಿ ಭೀಮಣ್ಣ ಜಗದೀಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
0 Comments