ಹಿರಿಯೂರು :
ಕಾರ್ಮಿಕರು ಯಾವುದೇ ಸಂದರ್ಭದಲ್ಲಿ ತಮಗೆ ಸಂಕಷ್ಟದ ಪರಿಸ್ಥಿತಿ ಇದ್ದಾಗ ತಕ್ಷಣ ಪೊಲೀಸ್ ಠಾಣೆಗೆ ದೂರವಾಣಿ ಕರೆ ಮಾಡಿದಲ್ಲಿ ನಾವು ನಿಮ್ಮ ಸಂಕಷ್ಟಗಳಿಗೆ ಸ್ಪಂದಿಸುತ್ತೇವೆ, ಕಾರ್ಮಿಕರು ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂಬುದಾಗಿ ಪಿಎಸ್ಐ ಮಂಜುನಾಥ್ ಕಾರ್ಮಿಕರಿಗೆ ಕರೆ ನೀಡಿದರು.
ನಗರದ ಬೆಂಗಳೂರು ರಸ್ತೆಯಲ್ಲಿರುವ ವೆಲ್ಡಿಂಗ್ ಮಾಲೀಕರು ಮತ್ತು ಕೆಲಸಗಾರರ ಕ್ಷೇಮಾಭಿವೃದ್ದಿ ಸಂಘದ ಕಚೇರಿಯಲ್ಲಿ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾರ್ಮಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.
ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ.ವೆಂಕಟೇಶ್ ಅವರು ಕಾರ್ಮಿಕರಿಗೆ ಉಚಿತ ಔಷಧ ಕಿಟ್ ಗಳನ್ನು ವಿತರಣೆ ಮಾಡಿ ಮಾತನಾಡಿ, ಕಾರ್ಮಿಕರು ಈ ದೇಶದ ಶಕ್ತಿ ಹಾಗೂ ಅಭಿವೃದ್ಧಿಯ ಸಂಕೇತ, ಆದ್ದರಿಂದ ಕಾರ್ಮಿಕರು ತಮ್ಮ ಆರೋಗ್ಯದ ರಕ್ಷಣೆ ಕಡೆಗೆ ಹೆಚ್ಚಿನ ಗಮನಹರಿಸಬೇಕು ಎಂಬುದಾಗಿ ಹೇಳಿದರು.
ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ಜಿಲ್ಲಾಧ್ಯಕ್ಷ ಪ್ರಸನ್ನ ನಾಡಿಗೇರ್ ರವರು ಮಾತನಾಡಿ, ಈ ದೇಶದ ಕೃಷಿ, ಕೈಗಾರಿಕೆ, ಉದ್ಯಮ ಕ್ಷೇತ್ರಗಳು ಅಭಿವೃದ್ಧಿಯಾಗಬೇಕಾದರೆ ಅಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರ ಪರಿಶ್ರಮದಿಂದ ಮಾತ್ರ, ಆದ್ದರಿಂದ ದೇಶದ ಪ್ರಗತಿಗೆ ಕಾರ್ಮಿಕರ ಕೊಡುಗೆ ಅಪಾರವಾಗಿದ್ದು, ಕಾರ್ಮಿಕರ ದಿನಾಚರಣೆಯ ಮೂಲಕ ಅವರನ್ನು ಸ್ಮರಿಸಬೇಕಾಗಿದೆ ಎಂಬುದಾಗಿ ಹೇಳಿದರು.
ಈ ಕಾರ್ಯಕ್ರಮದಲ್ಲಿ ತಾಲ್ಲೂಕು ಅಧ್ಯಕ್ಷ ಪರಮೇಶ್, ವರ್ತಕ ಸೂರ್ಯಪ್ರಕಾಶ್, ರಾಘವೇಂದ್ರ, ಪಾಂಡು ,ವಿಷ್ಣು,ಪ್ರಸಾದ್ ಹಾಗೂ ಸಂಘದ ಅಧ್ಯಕ್ಷ ಪರಮೇಶ್, ಕಾರ್ಯದರ್ಶಿ ಬಸವರಾಜ್ ,ಗೌರವ ಅಧ್ಯಕ್ಷರಾದ ರಾಜಣ್ಣ, ನಯೀಮುಲ್ಲಾ, ಸಾದತ್ ಅಹಮದ್ ಶಾ ನಾವಾಜ್, ತಿಪ್ಪೇಸ್ವಾಮಿ, ಇಸ್ಮಾಯಿಲ್, ಮಣಿ, ರಾಮು, ರವಿ, ನಾಜಿಮ್, ನಾಗರಾಜ್, ಅರುಣ್ ಇತರರು ಭಾಗವಹಿಸಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments