ಚಳ್ಳಕೆರೆ ಸೆ 27. ಕಾವೇರಿ ನೀರಿನ ವಿಚಾರದಲ್ಲಿ ಸರ್ಕಾರ ಸುಪ್ರೀಂಕೋರ್ಟ್ ಹಾಗೂ ಸಿಡಬ್ಲ್ಯೂಸಿ ನಿಯಮಗಳನ್ನು ಪಾಲನೆ ಮಾಡುತ್ತಿದ್ದು ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ರಾಜಕೀಯವಾಗಿ ತಮ್ಮ ಅಸ್ತಿತ್ವವನ್ನು ಉಳಿಸಿಕೊಳ್ಳಲು ಪ್ರತಿಭಟನೆ ದಾರಿ ತುಳಿದಿವೆ ಎಂದು ಸಚಿವ ಮಧು ಬಂಗಾರಪ್ಪ ಕಿಡಿಕಾರಿದರು.
ನಗರದ ರಾಘವೇಂದ್ರ ಕಲ್ಯಾಣ ಮಂಟಪದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿ ಡಬ್ಲ್ಯೂ ಸಿ ಅಧಿಕಾರಿಗಳು ರಾಜ್ಯಕ್ಕೆ ಬಂದು ವಾಸ್ತವಾಂಶ ಅರಿಯದೆ ತೀರ್ಮಾನಗಳನ್ನು ಕೈಗೊಳ್ಳುತ್ತಿದೆ ಹೀಗಾಗಿ ಕಾವೇರಿ ಸಮಸ್ಯೆ ಉದ್ಭವವಾಗಿದೆ ಸಿ ಡಬ್ಲ್ಯೂ ಸಿ ಕೇಂದ್ರ ಸರ್ಕಾರದ ಅಧೀನದಲ್ಲಿದ್ದು ರಾಜ್ಯದ ಬಿಜೆಪಿ ಸಂಸದರು ಯಡಿಯೂರಪ್ಪನವರ ನೇತೃತ್ವದಲ್ಲಿ ದೆಹಲಿಗೆ ತೆರಳಿ ಪ್ರಧಾನಿ ಬಳಿ ಮನವಿ ಮಾಡಿಕೊಳ್ಳಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯ ಮುಂದೆ ಮಾತನಾಡಲು ಬಿಜೆಪಿ ಸಂಸದರಿಗೆ ತಾಕತ್ತಿಲ್ಲ ಪ್ರತಿಭಟನೆ ಮಾಡುವುದು ಸಂವಿಧಾನ ನೀಡಿರುವ ಹಕ್ಕಾಗಿರುವುದರಿಂದ ಸರ್ಕಾರ ಪ್ರತಿಭಟನೆ ಮಾಡಬೇಡಿ ಎಂದು ಹೇಳಲು ಸಾಧ್ಯವಿಲ್ಲ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪ್ರತಿಭಟಿಸಿದರೆ ಸರ್ಕಾರದ ಅಭ್ಯಂತರವಿಲ್ಲ ಪಠ್ಯ ಪರಿಷ್ಕರಣೆ ಕಾನೂನು ಬದ್ಧವಾಗಿ ಬದಲಾವಣೆ ಆಗಲಿದೆ ಎಂದು ಇದೇ ವೇಳೆ ಉತ್ತರಿಸಿದರು.
ಶಾಸಕ ಟಿ.ರಘುಮೂರ್ತಿ, ಮಾಜಿ ಸಂಸದ ಚಂದ್ರಪ್ಪ ಇದ್ದರು.
0 Comments