ಕುಂಚಿಟಿಗಜನರಿಗೆ ಓಬಿಸಿಮೀಸಲಾತಿ ಕೈತಪ್ಪಿ ಹೋಗಿದ್ದು, ಶಿಕ್ಷಣಹಾಗೂಉದ್ಯೋಗಕ್ಷೇತ್ರದಲ್ಲಿ ತುಂಬಾ ನಷ್ಟವಾಗಿದೆ ಕುಂಚಿಟಿಗಮಹಾಸಭಾ ಅಧ್ಯಕ್ಷರಾದ ಹೆಚ್.ಪಿ.ಗುರುನಾಥ್

by | 12/10/23 | ಪ್ರತಿಭಟನೆ


ಹಿರಿಯೂರು :
ಕುಂಚಿಟಿಗ ಜನರಿಗೆ ಕೇಂದ್ರ ಸರ್ಕಾರದ ಓಬಿಸಿ ಮೀಸಲಾತಿ ಕೈ ತಪ್ಪಿ ಹೋಗಿ ಕಳೆದ 27 ವರ್ಷಗಳಿಂದ ಶಿಕ್ಷಣ ಮತ್ತು ಉದ್ಯೋಗದಲ್ಲಿ ತುಂಬಲಾರದ ನಷ್ಟ ಉಂಟಾಗಿದ್ದು. ಇದನ್ನು ಈ ಕೂಡಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸರಿಪಡಿಸಬೇಕು ಎಂಬುದಾಗಿ ರಾಷ್ಟ್ರೀಯ ಕುಂಚಿಟಿಗ ಮಹಾಸಭಾದ ಅಧ್ಯಕ್ಷ ಹೆಚ್.ಪಿ.ಗುರುನಾಥ್ ಒತ್ತಾಯಿಸಿದರು.
ತಾಲ್ಲೂಕು ಬುರಜಿನರರೊಪ್ಪ ಶ್ರೀ ರಕ್ಷಾಗಣಪತಿ ದೇವಸ್ಥಾನದ ಹತ್ತಿರ ಎರಡನೇ ದಿನದ ಕುಂಚಿಟಿಗರ ಪಾದಯಾತ್ರೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಶಿರಾ ಕುಂಚಿಟಿಗರ ಸಂಘದ ಆರ್.ವಿ.ಪುಟ್ಟಕಾಮಣ್ಣ ಮಾತನಾಡಿ, ಕುಂಚಿಟಿಗರು ಮಧ್ಯ ಕರ್ನಾಟಕದ ಬಹುತೇಕ ಹಳ್ಳಿಗಾಡಿನ ಕುಗ್ರಾಮಗಳಲ್ಲಿ ನೆಲೆಸಿ ಕೃಷಿ, ಕೂಲಿ, ಪಶುಸಂಗೋಪನೆ, ಹೈನುಗಾರಿಕೆ ಮಾಡಿಕೊಂಡು ಮಳೆಯಾಶ್ರಿತ ವ್ಯವಸಾಯ ಮಾಡಿಕೊಂಡು ಬುಡಕಟ್ಟು ಸಂಸ್ಕೃತಿಯ ಆಚರಣೆ ಮಾಡುತ್ತಿದ್ದಾರೆ ಎಂದರಲ್ಲದೆ,
ರಾಜ್ಯಾದ್ಯಂತ ಹರಿದು ಹಂಚಿ ಹೋಗಿರುವ ಕುಂಚಿಟಿಗರು ಪ್ರಾದೇಶಿಕ ಭಾಷೆಗಳ ವ್ಯತ್ಯಾಸ ಮತ್ತು ಸ್ಥಳೀಯ ಪಟ್ಟಭದ್ರರ ಪ್ರಭಾವಕ್ಕೆ ಮಣಿದು ಕುಂಚಿಟಿಗ ಜಾತಿಯ ಜೊತೆಗೆ ಕುಂಚವಕ್ಕಲ್, ಕಮಾಟಿ, ನಾಮದಾರಿ, ಲಿಂಗಾಯಿತ, ಒಕ್ಕಲಿಗ ಅಂತ ಸೇರಿಸಿಕೊಂಡು ಜಾತಿಪಟ್ಟಿಯಲ್ಲಿ ಅಸ್ತಿತ್ವದಲ್ಲಿಲ್ಲದ ಹೆಸರಿನಲ್ಲಿ ಜಾತಿ ಸಿಂಧುತ್ವ ಸಿಗದೆ ತೊಂದರೆ ಅನುಭವಿಸುವಂತಾಗಿದೆ. ಎಂಬುದಾಗಿ ಹೇಳಿದರು.
ಕುಂಚಿಟಿಗರ ರಾಜ್ಯ ಒಕ್ಕೂಟದ ಅಧ್ಯಕ್ಷ ಕಸವನಹಳ್ಳಿರಮೇಶ್ ಮಾತನಾಡಿ, ಕುಂಚಿಟಿಗರ ಏಕೀಕರಣ ಮತ್ತು ಧೃವೀಕರಣ ಹೋರಾಟದ ಮುಂದುವರಿದ ಭಾಗವಾಗಿ ಇದೀಗ ಕುಲ ಬೆಡಗುಗಳ ಆಧಾರ ಮತ್ತು “ಮರಳಿ ಬಾ ಕುಂಚಿಟಿಗ” ಜನಾಂದೋಲನ ಹಾಗೂ ಅಂತರ ರಾಜ್ಯ ಕುಂಚಿಟಿಗರ ಭಾವೈಕ್ಯತಾ ಪ್ರವಾಸ, ಕುಲದೈವ ಯಾತ್ರೆ ಕಾರ್ಯಕ್ರಮದಡಿ ಕುಂಚಿಟಿಗರು ಒಂದುಗೂಡುತ್ತಿದ್ದಾರೆ.
ಅಲ್ಲದೆ ಕುಂಚಿಟಿಗರು ಶಾಶ್ವತ ನೀರಾವರಿ ಸೌಕರ್ಯವಿಲ್ಲದೆ,ಮಳೆ ನೆರಳಿನ ಬಯಲು ಸೀಮೆಯಲ್ಲಿ ಬಾರದ ಮಳೆ, ಬತ್ತಿದ ಕೆರೆ, ಏರಿದ ಬಡ್ಡಿ, ತೀರದ ಸಾಲ,ಅತೀವೃಷ್ಟಿ,ಅನಾವೃಷ್ಟಿ,ಬೆಳೆ ನಷ್ಟ, ಬೆಲೆ ಕುಸಿತಗಳಿಂದ ಉತ್ಪಾದನಾ ವೆಚ್ಚ ಕೂಡ ಲಭಿಸದೆ, ಕೃಷಿ ಮತ್ತು ಬೆಳೆ ಸಾಲ ತೀರಿಸಲಾಗದೆ ವ್ಯವಸಾಯಕ್ಕೆ ವಿದಾಯ ಹೇಳಿ ನಗರ ಪ್ರದೇಶಗಳಿಗೆ ವಲಸೆ ಹೋಗಿ ಸಣ್ಣಪುಟ್ಟ ಕೆಲಸ ಮಾಡಿ ಬದುಕು ಕಟ್ಟಿಕೊಂಡಿದ್ದಾರೆ.
ಗ್ರಾಮೀಣ ರೈತಾಪಿ ಮಕ್ಕಳು ಕೂಡ ಹಗಲು ರಾತ್ರಿ,ಕಲ್ಲು ಮುಳ್ಳು,ಹಾವು ಚೇಳು ವಿಷ ಜಂತುಗಳ ನಡುವೆ ಜೀವದ ಹಂಗು ತೊರೆದು ವ್ಯವಸಾಯ ಕೆಲಸ ಮಾಡಿಕೊಂಡು,ಸಾರಿಗೆ ಸೌಕರ್ಯವಂಚಿತ ಮೂಲಭೂತ ಸೌಕರ್ಯ ವಿಲ್ಲದ ಶಾಲೆಗಳಲ್ಲಿ ಅರೆಕಾಲಿಕ ಶಿಕ್ಷಣ ಪಡೆದು ಕೇಂದ್ರ ಸರ್ಕಾರದ ಶಿಕ್ಷಣ ಮತ್ತು ಉದ್ಯೋಗದಲ್ಲಿ ಜನರಲ್ ಮೆರಿಟ್ ನಲ್ಲಿ ಸ್ಪರ್ಧೆ ಮಾಡಬೇಕಾಗಿದೆ.
ಆದ್ದರಿಂದ ಕುಂಚಿಟಿಗರಿಗೆ ಗ್ರಾಮೀಣ ಮತ್ತು ನಗರ ಎಂಬುದಾಗಿ ತಾರತಮ್ಯ ಮಾಡದೆ ಕೇಂದ್ರ ಓ ಬಿ ಸಿ ಮೀಸಲಾತಿ ಕಲ್ಪಿಸಬೇಕು, ಈಗಾಗಲೇ ಕೇಂದ್ರ ಓ ಬಿ ಸಿ ಮೀಸಲಾತಿ ಇಲ್ಲದ ಆರ್ಥಿಕವಾಗಿ ಹಿಂದುಳಿದ ಕುಂಚಿಟಿಗರಿಗೆ ಈಡಬ್ಲೂ.ಎಸ್ ಮೀಸಲಾತಿ ಇತ್ತೀಚೆಗೆ ಸಿಕ್ಕಿದ್ದು, ಈಗ ಒಕ್ಕಲಿಗರಿಗೆ ಅನುಸರಿಸಿದ ಮಾದರಿಯಲ್ಲಿ ಗ್ರಾಮೀಣ ಕುಂಚಿಟಿಗರಿಗೆ ಮಾತ್ರ ಓ ಬಿ ಸಿ ಮೀಸಲಾತಿ ಕಲ್ಪಿಸುವ ಮಾತು ಕೇಳಿ ಬರುತ್ತಿದೆ.ಯಾವುದೇ ಕಾರಣಕ್ಕೂ ಅಂತಹ ತೀರ್ಮಾನ ಮಾಡಬಾರದು ಎಂದು ಹೇಳಿದರು.
ಹಿಂದುಳಿದ ವರ್ಗಗಳ ಪರಮೋಚ್ಚ ಅಹಿಂದ ನಾಯಕರಾದ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಮತ್ತು ಕುಂಚಿಟಿಗರ ಹಿರಿಯ ಸಂಸದೀಯ ಪಟುಮುತ್ಸದ್ದಿ ರಾಜಕಾರಣಿ ಟಿ.ಬಿ.ಜಯಚಂದ್ರರವರು ಯಾವುದೇ ಕಾರಣಕ್ಕೂ ಗ್ರಾಮೀಣ ಮತ್ತು ನಗರ ಕುಂಚಿಟಿಗ ಎಂದು ತಾರತಮ್ಯ ಮಾಡದೇ, ಸಮಸ್ಥ ಕುಂಚಿಟಿಗರಿಗೆ ಕೇಂದ್ರ ಸರ್ಕಾರದ ಓಬಿಸಿ ಮೀಸಲಾತಿ ಕಲ್ಪಿಸಲು ಶಿಫಾರಸು ಮಾಡಬೇಕೆಂದು ಮನವಿ ಮಾಡಿದ್ದಾರೆ.
ಒಂದು ವೇಳೆ ಗ್ರಾಮೀಣ ಕುಂಚಿಟಿಗರಿಗೆ ಮಾತ್ರ ಓ ಬಿ ಸಿ ಮೀಸಲಾತಿ ಕೊಟ್ಟರೆ ನಗರ ಕುಂಚಿಟಿಗರಿಗೆ ಓ ಬಿ ಸಿ ಮೀಸಲಾತಿ ಮತ್ತು ಈಡಬ್ಲೂ.ಎಸ್ ಮೀಸಲಾತಿ ಎರಡು ಕೈ ತಪ್ಪಿ ಹೋಗಿ ಜನರಲ್ ಮೆರಿಟ್ ನಲ್ಲಿ ಬರುತ್ತಾರೆ. ಮತ್ತೊಮ್ಮೆ ಕುಂಚಿಟಿಗರಿಗೆ ಗಾಯದ ಮೇಲೆ ಬರೆ ಎಳೆದಂತಾಗುತ್ತದೆ ಎಂಬುದಾಗಿ ಹೇಳಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಕುಂಚಿಟಿಗರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಹುಲಿರಂಗನಾಥ್, ಕುಬೇರಪ್ಪ, ಶಶಿಕಲಾ, ಜಯಪ್ರಕಾಶ, ಚಂದ್ರಗಿರಿ, ಅವಿನಾಶ್, ಡಿ.ಹನುಮಂತರಾಯ, ಪವನ್, ವಿಶ್ವನಾಥ ಇತರರು ಉಪಸ್ಥಿತರಿದ್ಧರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page