ಕುಂಚಿಟಿಗರ ಒಗ್ಗೂಡುವಿಕೆಯಿಂದ ಮಾತ್ರ ಕೇಂದ್ರ ಓಬಿಸಿ ಪಡೆಯಲು ಸಾಧ್ಯ : ಅಧ್ಯಕ್ಷರಾದ ಕಸವನಹಳ್ಳಿ ರಮೇಶ್

by | 26/08/23 | ಸುದ್ದಿ


ಹಿರಿಯೂರು :
ಐದು ರಾಜ್ಯಗಳು 18 ಜಿಲ್ಲೆಗಳು 46 ತಾಲ್ಲೂಕುಗಳಲ್ಲಿ 28 ಲಕ್ಷಕ್ಕೂ ಅಧಿಕ ಸಂಖ್ಯೆಯ ಕುಂಚಿಟಿಗರು ಕುಲಬೆಡಗುಗಳ ಆಧಾರದ ಮೇಲೆ ಒಗ್ಗೂಡಿ ನ್ಯಾಯಯುತ ಬೇಡಿಕೆಗಳಾದ ಕೇಂದ್ರ ಒಬಿಸಿ ರಾಜ್ಯ ಸರ್ಕಾರದ ಪ್ರವರ್ಗ ಒಂದರ ಮೀಸಲಾತಿ ಹಾಗೂ ಪ್ರತ್ಯೇಕ ಅಭಿವೃದ್ಧಿ ನಿಗಮ ಬೇಡಿಕೆಗಳನ್ನು ಸಕಾಲದಲ್ಲಿ ಸರ್ಕಾರ ಕೊಡಬೇಕು ಎಂಬುದಾಗಿ ರಾಜ್ಯ ಕುಂಚಿಟಿಗರ ಒಕ್ಕೂಟದ ಅಧ್ಯಕ್ಷರಾದ ಕಸವನಹಳ್ಳಿ ರಮೇಶ್ ಹೇಳಿದರು.
ತಾಲ್ಲೂಕು ಕಳವಿಭಾಗಿ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಕುಂಚಿಟಿಗ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಗೆ ಸನ್ಮಾನಿಸಿ ನಂತರ ಅವರು ಮಾತನಾಡಿದರು.
ಕೇಂದ್ರ ಒಬಿಸಿ ರಾಜ್ಯ ಸರ್ಕಾರದ ಪ್ರವರ್ಗ ಒಂದರ ಮೀಸಲಾತಿ ಹಾಗೂ ಪ್ರತ್ಯೇಕ ಅಭಿವೃದ್ಧಿ ನಿಗಮ ಬೇಡಿಕೆಗಳನ್ನು ಸಕಾಲದಲ್ಲಿ ಸರ್ಕಾರ ಕೊಡದಿದ್ದರೆ ಮುಂದಿನ ದಿನಗಳಲ್ಲಿ ಪಾದಯಾತ್ರೆ ಚಳುವಳಿ ಇನ್ನಿತರ ಹೋರಾಟಗಳ ಮುಖಾಂತರ ನಮ್ಮ ಹಕ್ಕುಗಳನ್ನು ಪಡೆದುಕೊಳ್ಳುವುದು ಅನಿವಾರ್ಯವಾಗುತ್ತದೆ ಎಂಬುದಾಗಿ ಅವರು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹುಲಿರಂಗನಾಥ್ ಮಾತನಾಡಿ, ಕುಂಚಿಟಿಗ ಸಮಾಜದ ಸಮುದಾಯ ಭವನ ಕಟ್ಟಲು ಸಮಾಜದ ಹಿರಿಯಮುಖಂಡರಾದ ಎಂ.ಜಯಣ್ಣನವರು ನಗರಕ್ಕೆ ಹತ್ತಿರವಿರುವ ತಮ್ಮ ಜಮೀನಿನಲ್ಲಿ ಸ್ವಲ್ಪಭಾಗವನ್ನು ಕುಂಚಿಟಿಗ ಸಮಾಜಕ್ಕೆ ದಾನವಾಗಿ ಕೊಡಬೇಕು ಎಂಬುದಾಗಿ ಅವರು ಈ ಸಂದರ್ಭದಲ್ಲಿ ಮನವಿ ಮಾಡಿದರು.
ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷರಾದ ಎಂ.ಜಯಣ್ಣನವರು ಮಾತನಾಡಿ, ಕುಂಚಿಟಿಗ ಸಮಾಜದ ಬೇಡಿಕೆಗಳನ್ನು ಪಡೆಯಲು ನಡೆಸುವ ಹೋರಾಟಗಳಿಗೆ ನಾನು ಸದಾ ಬೆಂಬಲ ಕೊಡುತ್ತೇನೆ ಎಂದರಲ್ಲದೆ, ಕುಂಚಿಟಿಗ ಸಮಾಜಕ್ಕೆ ಜಮೀನು ಕೊಡುವ ಬೇಡಿಕೆಯನ್ನು ಮುಂದಿನದಿನಗಳಲ್ಲಿ ಪರಿಶೀಲಿಸುವುದಾಗಿ ಭರವಸೆ ನೀಡಿದರು.
ಬಿಬಿಎಂಪಿ ಉಪ ಆಯುಕ್ತರು ಹಾಗೂ ಸಮಾಜದ ಮುಖಂಡರಾದ ಬೇತುರು ಪಾಳ್ಯ ರಾಜು ಮಾತನಾಡಿ, ನಮ್ಮ ಸಮಾಜದ ಗ್ರಾಮ ಪಂಚಾಯತಿ ಅಧ್ಯಕ್ಷರುಗಳು ಅವರ ಅವಧಿಗಳಲ್ಲಿ ಸಾರ್ವಜನಿಕರಿಗೆ ಹೆಚ್ಚಿನ ಕೆಲಸ ಮಾಡಿ ಕೊಡುವ ಮೂಲಕ ಮುಂದಿನ ದಿನಗಳಲ್ಲಿ ಉನ್ನತ ರಾಜಕೀಯ ಅವಕಾಶಗಳು ಸಿಗುವಂತಾಹಬೇಕು ಎಂಬುದಾಗಿ ಹೇಳಿದರು.
ಅಖಿಲ ಕುಂಚಿಟಿಗ ಮಹಾಮಂಡಳಿ ಅಧ್ಯಕ್ಷರಾದ ರಂಗಹನುಮಯ್ಯ ಮಾತನಾಡಿ, ರಾಜ್ಯದ ಮೂಲೆಮೂಲೆಗಳನ್ನು ಸುತ್ತಿ ಕುಂಚಿಟಿಗರ ಸಮಾಜವನ್ನು ಸಂಘಟಿಸೋಣ ಹಾಗೂ ಈ ಕಾರ್ಯಕ್ಕೆ ಸಮಾಜದ ಪ್ರತಿಯೊಬ್ಬರೂ ನಮ್ಮೊಂದಿಗೆ ಕೈಜೋಡಿಸಬೇಕು ಎಂಬುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಶಿರಾ ಕುಂಚಿಟಿಗರ ಸಂಘದ ಗೋವಿಂದರಾಜು, ಚಿಗಳಿಕಟ್ಟೆ ಕಾಂತರಾಜ್, ಇನ್ನಿತರರು ಮಾತನಾಡಿದರು. ಈ ಕಾರ್ಯಕ್ರಮದಲ್ಲಿ 9 ಜನಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಒಬ್ಬರು ಉಪಾಧ್ಯಕ್ಷರು ಹಾಗೂ ಒಬ್ಬ ಕಲಾವಿದರನ್ನು ಸನ್ಮಾನಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಕುಂಚಿಟಿಗರ ಕ್ಷೇಮಾಭಿವೃದ್ಧಿ ಸಂಘದ ಪೆಪ್ಸಿ ಹನುಮಂತರಾಯ, ಮಲ್ಲಪ್ಪನಹಳ್ಳಿ ಜ್ಯೋಗೇಶ್, ಎಂ.ಗಿರಿಸ್ವಾಮಿ, ದೇವರಕೊಟ್ಟ ರಂಗಸ್ವಾಮಿ, ಕ್ಯಾದಿಗುಂಟೆ ಯಶೋಧರ, ಕೆ.ಜಿ.ಎಚ್.ಗೌಡ, ನಿಂಗರಾಜು, ತೇಜಪ್ಪ, 500ಕ್ಕೂ ಹೆಚ್ಚುಜನ ಕುಲಬಾಂಧವರು ಭಾಗವಹಿಸಿದ್ದರು. ನಗರಸಭಾ ಸದಸ್ಯ ಪಾಂಡುರಂಗ ವಿಠ್ಠಲ್ ಸನ್ಮಾನ ಕಾರ್ಯಕ್ರಮ ನಡೆಸಿಕೊಟ್ಟರು. ಪ್ರಧಾನ ಕಾರ್ಯದರ್ಶಿ ಕುಬೇರಪ್ಪ ಸ್ವಾಗತ ಮಾಡಿದರು. ನಿರ್ದೇಶಕರಾದ ದಿಂಡಾವರ ಚಂದ್ರಗಿರಿ ಕಾರ್ಯಕ್ರಮ ನಿರೂಪಣೆ ಮಾಡಿದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page