ಹಿರಿಯೂರು.
ಕುಂಚಿಟಿಗರ ಕೇಂದ್ರ OBC ಮೀಸಲಾತಿಗೆ ಕೊಡಲಿಪೆಟ್ಟು ನೀಡಿ ಭಾವನಾತ್ಮಕ ಬ್ಲಾಕ್ಮೇಲ್ ಮಾಡಿದವರಿಗೆ ಸಿಡಿದೆದ್ದ ಸ್ವಾಭಿಮಾನಿ ಕುಂಚಿಟಿಗರು ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿದ್ದಾರೆ ಎಂದು ಕುಂಚಿಟಿಗ ಕುಲಶಾಸ್ತ್ರ ಅಧ್ಯಯನಕಾರ ಎಸ್ ವಿ ರಂಗನಾಥ್ ತಿಳಿಸಿದ್ದಾರೆ.
ರಾಜಕೀಯ ಇಚ್ಛಾಶಕ್ತಿ ಕೊರತೆಯಿಂದಾಗಿ ಕುಂಚಿಟಿಗರಿಗೆ ಕೇಂದ್ರ OBC ಮೀಸಲಾತಿ ಕೈ ತಪ್ಪಿಹೋಗಿ ಕಳೆದ 30 ವರ್ಷಗಳಿಂದ ಶಿಕ್ಷಣ ಮತ್ತು ಉದ್ಯೋಗದಲ್ಲಿ ತುಂಬಲಾರದ ನಷ್ಟ ಉಂಟಾಗಿದೆ. ಆದಾಗ್ಯೂ ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು ಕುಂಚಿಟಿಗರ OBC ಮೀಸಲಾತಿ ವಿಷಯವನ್ನು ಜೀವಂತವಾಗಿಟ್ಟು 3 ದಶಕಗಳ ಕಾಲ ಭಾವನಾತ್ಮಕ ಬ್ಲಾಕ್ಮೇಲ್ ಮಾಡಿ ಮೀಸಲಾತಿ ತಪ್ಪಿಸಿದ್ದಾರೆ.
ರಾಜ್ಯದ 18 ಜಿಲ್ಲೆ 46 ತಾಲ್ಲೋಕುಗಳಲ್ಲಿ ನೆಲೆಸಿರುವ 25 ಲಕ್ಷಕ್ಕೂ ಅತ್ಯಧಿಕ ಸಂಖ್ಯೆಯಲ್ಲಿರುವ ಕುಂಚಿಟಿಗರು ನಿರ್ಣಾಯಕ ಮತದಾರರಿರುವ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಸೋಲು ಕಂಡಿದೆ. ನಿಷ್ಠಾವಂತ ಕುಂಚಿಟಿಗರಿಗೆ ಎಂ ಪಿ ಟಿಕೆಟ್ ಕೊಡಲಿಲ್ಲ,ರಾಜ್ಯದಲ್ಲಿ ಮಂತ್ರಿ ಸ್ಥಾನ ಕೊಡಲಿಲ್ಲ,ಕುಲಶಾಸ್ತ್ರ ಅಧ್ಯಯನ ವರದಿಯಲ್ಲಿ ಇಲ್ಲದೆ ಇರುವ ಶಬ್ದ ಸೇರಿಸಿ ಗ್ರಾಮೀಣ ಕುಂಚಿಟಿಗರಿಗೆ ಮಾತ್ರ ಕೇಂದ್ರ ಓ ಬಿ ಸಿ ಮೀಸಲಾತಿ ಕೊಡುವಂತೆ ಶಿಫಾರಸು ಮಾಡಿ ಕುಂಚಿಟಿಗರನ್ನು ಗ್ರಾಮೀಣ ಮತ್ತು ನಗರ ಕುಂಚಿಟಿಗ ಎಂದು ಇಬ್ಬಾಗ ಮಾಡಿದ್ದಾರೆ,ಜಾತಿ ಜನಗಣತಿ ವರದಿಯಲ್ಲಿ ಕುಂಚಿಟಿಗ ಜಾತಿಯನ್ನು ಒಕ್ಕಲಿಗ ಜಾತಿಗೆ ವಿಲೀನ ಮಾಡಿದ್ದಾರೆ. ಇದೆಲ್ಲವನ್ನು ಪರಿಗಣಿಸಿ
ಕುಂಚಿಟಿಗರು ಹೆಚ್ಚು ಮಾತನಾಡದೆ,ಚುನಾವಣೆಯಲ್ಲಿ ತಮ್ಮ ಶಕ್ತಿ ಏನೆಂದು ತೋರಿಸಿದ್ದಾರೆ,ಪಕ್ಷದ ವರಿಷ್ಠರು ಆತ್ಮಾವಲೋಕನ ಮಾಡಿಕೊಂಡು ಮುಂಬರುವ ದಿನಗಳಲ್ಲಿ ಕುಂಚಿಟಿಗರಿಗೆ ರಾಜಕೀಯ ಪ್ರಾತಿನಿದ್ಯ ಹಾಗೂ ಶೈಕ್ಷಣಿಕ ಮತ್ತು ಉದ್ಯೋಗದಲ್ಲಿ ಮೀಸಲಾತಿ ಕೊಡಬೇಕೆಂದು ಮನವಿ ಮಾಡಿದ್ದಾರೆ. ಶಿಕಾರಿಪುರದಲ್ಲಿ ನಡೆದ ಕುಂಚಿಟಿಗರ ಓ ಬಿ ಸಿ ಮೀಸಲಾತಿ ಹಕ್ಕೊತ್ತಾಯ ಸಮಾವೇಶದಲ್ಲಿ ಮಾಜೀ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ,ಬಿ ವೈ ವಿಜೆಯೇಂದ್ರ,ಬಿ ವೈ ರಾಘವೇಂದ್ರ ಮೂರು ಜನ ಕೊಟ್ಟ ಮಾತಿನಂತೆ ಕುಂಚಿಟಿಗ ಸಮಾಜದ ನಂಬಿಕೆ ಉಳಿಸಿಕೊಳ್ಳ ಬೇಕು. ರಾಜ್ಯ ಸರ್ಕಾರದ ಅವೈಜ್ಞಾನಿಕ ಪ್ರಸ್ತಾವನೆಯನ್ನು ಪುನರ್ ಪರಿಶೀಲನೆ ನಡೆಸಿ ಗ್ರಾಮೀಣ ಮತ್ತು ನಗರ ಕುಂಚಿಟಿಗ ಎಂದು ತಾರತಮ್ಯ ಮಾಡದೆ ಸಮಸ್ಥ ಕುಂಚಿಟಿಗರಿಗೆ ಕೇಂದ್ರ ಓ ಬಿ ಸಿ ಮೀಸಲಾತಿ ಕೊಡಿಸಿಕೊಡಬೇಕೆಂದು ಎಸ್ ವಿ ರಂಗನಾಥ್ ಮನವಿ ಮಾಡಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments