ಹಿರಿಯೂರು : ನಗರದ ಪ್ರವಾಸಿ ಮಂದಿರದಲ್ಲಿ ಕುಂಚಿಟಿಗರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಹುಲಿ ರಂಗನಾಥ ಅಧ್ಯಕ್ಷತೆಯಲ್ಲಿ ಸಭೆ ಸೇರಿ ಕುಂಚಿಟಿಗ ಗ್ರಾ ಪಂ ಅಧ್ಯಕ್ಷ ಉಪಾಧ್ಯಕ್ಷರಿಗೆ ಸನ್ಮಾನ ಸಮಾರಂಭ ಏರ್ಪಡಿಸಲು ತೀರ್ಮಾನಿಸಲಾಯಿತು. ಇದೆ ಸಂದರ್ಭದಲ್ಲಿ ಉಡುವಳ್ಳಿ ಗ್ರಾಮ ಪಂಚಾಯಿತಿಗೆ ಅಧ್ಯಕ್ಷನನ್ನಾಗಿ ಹುಲಿ ರಂಗನಾಥ್ ಅವರನ್ನು ಆಯ್ಕೆ ಮಾಡಿದ ಗ್ರಾಮ ಪಂಚಾಯಿತಿ ಸರ್ವ ಸದಸ್ಯರಿಗೆ ಹಾಗೂ ಗ್ರಾಮಸ್ಥರಿಗೆ ಅಭಿನಂದನೆ ಸಲ್ಲಿಸಲಾಯಿತು.ಹಾಗೂ ದಿನಾಂಕ 26-.08.-2023 ನೇ ಶನಿವಾರ ಹಿರಿಯೂರು ತಾಲ್ಲೋಕು ಕಳವಿಬಾಗಿ ರಂಗನಾಥ ಸ್ವಾಮಿ ದೇವಸ್ಥಾನದಲ್ಲಿ ಬೆಳಗ್ಗೆ 11:30 ಕ್ಕೆ ಕುಂಚಿಟಿಗರ ಕ್ಷೇಮಾಭಿವೃದ್ಧಿ ಸಂಘದಿಂದ ತಾಲ್ಲೋಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಕುಂಚಿಟಿಗ ಸಮಾಜದಿಂದ ಅಧ್ಯಕ್ಷ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ 9 ಜನರಿಗೆ ಸನ್ಮಾನ ಸಮಾರಂಭ ಏರ್ಪಡಿಸಲಾಗಿದೆ ಈ ಕಾರ್ಯಕ್ರಮಕ್ಕೆ ಸಮಾಜದ ಮುಖಂಡರುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಹುಲಿ ರಂಗನಾಥ್ ಕಳಕಳಿಯ ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಕುಂಚಿಟಿಗರ ಒಕ್ಕೂಟದ ರಾಜ್ಯಾಧ್ಯಕ್ಷ ಕಸವನಹಳ್ಳಿ ರಮೇಶ್. ಪ್ರಧಾನ ಕಾರ್ಯದರ್ಶಿ ವಿ ಕುಬೇರಪ್ಪ, ಗೌರವಾಧ್ಯಕ್ಷ ಎಂ ಗಿರಿಸ್ವಾಮಿ, ಅಬ್ಬಿನೊಳೆ ಗ್ರಾ ಪಂ ಉಪಾಧ್ಯಕ್ಷ ದೇವರಕೊಟ್ಟ ರಂಗಸ್ವಾಮಿ, ಉಪಾಧ್ಯಕ್ಷ ಜೋಗೇಶ್ ,ಪೆಪ್ಸಿಹನುಮಂತರಾಯ, ಗ್ರಾ ಪಂ ಸದಸ್ಯರಾದ ಶಶಿಕಲಾ, ಎಂಆರ್ಟಿ ಗೌಡ,ಚಿಲ್ಲಹಳ್ಳಿ ಜೋಗೇಶ್ ,ಪರಮೇಶ್ ಇತರರು ಉಪಸ್ಥಿತರಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments