ಕುಡಿಯುವನೀರಿನ ಸಮಸ್ಯೆ ಬಗೆಹರಿಸಲು ಅಧಿಕಾರಿಗಳ ವಾಟ್ಸ್ ಆಫ್ ಗ್ರೂಫ್ ಹಾಗೂ ಸಹಾಯವಾಣಿ ತೆರೆಯುವಂತೆ ಅಧಿಕಾರಿಗಳಿಗೆ ಶಾಸಕ ಟಿ.ರಘುಮೂರ್ತಿ ಸೂಚನೆ.

by | 18/01/24 | ಸುದ್ದಿ


ಚಳ್ಳಕೆರೆ ಜನಧ್ವನಿ ವಾರ್ತೆ ಜ.18. ಮಳೆ ಬಾರದೆ ಇರುವುದರಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ಅಗತ್ಯ ಮುಂಜಾಗೃತ ಕ್ರಮ ಕೈಗೊಳ್ಳುವಂತೆ ಶಾಸಕ ಟಿ.ರಘುಮೂರ್ತಿ ತಾಕೀತು ಮಾಡಿದರು.
ನಗರದ ತಾಲೂಕು ಪಂಚಾಯತ್ ಕಚೇರ ಸಭಾಂಗಣದಲ್ಲಿ ತಾಲೂಕು ಮಟ್ಟ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಹಾಗೂ ಗ್ರಾಪಂ ಪಿಡಿಒಗಳಿಗೆ ಆಯೋಜಿಸಿದ್ದ ತ್ರೈಮಾಸಿಕೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಯಾವುದೇ ಒತ್ತಡಕ್ಕೆ ಮಣಣಿಯದೆ ಗ್ರಾಮೀಣ ಜನರ ಸಮಸ್ಯೆಗಳನ್ನು ಅರಿತು ಕತರ್ವವ್ಯ ನಿರ್ವಹಿಸ ಬೇಕು. ಕುಡಿಯುವ ನೀರಿನ ಸಮಸ್ಯೆಗಳ ಬಗೆಹರಿಸಲು ಪಿಡಿಒ ಹಾಗೂ ಅಧಿಕಾರಿಗಳ ವಾಟ್ಸ್ ಆಪ್ ಗ್ರೂಪ್ ರಚನೆ ಮಾಡಬೇಕು. ಕುಡಿಯುವ ನೀರಿನ ದೂರುಗಳಿಗೆ ಸಹಾಯವಾಣಿ ತೆರೆಯ ಬೇಕು. ಕುಡಿಯುವ ನೀರು ಸರಬರಾಜು ಮಾಡುವ ಟ್ಯಾಂಕರ್ ಗಳ ಅಗತ್ಯ ದಾಖಲೆಗಳನ್ನು ನಿರ್ವಹಿಸ ಬೇಕು ಸರಬರಾಜು ಮಾಡುವ ಮೊದಲು ಅನುಮೋದನೆ ಪಡೆಯ ಬೇಕು, ಹೋಬಳಿಗೊಂದು ಗೋಲೆಯನ್ನು ಅತಿ ತುರ್ತಾಗಿ ತೆರಬೇಕು, ಗ್ರಾಮೀಣ ರಸ್ತೆಗಳಿಗೆ ಬೆಳೆದಿರುವ ಗಿಡಗೆಂಟೆಗಳನ್ನು ತೆರವುಗೊಳಿಸಬೇಕು, ರಸ್ತೆಯಲ್ಲಿ ಬಿದ್ದ ಗುಂಡಿಗಳನ್ನು ಮುಚ್ಚಬೇಕು.


ಬರಗಾಲ ವಿರುವುದರಿಂದ ನರೇಗಾ ಯೋಜನೆಯಡಿಯಲ್ಲಿ ದುಡಿಯವ ಕೈಗಳಿಗೆ ಕೆಲಸ ನೀಡ ನೀಡ ಬೇಕು. ಬರಗಾಲವಿರುದರಿಂದ ಜನ ಜಾನುವಾರುಗಳಿಗೆ ಕುಡಿಯುವ ನೀರು ಮೇವಿನ ಕೊರತೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳ ಬೇಕು. ಸರಕಾರಿ ಶಾಕೆಗಳ ಶಿಥಿಲವಾದ ಹಾಗೂ ದುರಸ್ಥಿ ಹೊಸ ಕಟ್ಟಡಗಳ ಪಟ್ಟಿ ಮಾಡಬೇಕು ಎಂದು ಶಾಸಕ ಟಿ.ರಘುಮೂರ್ತಿ ಅಧಿಕಾರಿಗಳಿಗೆ ಸೂಚನೆ ನೀಡಿದರು
ಕುಡಿಯುವ ನೀರು ಮತ್ತು ನೈಮರ್ಲ ಇಲಾಖೆ ಎಇಇ ದಯಾನಂದ ಮಾತನಾಡಿ ಚಳ್ಳಕೆರೆ 7 ಹಳ್ಳಿ, ಮೊಳಕಾಲ್ಮೂರು ಕ್ಷೇತ್ರದಲ್ಲಿ ೨೫ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ, ಈಗಾಗಲೇ ಐದು ಹಳ್ಳಿಗಳಲ್ಲಿ ಬೋರ್ ವೆಲ್ ಕೊರೆಸಿ, ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ, ಗ್ರಾಪಂ ಅಧಿಕಾರಿಗಳು ಕುಡಿಯುವ ನೀರಿನ ಸಮಸ್ಯೆಯಿರುವ ಹಳ್ಳಿಗಳನ್ನು ಇಂದು ತಿಳಿಸಿದ್ದು, ಈ ಹಳ್ಳಿಗಳ ವರದಿ ಮೇಲ್ದಾಧಿಕಾರಿಗಳಿಗೆ ಸಲ್ಲಿಸಿ, ಬೋರ್ ವೆಲ್ ಕೊರೆಸಲು ಕ್ರಮ ತೆಗೆದುಕೊಂಡು, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಸಭೆಗೆ ಮಾಹಿತಿ ನೀಡಿದರು.
ತಾಲ್ಲೂಕಿನಲ್ಲಿರುವ ವಿದ್ಯಾರ್ಥಿ ನಿಲಯಗಳಲ್ಲಿರುವ ಶೌಚಾಲಯಗಳು ಸ್ವಚ್ಚತೆಯಿಂದ ಇರಬೇಕು. ಗ್ರಾಮೀಣ ಪ್ರದೇಶಗಳಿಂದ ಪೋಷಕರನ್ನು ಬಿಟ್ಟು ಬಂದು ವಸತಿ ನಿಲಯಗಳಲ್ಲಿ ಬಂದು ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ಯಾವುದೇ ಕೊರತೆಯಾಗದಂತೆ ಶುಚಿ ಮತ್ತು ರುಚಿದ ಊಟ ನೀಡಬೇಕು. ವಿದ್ಯಾರ್ಥಿ ನಿಲಯಗಳಲ್ಲಿ ಮೂಲಭೂತ ಸೌಲಭ್ಯಗಳ ಕೊರೆತೆಯಾದಂತೆ ನೋಡಿಕೊಳ್ಳಬೇಕು ಎಂದು ಸಮಾಜ ಕಲ್ಯಾಣ, ಬಿಸಿಎಂ, ಪರಿಶಿಷ್ಟ ಪಂಡಗಳ ಇಲಾಖೆ ಅಧಿಕಾರಿಗಳಿಗೆ ಶಾಸಕರು ಖಡಕ್ಕಾಗಿ ಎಚ್ಚರಿಕೆ ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್. ಸುರೇಶ್ ಮಾತನಾಡಿ ತಾಲ್ಲೂಕಿನಲ್ಲಿ ಶಿಕ್ಷಕರ ಕೊರತೆಯಿಲ್ಲ, ಹೊಸದಾಗಿ ಜಿಟಿಪಿಯಲ್ಲಿ 87 ಶಿಕ್ಷಕರು ನೇಮಕವಾಗಿದ್ದಾರೆ, ವರ್ಗಾವಣೆಯಾಗು 56 ಶಿಕ್ಷಕರು ಬಂದಿದ್ದಾರೆ, ಜನ ಅತಿಥಿ ಶಿಕ್ಷಕರು ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಾರೆ ಸಭೆಯ ಗಮನ ಸೆಳೆದಾಗ ಶಾಸಕರು ಪ್ರತಿಕ್ರೀಯಿಸಿ ತಾಲ್ಲೂಕಿನಲ್ಲಿ ಎಷ್ಟು ಶಾಲೆ ಕೊಠಡಿಗಳು ಮಳೆಯಿಂದ ಸೊರಿಕೆಯಾಗುತ್ತಿವೆ. ಎಷ್ಟು ಕೊಠಡಿಗಳು ದುರಸ್ಥಿಯಾಗಬೇಕು ಎಂದು ಮಾಹಿತಿ ಕೊಡಿ ಪ್ರಶ್ನೆ ಮಾಡಿದರು. ಇದಕ್ಕೆ ಪ್ರತಿಕ್ರೀಯಿಸಿ ಬಿಇಓ 164 ಕೊಠಡಿಗಳು ದುರಸ್ಥಿಯಾಗಬೇಕಿದೆ ತಿಳಿಸಿದರು.

ಪಂಚಾಯತ್ ರಾಜ್ ಇಲಾಖೆ ಎಇಇ ಕಾವ್ಯ ಮಾತನಾಡಿ ಸರ್ಕಾರದಿಂದ ವಿವಿಧ 108 ಕಾಮಗಾರಿಗಳಿಗಾಗಿ 181 ಲಕ್ಷ ರೂ. ಮಂಜೂರಾಗಿದೆ. ಇದರಲ್ಲಿ 71 ಕಾಮಗಾರಿಗಳ ಪಟ್ಟಿಯನ್ನು ಅನುಮೋದನೆಗೆ ಸಲ್ಲಿಸಲಾಗಿದೆ. ಇದರಲ್ಲಿ 51 ಜಂಗಲ್ ಕಟಿಂಗ್ ಕಾಮಗಾರಿಗೆ ಸಲ್ಲಿಸಲಾಗಿದೆ ಎಂದು ಸಭೆಯಲ್ಲಿ ತಿಳಿಸಿದರು.

ಶಾಸಕರು ಮಾತನಾಡಿ ರಸ್ತೆ ಪಕ್ಕದಲ್ಲಿ ಬೆಳೆದಂತ ಗಿಡಗಳು ದುರಸ್ಥಿಪಡಿಸುವಾಗ ಒಂದು ಮುಳ್ಳಿನ ಗಿಡಗಳನ್ನು ತೆರವು ಮಾಡಬೇಕು. ರಸ್ತೆಯಲ್ಲಿ ಬಿದ್ದ ಗುಂಡಿಗಳನ್ನು ಮುಚ್ಚಿಸಬೇಕು. ರಸ್ತೆ ಪಕ್ಕದಲ್ಲಿ ಗುಂಡಿಗಳು, ರಸ್ತೆಗೆ ಅಡ್ಡವಾಗಿ ಪೊದೆಗಳು ಅಬ್ಬಿಕೊಂಡರೆ ಅಪಘಾತಗಳು ಸಂಭವಿಸುತ್ತವೆ ಎಂದರು.
ಬರಗಾಲವಿರುವುದರಿಂದ ನರೇಗಾ ಯೋಜನೆಡಯಿಲ್ಲಿ ದುಡಿಯುವ ಕೈಗಳಿಗೆ ಕೆಲಸ ನೀಡಬೇಕು ಹೋಬಳಿಗೊಂದು ಗೋಶಾಲೆ ತುರ್ತಾಗಿ ತೆರೆಯಬೇಕು ಜಾನುವಾರುಗಳಿಗೆ ನೀರು ನೆರಳಿನ ವ್ಯವಸ್ಥೆ ಕಲ್ಪಿಸ ಬೇಕು. ಎಂದು ತಿಳಿಸಿದರು.
ಈ ವೇಳೆ ತಾಲ್ಲೂಕು ಪಂಚಾಯತ್ ಆಡಳಿತಾಧಿಕಾರಿ ಕೃಷಿ ಇಲಾಖೆ ಜಿಲ್ಲಾ ಜಂಟಿ ನಿರ್ದೇಶಕ ಮಂಜುನಾಥ, ತಹಶೀಲ್ದಾರ್ ರೇಹಾನ್ ಪಾಷಾ, ತಾಲ್ಲೂಕು ಪಂಚಾಯತ್ ಇಓ ಶಶಿಧರ್ ಹಾಗು ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page