ಕುದಾಪುರ ಕೆನರಾ ಬ್ಯಾಂಕ್ ಶಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಾಗರಾಜ್ ರವರ ವರ್ಗಾವಣೆ ರದ್ದು ಮಾಡುವಂತೆ ಗ್ರಾಹಕರು ಒತ್ತಾಯ.

by | 01/01/24 | ಪ್ರತಿಭಟನೆ

ನಾಯಕನಹಟ್ಟಿ::ಜ.1. ಸಮೀಪದ ಕುದಾಪುರ ಕೆನರಾ ಬ್ಯಾಂಕ್ ಶಾಖೆಯಲ್ಲಿ ಕಳೆದ ಹತ್ತು ವರ್ಷದಿಂದ ಕಾರ್ಯ ನಿರ್ವಹಿಸುತ್ತಿದ್ದ ನಾಗರಾಜ್ ರವರನ್ನು ವರ್ಗಾವಣೆ ಮಾಡಿರುವುದು ಕಂಡು ಗ್ರಾಹಕರು ಬೇಸರವನ್ನು ವ್ಯಕ್ತಪಡಿಸಿದ್ದರು.


ಕುದಾಪುರ ಕೆನರಾ ಬ್ಯಾಂಕ್ ಶಾಖೆಯಲ್ಲಿ ಕಳೆದ ಹತ್ತು ವರ್ಷದ ಸೇವೆ ಗ್ರಾಮೀಣ ಪ್ರದೇಶದ ಜನಸಾಮಾನ್ಯರಿಗೆ ಸೌಲಭ್ಯವನ್ನು ಕೊಡಿಸುವಲ್ಲಿ ನಾಗರಾಜ್ ರವರು ಮುಂಚೂಣಿಯಲ್ಲಿದ್ದರು.
ಇಂತಹ ಸಿಬ್ಬಂದಿಯನ್ನು ನಾಯಕನಹಟ್ಟಿ ಕೆನರಾ ಬ್ಯಾಂಕಿಗೆ ವರ್ಗಾವಣೆ ಮಾಡಿರುವುದು ತುಂಬಾ ನೋವಿನ ಸಂಗತಿ ಆದ್ದರಿಂದ ನಾಗರಾಜ್ ರವರು ಈ ಭಾಗದ ರೈತರಿಗೆ ವೃದ್ಧರಿಗೆ ಜಲಸಾಮಾನ್ಯರಿಗೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕೊಡಿಸುವಲ್ಲಿ ಮತ್ತು ಪ್ರತಿದಿನ ಜನಸಾಮಾನ್ಯರ ಕೈಗೆ ಸಿಗುವ ನಾಗರಾಜ್ ರವರನ್ನು ವರ್ಗಾವಣೆ ಮಾಡಬಾರದು ಅವರನ್ನು ಇಲ್ಲಿ ಕಾರ್ಯ ನಿರ್ವಹಿಸಲು ಅನುವು ಮಾಡಿಕೊಡಬೇಕೆಂದು ಕುದಾಪುರ ಕೆನರಾ ಬ್ಯಾಂಕ್ ಶಾಖೆಯ ವ್ಯವಸ್ಥಾಪಕರಿಗೆ ಗ್ರಾಹಕರು ಮನವಿಯನ್ನು ನೀಡಿದರು..

ಇದೆ ವೇಳೆ ಗ್ರಾಹಕರಾದ ಮರಿಪಾಲಯ್ಯ ಮಾತನಾಡಿ ಕುದಾಪುರ ಕೆನರಾ ಬ್ಯಾಂಕ್ ಶಾಖೆಯಲ್ಲಿ ಸಿಬ್ಬಂದಿಗಳ ಕೊರತೆ ಇದೆ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ದಾವಣಗೆರೆಯವರು ಏಕಾಏಕಿ ನಾಗರಾಜರವರನ್ನ ವರ್ಗಾವಣೆ ಮಾಡಿರುವುದು ಈ ಭಾಗದ ಗ್ರಾಹಕರಿಗೆ ತುಂಬಾ ನೋವಾಗಿದೆ ನಾಗರಾಜ್ ರವರು ಸ್ಥಳೀಯವಾಗಿ ಸಾರ್ವಜನಿಕ ಜನರಿಗೆ ಸೂಕ್ತ ರೀತಿಯಲ್ಲಿ ಸ್ಪಂದನೆ ಮಾಡುತ್ತಿದ್ದರು ಅಸಿಸ್ಟೆಂಟ್ ಜನರಲ್ ಮೆನೇಜರ್ ದಾವಣಗೆರೆ ಇವರು ನಾಗರಾಜ್ ರವರ ವರ್ಗಾವಣೆ ರದ್ದುಪಡಿಸಿ ಇಲ್ಲೇ ಕಾರ್ಯ ನಿರ್ವಹಿಸಲು ಅನುವು ಮಾಡಿಕೊಡಬೇಕೆಂದು ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಕುದಾಪುರ ಕೆನರಾ ಬ್ಯಾಂಕ್ ಶಾಖೆಯ ಮ್ಯಾನೇಜರ್ ಸಾಗರ್ ಮಾತನಾಡಿ ನಾಗರಾಜ್ ರವರು ಕಳೆದ 10 ವರ್ಷಗಳಿಂದ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದರು ನಮ್ಮ ಮೇಲಾಧಿಕಾರಿಗಳು ಗಮನಕ್ಕೆ ತಂದು ಮನವಿಯನ್ನ ನೀಡುವುದಾಗಿ ಭರವಸೆಯನ್ನು ನೀಡಿದರು.

ಇದೇ ಸಂದರ್ಭದಲ್ಲಿ ಕುದಾಪುರ ಮಂಜಣ್ಣ ,ತಮ್ಮಯ್ಯ ,ಗೌಡ್ರು ನಾಗರಾಜ್ ,ಕೆ ಜಿ ಓಬಯ್ಯ, ಮರಿಪಾಲಯ್ಯ, ಶ್ರೀನಿವಾಸ್ ಗಿಡ್ಡಾಪುರ ,ವಿಜಯ್, ಜಿ ಬೋರಯ್ಯ, ಸೂರ್ಯಪ್ರಕಾಶ್, ಎನ್ ಬೋರಯ್ಯ, ಮಹಾಂತೇಶ್ ವರವು, ಗೋಪಾಲ್,ಇದ್ದರು

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page