ಕುದಾಪುರ ಗ್ರಾಮದಲ್ಲಿ ಶ್ರೀ ಬೋರಲಿಂಗೇಶ್ವರ ಸ್ವಾಮಿ ಗುಗ್ಗರಿ ಹಬ್ಬ ಮ್ಯಾಸ ಬೇಡ ಬುಡಕಟ್ಟು ಸಂಸ್ಕೃತಿ ಸಾರುವ ಗುಗ್ಗರಿ ಹಬ್ಬವು ಅದ್ದೂರಿಯಾಗಿ ನಡೆಯಿತು.

by | 26/02/24 | ಸುದ್ದಿ


ನಾಯಕನಹಟ್ಟಿ:: ಅಧುಕತೆಯ ಭರಾಟೆಯ ನಡುವೆಯೂ ಮ್ಯಾಸಬೇಡ ಬುಡಕಟ್ಟು ಜನರು ಆಚರಿಸುವ ಸಂಪ್ರದಾಯಗಳು ಇಂದಿಗೂ ಕೂಡ ಶ್ರೀಮಂತವಾಗಿರುವುದು ಅತ್ಯಂತ ಹೆಮ್ಮೆಯ ವಿಚಾರವಾಗಿದೆ.

ಸಮೀಪದ ಎನ್ ಮಹದೇವಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕುದಾಪುರ ಗ್ರಾಮದ ಆರಾಧ್ಯ ದೈವ ಶ್ರೀ ಉದ್ಬವಲಿಂಗ ಶ್ರೀ ಚಿಂತಗುಟ್ಲು ಬೋರಲಿಂಗೇಶ್ವರ ಸ್ವಾಮಿ. ಗುಗ್ಗರಿ ಹಬ್ಬ ಜಾತ್ರಾ ಮಹೋತ್ಸವ ದಿನಾಂಕ 25.02.2024ನೇ ಭಾನುವಾರ ಬೆಳಿಗ್ಗೆ 8:00 ಗಂಟೆಗೆ ಶ್ರೀ ಸ್ವಾಮಿಗೆ ಗಂಗಾ ಪೂಜೆ ಮತ್ತು ರುದ್ರಾಭಿಷೇಕ ರಾತ್ರಿ ಎಂಟು ಗಂಟೆಗೆ ಕಾಸು ಮತ್ತು ಮೀಸಲು ಶ್ರೀ ಸ್ವಾಮಿಗೆ ಅರ್ಪಿಸುವುದು ರಾತ್ರಿ 11:30 ಕ್ಕೆ ಶ್ರೀ ಸ್ವಾಮಿಯೇ ಶಿವಪೂಜೆ ನಡೆಸಲಾಯಿತು.
ರಾತ್ರಿ ಒಂದು ಗಂಟೆಯಿಂದ ನಾಲ್ಕು ಗಂಟೆಯವರೆಗೆ ಶ್ರೀ ಸ್ವಾಮಿಗೆ ಭಕ್ತಾದಿಗಳು ಆರತಿ ಅರ್ಪಿಸಿದರು .ಸೋಮವಾರ ಬೆಳಗ್ಗೆ ಐದು ಗಂಟೆಯಿಂದ ಆರು ಗಂಟೆವರೆಗೆ ಗುಗ್ಗರಿ ಪೂಜೆ ಬೆಳಿಗ್ಗೆ 9:00ಯಿಂದ 10 ಗಂಟೆಯವರೆಗೆ ಸಿದ್ದ ಬುಕ್ತಿ ಮತ್ತು ಮಂಡೆ ತೆಗೆಯುವುದು ಬೆಳಗ್ಗೆ 10 ಗಂಟೆಯಿಂದ ದೇವರ ಎತ್ತುಗಳ ಮೆರವಣಿಗೆ ಮತ್ತು ಮಣೇವು ಇಡುವುದು ಶ್ರೀ ಸ್ವಾಮಿಯೇ 11 ರಿಂದ 1 ಗಂಟೆಯವರೆಗೆ ಮಹಾಮಂಗಳಾರತಿ ಹಾಗೂ ಪ್ರಸಾದ ವಿನಿಯೋಗ ಸಂಜೆ ನಾಲ್ಕು ಗಂಟೆಯಿಂದ ಊರಿನ ಪ್ರಮುಖ ಬೀದಿಗಳಲ್ಲಿ ಶ್ರೀ ಸ್ವಾಮಿಯ ಮೆರವಣಿಗೆ ಗ್ರಾಮದ ಗುರುಹಿರಿಯರು ಹಾಗೂ ಸರ್ವ ಭಕ್ತಾದಿಗಳ ಸಮ್ಮುಖದಲ್ಲಿ ಅದ್ದೂರಿಯಾಗಿ ಜರುಗಿತು.

ಇದೇ ವೇಳೆ ಸಬ್ ಇನ್ಸ್ಪೆಕ್ಟರ್ ಜಿ. ಬಿ. ಉಮೇಶ್ ಮಾತನಾಡಿ ನಮ್ಮ ಪೂರ್ವಜರ ಕಾಲದಿಂದಲೂ ಬಡಕಟ್ಟು ಸಂಸ್ಕೃತಿ ಇನ್ನೂ ಜೀವಂತವಾಗಿದೆ ನಮ್ಮ ಕುದಾಪುರ ಗ್ರಾಮದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಸಹ ಮ್ಯಾಸಮಂಡಲದ ಆರಾಧ್ಯ ದೈವ ಶ್ರೀ ಉದ್ಭವಲಿಂಗ ಶ್ರೀ ಚಿಂತ ಗುಟ್ಲು ಬೋರಲಿಂಗೇಶ್ವರ ಸ್ವಾಮಿ ಗುಗ್ಗರಿ ಹಬ್ಬವು ಅದ್ದೂರಿಯಾಗಿ ಆಚರಣೆಯನ್ನು ಮಾಡಲಾಗಿದೆ. ನಮ್ಮ ಮ್ಯಾಸಮಂಡಲದ ಪ್ರತಿ ವರ್ಷವೂ ಈ ಫೆಬ್ರವರಿ ಮಾಘ ಮಾಸದಲ್ಲಿ ಬುಡಕಟ್ಟು ಸಂಪ್ರದಾಯದಂತೆ ರೈತರು ತಮ್ಮ ತಮ್ಮ ಜಮೀನಿನಲ್ಲಿ ಬೆಳೆದಂತಹ ಕಾಳುಗಳನ್ನು ತಂದು ದೇವರಿಗೆ ನೈವೇದಿಸಿ ಪೂಜಾ ಕೈಕಾರ್ಯಗಳನ್ನು ನೆರವೇರಿಸಿ ನಂತರ ಬುಡಕಟ್ಟು ಸಂಸ್ಕೃತಿಯ ಲಕ್ಷಣಗಳಾದ ದೇವರು ಎತ್ತುಗಳನ್ನು ಓಡಿಸುವುದು ಮಣೇವು ಆಡಿಸುವುದು ಇವು ಬುಡಕಟ್ಟು ಸಂಸ್ಕೃತಿಯ ಸಂಪ್ರದಾಯ ಆಚಾರ ವಿಚಾರಗಳಾಗಿವೆ ಎಂದರು.

ಇದೇ ವೇಳೆ ಚಿತ್ರದುರ್ಗ ಮದಕರಿ ನಾಯಕ ವಿದ್ಯಾ ಸಂಸ್ಥೆಯ ಅಧ್ಯಕ್ಷ ಸಂದೀಪ್ ಮಾತನಾಡಿ ನಮ್ಮ ಚಿತ್ರದುರ್ಗ ಚಳ್ಳಕೆರೆ ಮೊಳಕಾಲ್ಮುರು ಬುಡಕಟ್ಟು ಸಂಸ್ಕೃತಿ ಆಚರಣೆಯ ತವರೂರು ಪ್ರತಿ ವರ್ಷ ಫೆಬ್ರವರಿಯಲ್ಲಿ ಹಿರೇಹಳ್ಳಿ ದೊಡ್ಡಸೂರ ನಾಯಕ ಜಾತ್ರೆಯಿಂದ ಪ್ರಾರಂಭವಾದ ನಮ್ಮ ಬುಡಕಟ್ಟು ಸಂಸ್ಕೃತಿ ಆಚರಣೆಯಂತೆ ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲಿ ಜಾತ್ರೆಗಳು ಮುಗಿದಿವೆ. ಇಂದು ಈ ವರ್ಷದ ಬುಡಕಟ್ಟು ಸಂಸ್ಕೃತಿಯ ಶ್ರೀ ಬೋರಲಿಂಗೇಶ್ವರ ಸ್ವಾಮಿ ಗುಗ್ಗರಿ ಹಬ್ಬ ಮೂಲಕ ಬಡಕಟ್ಟ ಸಂಸ್ಕೃತಿಗೆ ತೆರೆ ಬೀಳಲಿದೆ ಎಂದರು.

ಇದೇ ಸಂದರ್ಭದಲ್ಲಿ ಶ್ರೀ ಉದ್ಭವ ಲಿಂಗ ಚಿಂತ ಗುಟ್ಲು ಬೋರಲಿಂಗೇಶ್ವರ ಸ್ವಾಮಿಯ ಸಮಸ್ತ ಗುಡಿಕಟ್ಟಿನ ಅಣ್ಣ ತಮ್ಮಂದಿರು ಕುಲಸಾವರದವರು ಮ್ಯಾಸಮಂಡಲದ ಸಮೂಹ ಸೇರಿದಂತೆ ಮತ್ತು ಕುದಾಪುರ ಸಮಸ್ತ ಗ್ರಾಮಸ್ಥರು ವಿವಿಧ ಹಳ್ಳಿಗಳ ಭಕ್ತರು ಇದ್ದರು

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page