ಚಳ್ಳಕೆರೆ ಜನಧ್ವನಿ ವಾರ್ತೆ ಮೇ18 ಚರಂಡಿಗಳಲ್ಲಿ ಸ್ವಚ್ಛತೆ ಕಾಣದೆ ಸಾಂಕ್ರಾಮಿಕ ರೋಗ ಹರಡುವ ಭೀತಿಯನ್ನು ನಾಗರೀರು ಮೂಗುಮುಚ್ಚಿಕೊಂಡು ಜೀವನ ಸಾಗಿಸುವಂತಾಗಿದೆ.
ಹೌದು ಇದು ಚಳ್ಳಕೆರೆ ನಗರದ ವಾಲ್ಮೀಕಿ ನಗರದ ಕುಂಪು ಶಾಲೆಗೆ ಹೊಂದಿಕೊಂಡ ಚರಂಡಿ ಹೂಳು ತುಂಬಿಕೊಂಡಿದ್ದು ಪಕ್ಕ ಖಾಲಿ ನಿವೇಶನಲ್ಲಿ ಗಿಡಗೆಂಟೆಗಳು ಬೆಳೆ ಕೊಳಚೆ ನೀರು ನಿಂತಿದ್ದು ಸೋಳ್ಳೆಗಳ ಉತ್ಪತ್ತಿ ಕೇಂದ್ರವಾಗಿದ್ದು ಸಾಂಕ್ರಮಿಕ ರೋಗಗಳಿಗೆ ಕೈಬೀಸಿ ಕರೆಯುವಂತಾಗಿದೆ. ಚರಂಡಿಗಳಲ್ಲಿ ಕೊಳಚೆ ನೀರು ಸರಾಗವಾಗಿ ಮುಂದೆ ಹರಿಯದೇ ಮಡುಗಟ್ಟಿ ನಿಂತಿದೆ.
ಚರಂಡಿಯ ಅಕ್ಕಪಕ್ಕದಲ್ಲಿ ವಾಸ ಮಾಡುತ್ತಿರುವವರ ಪಾಡು ಹೇಳತೀರದಾಗಿದೆ. ಚಳರಂಡಿಯಲ್ಲಿ ಕುಡಿಯುವ ನೀರಿನ ನಲ್ಲಿಯೂ ಸಹ ಇದೆ.
ಚರಂಡಿ ಕುವೆಂಪು ಶಾಲಾ ಕಟ್ಟಡಕ್ಕೆ ಹೊಂದಿಕೊಂಡಿದ್ದು ಶಾಲಾ ಮಕ್ಕಳ ಹಾಗೂ ಸುತ್ತಮುತ್ತಲ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಮುನ್ನ ಸಂಬಂಧಪಟ್ಟ ಅಧಿಕಾರಿಗಳು ಚರಂಡಿಯಲ್ಲಿನ ಹೂಳು ಹಾಗೂ ಖಾಲಿ ನಿವೇಶದಲ್ಲಿನ ಗಿಡಗೆಂಟೆಗಳನ್ನು ತೆರವು ಗೊಳಿಸಿವರೇ ಕಾದು ನೋಡ ಬೇಕಿದೆ.
0 Comments