ಚಿತ್ರದುರ್ಗ ಆ. 29
ಅಟಲ್ ಭೂ ಜಲ ಯೋಜನೆಯಡಿ ಚಿತ್ರದುರ್ಗ ತಾಲ್ಲೂಕಿನ ರೈತರಿಗೆ ತುಂತುರು ನೀರಾವರಿ ಘಟಕದ ಯಂತ್ರೋಪಕರಣಗಳನ್ನು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದ ಬಳಿ ಮಂಗಳವಾರ ವಿತರಣೆ ಮಾಡಿದರು.
ಅಟಲ್ ಭೂ ಜಲ ಯೋಜನೆಯಡಿ ಸಬ್ಸಿಡಿ ಕಾರ್ಯಕ್ರಮದಲ್ಲಿ ತಾಲ್ಲೂಕಿನ 35 ರೈತರಿಗೆ ತುಂತುರು ನೀರಾವರಿ ಘಟಕದಲ್ಲಿ ಸ್ಪ್ರಿಂಕ್ಲರ್ ಗಳು, ಜೆಟ್ ಹಾಗೂ ಪೈಪ್ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್, ಶಾಸಕರುಗಳಾದ ರಘುಮೂರ್ತಿ, ಕೆ.ಸಿ. ವೀರೇಂದ್ರ ಪಪ್ಪಿ, ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ., ಕೃಷಿ ನಿರ್ದೇಶಕ ಡಾ. ಜಿ.ಟಿ. ಪುತ್ರ, ಕೃಷಿ ಇಲಾಖೆ ಆಯುಕ್ತ ಬಿ.ವೈ. ಪಾಟೀಲ್ ಮುಂತಾದವರು ಉಪಸ್ಥಿತರಿದ್ದು, ರೈತರಿಗೆ ತುಂತುರು ನೀರಾವರಿ ಯಂತ್ರಗಳನ್ನು ವಿತರಿಸಿದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments