ಕೆಆರ್‌ಎಸ್ ಪಕ್ಷದ ವತಿಯಿಂದ ಜ‌.12ರಂದು ಕೊಪ್ಪಳದಲ್ಲಿ ರಾಜ್ಯಮಟ್ಟದ ಯುವ ಸಮಾವೇಶ: ಸಿ ಬೋಜರಾಜ.

by | 09/01/24 | ಸುದ್ದಿ

ಚಳ್ಳಕೆರೆ: ನಾಡಿನ ಯುವ ಜನತೆಗೆ ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ತಿಳಿಸಿ ಯುವಕರಲ್ಲಿ ಸೋಮಾರಿತನವನ್ನು ಹೋಗಲಾಡಿಸಿ ಹೊಸ ಚೈತನ್ಯ ಮೂಡುವಂತೆ ಮಾಡಲು ಜ.12ರ ಸ್ವಾಮಿ ವಿವೇಕಾನಂದರ ಜಯಂತಿಯಂದು ಕೊಪ್ಪಳದಲ್ಲಿ ರಾಜ್ಯಮಟ್ಟದ ಯುವ ಸಮಾವೇಶ ಹಮ್ಮಿಕೊಂಡಿದೆ ಈ ಸಮಾವೇಶಕ್ಕೆ ರಾಜ್ಯದ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಬಗ್ಗೆ ಹಾಗೂ ನಾಡನ್ನು ಭ್ರಷ್ಟ ವ್ಯವಸ್ತೆಯಿಂದ ಪಾರು ಮಾಡಿ ಉತ್ತಮ ಸಮಾಜ ನಿರ್ಮಾಣ ಮಾಡಲು ಮುಂದಾಗುವಂತೆ ಪ್ರೇರೇಪಿಸಲು ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೆಆರ್‌ಎಸ್ ಪಕ್ಷದ ತಾಲೂಕು ಘಟಕದ ಅಧ್ಯಕ್ಷ ಸಿ ಬೋಜರಾಜ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಪಾಲನೆ ಮಾಡಿಕೊಂಡು ಪಕ್ಷ ಸಂಘಟನೆ ಆಗುತ್ತಿದ್ದು ವಿವೇಕಾನಂದರ ಮಾತಿನಂತೆ ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ ಯುವಕರು ಹೇಡಿಗಳಾಗದೆ ಹಾಗೂ ಪರಾವಲಂಬಿಗಳಾಗದೆ ತಮ್ಮ ಶಕ್ತಿಯನ್ನು ಬಳಕೆ ಮಾಡಿ ದೇಶವನ್ನು ಕಟ್ಟುವ ಸ್ಥಿತಿಗೆ ಕೊಂಡೊಯ್ಯುವುದು ಪಕ್ಷದ ನಿಲುವಾಗಿದೆ ಇಂದಿನ ವಿದ್ಯಾರ್ಥಿ ಸಮೂಹ ಬ್ರಷ್ಟಾಚಾರ ವ್ಯವಸ್ಥೆಯನ್ನು ಹೋಗಲಾಡಿಸಲು ಪಣತೊಟ್ಟು ದೇಶದ ಹಾಗೂ ರಾಜ್ಯದ ಅಭಿವೃದ್ಧಿಗೆ ಕೈಜೋಡಿಸಬೇಕು ಭ್ರಷ್ಟ ವ್ಯವಸ್ಥೆಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಅನಕ್ಷರಸ್ಥರಿಗೆ ಮನವರಿಕೆ ಮಾಡಿಕೊಡುವ ಮೂಲಕ ದೇಶವನ್ನು ಸದೃಢವಾಗಿ ನಿರ್ಮಾಣ ಮಾಡಲು ಪಣ ತೊಡಬೇಕು ಈ ನಿಟ್ಟಿನಲ್ಲಿ ಕೊಪ್ಪಳದಲ್ಲಿ ನಡೆಯುವ ಯುವ ಸಮಾವೇಶಕ್ಕೆ ಕೆಆರ್‌ಎಸ್ ಪಕ್ಷದ ಕಾರ್ಯಕರ್ತರು ಸೇರಿದಂತೆ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ವಿನಂತಿಸಿದರು.

ಕೆ ಆರ್ ಎಸ್ ಪಕ್ಷದ ತಾಲೂಕು ಉಪಾಧ್ಯಕ್ಷ ಸಿಎನ್ ಮಾರುತಿ ಮಾತನಾಡಿ ಯುವ ಜನತೆ ಡ್ರಗ್ಸ್ ಬೆಟ್ಟಿಂಗ್ ಕುಡಿತ ಆನ್ಲೈನ್ ಗೇಮ್ ನಂತಹ ವ್ಯಸನಗಳಿಗೆ ದಾಸರಾಗುತ್ತಿದ್ದು ಇವುಗಳನ್ನು ತಡೆಯುವಲ್ಲಿ ಸರ್ಕಾರಗಳು ವಿಫಲವಾಗಿದೆ ಸರ್ಕಾರಕ್ಕೆ ಕೇವಲ ಹಣ ಬಂದರೆ ಸಾಕು ಜನರ ನೆಮ್ಮದಿಯ ಬದುಕು ಆರೋಗ್ಯ ಬೇಕಾಗಿಲ್ಲ ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮಧ್ಯ ಚಟುವಟಿಕೆಗಳು ನಡೆಯುತ್ತಿದ್ದು ಯುವಜನತೆ ಮಧ್ಯ ವ್ಯಸನಿಗಳಾಗಿ ತಮ್ಮ ಜೀವವನ್ನು ಕಳೆದುಕೊಳ್ಳುತ್ತಿದ್ದಾರೆ ಕೆ ಆರ್ ಎಸ್ ಪಕ್ಷಕ್ಕೆ ಯುವಜನತೆಯ ಬೆಂಬಲವಿದ್ದು ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ನಿಭಾಯಿಸಲು ಯುವಕರಿಗೆ ಪಕ್ಷ ಬೆಂಬಲ ನೀಡುತ್ತದೆ ಪ್ರಸ್ತುತ ರಾಜಕೀಯ ಪಕ್ಷಗಳಲ್ಲಿ ಭ್ರಷ್ಟಾಚಾರ ತಾಂಡವ ಆಡುತ್ತಿದ್ದು ಯುವಕರಿಗೆ ರಾಜಕೀಯ ಪ್ರಾತಿನಿಧ್ಯ ದೊರೆಯದೆ ಇರುವುದರಿಂದ ದೇಶದ ಅಭಿವೃದ್ಧಿ ಕುಂಠಿತವಾಗುತ್ತಿದೆ ಮುಂದಿನ ದಿನಗಳಲ್ಲಿ ಕೆಆರ್‌ಎಸ್ ಪಕ್ಷ ಇಂತಹ ಇನ್ನಷ್ಟು ಯುವ ಸಮಾವೇಶಗಳನ್ನು ಹಮ್ಮಿಕೊಳ್ಳುವ ಮೂಲಕ ಯುವಜನತೆಗೆ ರಾಜಕೀಯ ಜ್ಞಾನದ ಅರಿವನ್ನು ಮೂಡಿಸುವಲ್ಲಿ ಕ್ರಮ ಕೈಗೊಳ್ಳುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕೆ ಆರ್ ಎಸ್ ಪಕ್ಷದ ತಾಲೂಕು ಪ್ರಧಾನ ಕಾರ್ಯದರ್ಶಿ ಮನೋಹರ್ ಕಾರ್ಯದರ್ಶಿ ರವಿಕುಮಾರ್ ಜಿಲ್ಲಾ ಕಾರ್ಯದರ್ಶಿ ಶಿವರಾಮ ಚಂದ್ರಣ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page