ಕೆ.ನಾಗರಾಜ್‍ಗೆ ಪಿಹೆಚ್‍ಡಿ ಪದವಿ

by | 20/10/23 | ಸುದ್ದಿ


ಚಿತ್ರದುರ್ಗ ಅ.20:
ಚಿತ್ರದುರ್ಗ ತಾಲ್ಲೂಕಿನ ಮದಕರಿಪುರ ಗ್ರಾಮದ, ದಾವಣಗೆರೆ ಪಶುರೋಗ ತನಿಖಾ ಪ್ರಯೋಗಾಲಯ ಮತ್ತು ಮಾಹಿತಿ ಕೇಂದ್ರದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಕೆ.ನಾಗರಾಜ್ ಅವರಿಗೆ ಬೀದರ್‍ನ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಪಿಹೆಚ್‍ಡಿ ಪದವಿ ನೀಡಿದೆ.
ಪ್ರಾಧ್ಯಾಪಕ ಡಾ.ಜಗದೀಶ್ ಎಸ್ ಸಂಗನಾಳ್ ಮಾರ್ಗದರ್ಶನದಲ್ಲಿ ಪಶುವೈದ್ಯಕೀಯ ಔಷಧ ಮತ್ತು ವಿಷಶಾಸ್ತ್ರದಲ್ಲಿ “ಬರಡು ರಾಸುಗಳಲ್ಲಿ ಕೃತಕ ಚಿಕಿತ್ಸೆಯಿಂದ ಹಾಲು ಬರಸುವಿಕೆ” ಮಹಾಪ್ರಬಂಧಕ್ಕೆ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಪಿಹೆಚ್‍ಡಿ ಪದವಿ ನೀಡಿದೆ.
ಫೋಟೋ ವಿವರ: ಬೀದರ್‍ನ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವದಲ್ಲಿ ಪಶುವೈದ್ಯಕೀಯ ಔಷಧ ಮತ್ತು ವಿಷಶಾಸ್ತ್ರ ವಿಷಯದಲ್ಲಿ ಕೆ.ನಾಗರಾಜ್ ಅವರಿಗೆ ರಾಜ್ಯಪಾಲರು ಪಿಹೆಚ್‍ಡಿ ಪದವಿ ನೀಡಿದರು.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *