ಕೇಂದ್ರ ಬರ ಅಧ್ಯಯನ ತಂಡಕ್ಕೆ ಬೆಳೆ ಕಟಾವು ಸಮೀಕ್ಷೆ ಪ್ರಯೋಗ ವರದಿಯಲ್ಲಿ 0 ಇಳುವರಿ.

by | 07/10/23 | ಬರ ಅಧ್ಯಯನ

ಚಳ್ಳಕೆರೆ ಜನಧ್ವನಿ ವಾರ್ತೆ ಅ.7. ಹತ್ತಾರು ವರ್ಷಗಳಿ ಹಿಂದೆ ಇದು ಕೇವಲ ಆಹಾರ ಉತ್ಪಾದನೆ ಲೆಕ್ಕಾಚಾರಕ್ಕೆ ಮಾತ್ರ ಬೆಳೆ ಕಟಾವು ಸಮೀಕ್ಷೆ ವರದಿ ಸೀಮಿತವಾಗಿತ್ತು. ಆದರೆ ಬೆಳೆ ವಿಮೆ ಬೆಳೆ ಪರಿಹಾರ ಪಡೆಯಲು ಸಹಕಾರಿಯಾಗಿದ್ದು ಕೇಂದ್ರ ಬರ ಅಧ್ಯಯನ ತಂಡದ ಸಮ್ಮುಖದಲ್ಲಿ ಮಾಡಿದ ಬೆಳೆ ಕಟಾವು ಜೀರೋ ಬಂದಿದೆ.
ಹೌದು ಇದು ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಹೋಬಳಿಯ ರಾಮದುರ್ಗ ಗ್ರಾಮದ ರಂಗಸ್ವಾಮಿ ನಾಯ್ಕ ಇವರ 54/2, ಸರ್ವೇ ನಂಬರ್ ನಲ್ಲಿ 6.20 ಎಕರೆಯಲ್ಲಿ ಶೇಂಗಾ ಬೆಳೆದಿದ್ದು, ಕೇಂದ್ರ ಬರ ಅಧ್ಯಯನ ತಂಡಕ್ಕೆ ಬೆಳೆ ಕಟಾವು ಸಮೀಕ್ಷೆ ಪ್ರಯೋಗ ಮಾಡಿ ತೋರಿಸಲಾಯಿತು ಅದರಲ್ಲಿ 0 ಇಳುವರಿ ಬಂದಿದ್ದು ಭೀಕರ ಬರಗಾಲಕ್ಕೆ ಇದು ಸಾಕ್ಷಿಯಾಯಿತು. ವಿಮಾ ಕಂಪನಿಯೂ ಒಳಗೊಂಡು ಕಂದಾಯ, ಕೃಷಿ, ತೋಟಗಾರಿಕೆ, ಸಾಂಖಿಕ ಇಲಾಖೆಗಳು ಒಟ್ಟಾಗಿ ಈ ಕಾರ್ಯವನ್ನು ಕೈಗೊಳ್ಳುತ್ತವೆ. ಹಿಂಗಾರು ಮುಂಗಾರು ಬೆಳೆ ಕಟಾವು ಮೂಲಕ ಬೆಳೆ ಪ್ರಮಾಣವನ್ನು ನಿರ್ಧರಿಸಲಾಗುತ್ತದೆ. ಪ್ರಕೃತಿ ವಿಕೋಪದ ಸಂದರ್ಭದಲ್ಲಿ ರ್ಯಾಂಡಮ್ ರೀತಿಯಲ್ಲಿ ಬೆಳೆ ಬಗೆಗೆ ಪಾರದರ್ಶಕವಾಗಿ ಲೆಕ್ಕಾಚಾರ ಮಾಡಲಾಗುತ್ತದೆ ಎಂದು ಕೃಷಿ ಅಧಿಕಾರಿಗಳು ಮಾಹಿತಿ ನೀಡಿದರು. ಬೆಳೆ ಕಟಾವು ಪ್ರಯೋಗ ಆಧರಿಸಿ ಬೆಳೆ ವಿಮೆ ಕಂಪನಿಗಳು ವಿಮೆ ಮೊತ್ತ ನಿರ್ಧರಿಸುತ್ತವೆಕೇಂದ್ರ ಬರ ಅಧ್ಯಯನ ತಂಡಕ್ಕೆ ಬೆಳೆ ಕಟಾವು ಸಮೀಕ್ಷೆ ಪ್ರಯೋಗ ಮಾಡಿ ತೋರಿಸಲಾಯಿತು ಅದರಲ್ಲಿ 0 ಇಳುವರಿ ಆದರೆ ಸರಿಯಾದ ಸಮಯಕ್ಕೆಮಳೆ ಬಾರದೆ ಬೆಳೆಗಳ ಇಳುವರಿ ಕುಂಠಿತಗೊಂಡಿದ್ದು ಶೇಂಗಾ ಗಿಡ ಕಿತ್ತಾಗ ಒಂದು ಗಿಡದಲ್ಲಿ ಒಂದು ಎರಡು. ಐದು ಈಗೆ ಕಾಯಿಕಟ್ಟಿರುವುದನ್ನು ಬರ ಅಧ್ಯಯನ ತಂಡ ನೋಡಿ ಬೆಳೆ ನಷ್ಟದ ಬಗ್ಗೆ ಕಣ್ಣಾರೆ ಕಂಡು ಬರಪರಿಸ್ಥಿಯನ್ನು ಸರಕಾರದ ಗಮನ ಸೆಳೆಯುವುದಾಗಿ ತಿಳಿಸಿದ್ದಾರೆ.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಸಭೆಯಲ್ಲಿ ಈಗಾಗಲೆ ಜಿಲ್ಲಾಧಿಕಾರಿ ಧೀವ್ಯ ಪ್ರಭು ಸಹ ಕೃಷಿ.ತೋಟಗಾರಿಕೆಮ ಬೆಳೆವಿಮೆ ಕಂಪನಿ ಸೇರಿದಂತೆ ಅಧಿಕಾರಿಗಳಿಗಳಿಗೆ ಬೆಳೆ ವಿಮೆ ನಿಗದಿಗೆ ಸ್ಥಳೀಯವಾಗಿ ನಡೆಸಿದ ಬೆಳೆ ಕಟಾವು ಪ್ರಯೋಗವೇ ಆಧಾರ. ಇದರಲ್ಲಿ ಯಾವುದೇ ರೀತಿಯ ತಪ್ಪು ಉಂಟಾಗಬಾರದು. ತಂತ್ರಾಂಶದಲ್ಲಿ ಅಂಕಿ ಅಂಶಗಳು ತಪ್ಪಾಗದಂತೆ ಪ್ರಯೋಗದ ವಿವರಗಳನ್ನು ಭರ್ತಿ ಮಾಡಬೇಕು. ಬೆಳೆ ಕಟಾವು ಮಾಡಲು ನಿಯೋಜಿಸಿದ ಅಧಿಕಾರಿ ಹಾಗೂ ನೌಕರರೇ ಖುದ್ದಾಗಿ ರೈತರ ಜಮೀನಿಗೆ ತೆರಳಿ ಕಟಾವು ಪ್ರಯೋಗ ಕೈಗೊಳ್ಳಬೇಕು’ ಎಂದು ಸೂಚಿಸಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ಜಲ ಆಯೋಗದ ನಿರ್ದೇಶಕ ಅಶೋಕ್ ಕುಮಾರ್. ವಿ.ಎಂ.ಎನ್.ಸಿ.ಎಫ್.ಸಿ. ಹಾಗೂ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಕರಣ್ ಚೌದರಿ ಆಹಾರ ನಾಗರೀಕ ಸರಬರಾಜ ಇಲಾಖೆ ಉಪಯಾರ್ಯದರ್ಶಿ ಸಂಗೀತಕುಮಾರ್ , ರಾಜ್ಯ ಪ್ರಕೃತಿವಿಕೋಪ ನಿರ್ವಹಣಾ ಕೇಂದ್ರದ ಹಿರಿಯ ಸಲಹೆ ಗಾರ ಡಾ.ಶ್ರೀನಿವಾಸ್ ರೆಡ್ಡಿ,ಜಿಲ್ಲಾಧಿಕಾರಿ ಧೀವ್ಯಪ್ರಭು, ಜಿಪಂ ಸಿಇಒ ಸೋಮಶೇಖರ್, ಅಪಾರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಕಾರ್ತಿಕ್,ಜಂಟಿ ಕೃಷಿ ನಿರ್ಧೇಶಕ ಮಂಜುನಾಥ್,ತೋಟಗಾರಿಕೆ ಉಪನಿರ್ಧೇಶಕಿ ಸವಿತಾ, ತಹಶೀಲ್ದಾರ್ ರೇಹಾನ್ ಪಾಷಾ. ಕೃಷಿ ಉಪನಿರ್ಶೇಕ ಶಿವಕುಮಾರ್, ಸಹಾಯಕ ಕೃಷಿ ನಿರ್ಶೇಕ ಅಶೋಕ್ ತೋಟಗಾರಿಕೆ ಹಿರಿಯ ಸಹಾಯಕ ನಿರ್ಧೇಶಕ ವಿರುಪಾಕ್ಷಪ್ಪ, ಕೃಷಿ ಅಧಿಕಾರಿಗಳು ಕಂದಾಯ ಇಲಾಖೆ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page