ನಾಯಕನಹಟ್ಟಿ:: ಭದ್ರ ಮೇಲ್ದಂಡೆ ಯೋಜನೆ ಕಾಮಗಾರಿ ನಿಧಾನ ಗತಿಯಲ್ಲಿ ಸಾಗುತ್ತಿದೆ ಫೆಬ್ರವರಿ 13ರ ನಾಯಕನಹಟ್ಟಿ ಬಂದ್ ನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಎಚ್ಚರಿಸುವಂತ ಕೆಲಸವಾಗಬೇಕು ಎಂದು ನಲಗೇತನಹಟ್ಟಿ ಗ್ರಾ.ಪಂ. ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಪಿ.ಎನ್ .ಮುತ್ತಯ್ಯ ಹೇಳಿದ್ದಾರೆ.
ಶುಕ್ರವಾರ ಪಟ್ಟಣದ ಶ್ರೀ ಹಟ್ಟಿ ಮಲ್ಲಪ್ಪ ನಾಯಕ ಕಚೇರಿಯಲ್ಲಿ ಹೋಬಳಿಯ ಎಲ್ಲಾ ಗ್ರಾಮ ಪಂಚಾಯತಿಯ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರೈತ ದೇಶದ ಬೆನ್ನೆಲುಬು ಎಂದು ಹೇಳಿ ರೈತರ ಕಿವಿಗಳಿಗೆ ಹೂವ ಇಡುವ ಕೆಲಸವನ್ನ ಕೇಂದ್ರ ಮತ್ತು ರಾಜ್ಯ ಸರ್ಕಾರ ಮಾಡುತ್ತಿವೆ.
ಕೇಂದ್ರ ಮತ್ತು ರಾಜ್ಯ ಸರ್ಕಾರ ನಮ್ಮಗೆ ಶೀಘ್ರವೇ ಭದ್ರಾ ಮೇಲ್ದಂಡೆ ಯೋಜನೆಯ ಅನುದಾನವನ್ನು ಬಿಡುಗಡೆ ಮಾಡಬೇಕು ಮತ್ತು ರೈತರು ಬೆಳೆದಂತಹ ಬೆಳೆಗೆ ನಿಗದಿತ ಬೆಲೆಯನ್ನ ನೀಡಬೇಕು ಎಂದು ಸಭೆಯಲ್ಲಿ ಒತ್ತಾಯಿಸಿದರು.
ಇನ್ನೂ ಪತ್ರಿಕಾಗೋಷ್ಠಿಯಲ್ಲಿ ಹೋಬಳಿಯ ಎಂಟು ಗ್ರಾಮ ಪಂಚಾಯತಿಯ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರುಗಳು ಭದ್ರೆಗಾಗಿ ಫೇ.13. ರಂದು ಜಿಲ್ಲಾ ನೀರಾವರಿ ಅನುಷ್ಠಾನ ಸಮಿತಿ ಹಾಗೂ ನಾಯಕನಹಟ್ಟಿ ಹೋಬಳಿ ನೀರಾವರಿ ಹಾಗೂ ಸಾಮಾಜಿಕ ಹೋರಾಟ ಸಮಿತಿಯ ವತಿಯಿಂದ ನಡೆಯುವ ನಾಯಕನಹಟ್ಟಿ ಬಂದ್ ಗೆ ಸಂಪೂರ್ಣವಾಗಿ ಬೆಂಬಲವನ್ನು ನೀಡುವುದಾಗಿ ತಿಳಿಸಿದರು.
ಇದೇ ಸಂದರ್ಭದಲ್ಲಿ ಎನ್ ಮಹದೇವಪುರ ಗ್ರಾ.ಪಂ ಅಧ್ಯಕ್ಷ ಬಿ ತಿಪ್ಪೇಸ್ವಾಮಿ. ನ ನೇರಲಗುಂಟೆ ಗ್ರಾ. ಪಂ. ಅಧ್ಯಕ್ಷ ಎ.ಒ. ಗೋಪಾಲನಾಯಕ, ಗೌಡಗೆರೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಟಿ .ರಂಗಪ್ಪ, ಉಪಾಧ್ಯಕ್ಷ ಸಣ್ಣಪ್ಪ, ಸದಸ್ಯ ನಾಗಪ್ಪ, ಎನ್ ದೇವರಹಳ್ಳಿ ಗ್ರಾ.ಪಂ. ಅಧ್ಯಕ್ಷೆ ರತ್ನಮ್ಮ ರಾಜಣ್ಣ, ಉಪಾಧ್ಯಕ್ಷೆ ಸರಿತಾ ಬಾಯಿ ರಾಜನಾಯ್ಕ, ಸದಸ್ಯ ಸಿದ್ದಪ್ಪ, ಅಬ್ಬೇನಹಳ್ಳಿ ಗ್ರಾ .ಪಂ.ಅಧ್ಯಕ್ಷೆ ಪಾಪಮ್ಮ ಆನಂದಪ್ಪ. ಉಪಾಧ್ಯಕ್ಷ ಬಿ. ಅನಿತಮ್ಮ ಜಿ ಎಂ ಜಯಣ್ಣ, ಸದಸ್ಯ ಬಿ. ಸಣ್ಣಪಾಲಯ್ಯ, ತಿಮ್ಮಪ್ಪಯ್ಯನಹಳ್ಳಿ,ಗ್ರಾ.ಪಂ. ಅಧ್ಯಕ್ಷೆ ಅನಿತಾ ರವಿಕುಮಾರ್, ಉಪಾಧ್ಯಕ್ಷೆ ಲಕ್ಷ್ಮಿ ದೇವಿ ಮಹದೇವಣ್ಣ, ನೀರಾವರಿ ಹೋರಾಟ ಸಮಿತಿಯ ಹೋಬಳಿ ಅಧ್ಯಕ್ಷ ಜಿ ಬಿ ಮುದಿಯಪ್ಪ, ಕಾರ್ಯಧ್ಯಕ್ಷ ಎಸ್ ಟಿ ಬೋರ್ ಸ್ವಾಮಿ, ಕಾರ್ಯದರ್ಶಿ ಎಚ್ ಬಿ ತಿಪ್ಪೇಸ್ವಾಮಿ ಜೋಗಿಹಟ್ಟಿ, ಟಿ ಬಸಪ್ಪ ನಾಯಕ, ಆರ್ ಪಾಲಯ್ಯ, ನಲಗೇತನಹಟ್ಟಿ ಡಾ.ಎಂ.ಪಿ. ಮಂಜುನಾಥ್, ಶ್ರೀ ರಾಘವೇಂದ್ರ ಪ್ರಿಂಟಿಂಗ್ ಪ್ರೆಸ್ ಮಾಲಿಕ ಅಬ್ಬೇನಹಳ್ಳಿ ಎಂ ಎಸ್ ಶಿವಪ್ರಕಾಶ್, ನಲಗೇತನಹಟ್ಟಿ ನಿಂಗರಾಜ್, ಇದ್ದರು.
0 Comments