ಚಳ್ಳಕೆರೆ ಜನಧ್ವನಿ ವಾರ್ತೆ ಫೆ.20. ಬಿಜೆಪಿ ತನ್ನದೇ ಆದ ಸಿದ್ಧಾಂತವನ್ನು ಹೊಂದಿದ್ದು, ದೇಶದ ಬಗ್ಗೆ ಚಿಂತನೆ ಮಾಡುವ ಪಕ್ಷ ಎಂದು ಬಿಜೆಪಿ ಆಕಾಂಕ್ಷಿ ಅನಿಲ್ ಕುಮಾರ್ ಹೇಳಿದರು. ತಾಲೂಕಿನ ಸೋಮಗುದ್ದು ಗ್ರಾಮಪಂಚಾಯಿಗೆ ಅವಿರೋದವಾಗಿ ಆಯ್ಕೆಯಾದ ಗ್ರಾಪಂ ಅಧ್ಯಕ್ಷ ಉಪಾಧ್ಯಕ್ಷರಿಗೆ ಸನ್ಮಾನಿಸಿ ಮಾತನಾಡಿದರು.
ಬಿಜೆಪಿಯ ದೇಶಪ್ರೇಮ ಹಾಗೂ ಉತ್ತಮ ಆಡಳಿತದಿಂದ ಸ್ಫೂರ್ತಿಗೊಂಡು ನರೇಂದ್ರ ಮೋದಿ ಜನಪ್ರಿಯ ಯೋಜನೆಗಳು ನಾಡಿನ ಅನೇಕ ಯುವಕರಿಗೆ ಸ್ಫೂರ್ತಿಯಾಗಿದ್ದಾರೆ.. ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಡಳಿತ ವೈಖರಿ, ಎಲ್ಲಾ ಸಮುದಾಯಗಳ ಬಡ ಜನರನ್ನು ಮೇಲೆತ್ತುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ ಬಿಜೆಪಿ ಪಕ್ಷದ ಸಿದ್ದಾಂತ ಹಾಗೂ ಕೇಂದ್ರ ಹಾಗೂ ರಾಜ್ಯ ಸರಕಾತದ ಜನಪರ ಯೋಜನೆಗಳನ್ನು ಮೆಚ್ಚಿ ಕ್ಷೇತ್ರದ ಅನೇಕ ಕಾಂಗ್ರೆಸ್ ಹಾಗೂ ಜೆಡಿಎಸ್ನ ಮುಖಂಡರು, ಯುವಕರು ಬಿಜೆಪಿಯತ್ತ ಮುಖ ಮಾಡಿರುವುದು ಮುಂದಿನ ಚುನಾವಣೆಯಲ್ಲಿ ಮತ್ತೆ ರಾಜ್ಯ ಹಾಗೂ ಕ್ಷೇತ್ರದಲ್ಲಿ ಕಮಲ ಅರಳುವುದು ಖಚಿತ ಎಂದು ತಿಳಿಸಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ಮನದಟ್ಟು ಮಾಡಬೇಕು. ಪ್ರತಿ ಬೂತ್ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಬೇಕು ಎಂದು ಕಾರ್ಯಕರ್ತರ ಗಮನಸೆಳೆದರು. ಸೋಮುಗುದ್ದು ಗ್ರಾಮದ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಹಿರೇಮಧುರೆ ಗ್ರಾಮದ ಗಂಗಮ್ಮ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಎಂ.ಸುರೇಶ್ ಅವಿರೋಧವಾಗಿ ಆಯ್ಕೆಯಾಗಿದ್ದು ಇವರನ್ನು ಅನಿಲ್ ಕುಮಾರ್ ಅಭಿನಂದಿಸಿ ಸನ್ಮಾನಿಸಲಾಯಿತು
ಈ ಸಂದರ್ಭದಲ್ಲಿ ಅನೇಕ ಕಾರ್ಯಕರ್ತರು ಹಾಗೂ ಮುಖಂಡರು ಗ್ರಾಮಸ್ಥರು ಉಪಸ್ಥಿತಿಯಲ್ಲಿದ್ದರು
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments