ಚಿತ್ರದುರ್ಗ:
ಮಾದಿಗ ಸಮುದಾಯ ಸಮಾಜದ ಮುಖ್ಯವಾಹಿನಿಗೆ ಬರಬೇಕು. ಕೇಂದ್ರದಲ್ಲಿ ನೂತನ ಸರ್ಕಾರ ರಚನೆಯಾಗಿದೆ ಅದರಲ್ಲಿ ರಾಜಕೀಯವಾಗಿ ಕುಗ್ಗಿರುವ, ಆರ್ಥಿಕ ವಾಗಿ ನಿಶಕ್ತರಾಗಿರುವ ಸಮಾಜವನ್ನು ಗುರುತಿಸಲು ಕೇಂದ್ರ ಸರ್ಕಾರ ಎಡವಿದೆ.
ಉತ್ತಮ ಸರಳ, ಸಜ್ಞನ, ರಾಜಕಾರಣಿಗಳಾಗಿ ಗುರುತಿಸಿಕೊಂಡಿರುವ ಗೋವಿಂದ ಕಾರಜೋಳ, ರಮೇಶ್ ಜಿಗಜಿಣಿಗಿರವರನ್ನು ಕೇಂದ್ರ ಸಚಿವ ಸಂಪುಟಕ್ಕೆ ಆಯ್ಕೆ ಮಾಡಬೇಕಾಗಿತ್ತು ಎಂಬುದಾಗಿ ಅದಿಜಾಂಬವ ಮಠದ ಶ್ರೀ ಷಡಕ್ಷರಿಮುನಿ ದೇಶಿಕೇಂದ್ರ ಸ್ವಾಮೀಜಿ ಒತ್ತಾಯಿಸಿದರು.
ಎಡಗೈ ಮಾದಿಗ ಸಮುದಾಯಕ್ಕೆ ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ನೀಡಲೇಬೇಕೆಂದು ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಒತ್ತಾಯಿಸಿದರಲ್ಲದೆ, ಮಾದಿಗ ಸಮುದಾಯದ ಶ್ರೀ ಗೋವಿಂದ ಕಾರಜೋಳ, ಶ್ರೀ ರಮೇಶ್ ಜಿಗಜಿಣಗಿರವರು ಸಂಸದರಾಗಿ ಆಯ್ಕೆಯಾಗಿರುವುದಕ್ಕೆ ಅಭಿನಂದನೆಗಳು ಎಂಬುದಾಗಿ ಅವರು ತಿಳಿಸಿದರು.
ಆದರೆ ಇದು ವಿಷಾದನೀಯ ಸಂಗತಿಎಂದರೆ, ಎಡಗೈ ಸಮುದಾಯಕ್ಕೆ ಅವಕಾಶ ನೀಡಿಲ್ಲ. ಮತದಾನ ಮಾತ್ರ ಮಾಡಲು ನಮ್ಮನ್ನ ಬಳಸಿಕೊಳ್ಳಬೇಡಿ. ಮಾದಿಗ ಸಮುದಾಯಕ್ಕೆ ರಾಜಕೀಯವಾಗಿ ಶಕ್ತಿ ಕೊಡಿ. ಮಾದಿಗ ಸಮುದಾಯವನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳದೇ ಇರುವುದರಿಂದ ಮಾದಿಗ ಸಮುದಾಯ ಮತ್ತು ಉಪಪಂಗಡಗಳಿಗೆ ತಪ್ಪು ಸಂದೇಶ ರವಾನೆ ಆಗುತ್ತದೆ ಎಂದರಲ್ಲದೆ,
ಜೊತೆಗೆ ಬಾರಿ ಅನ್ಯಾಯವಾಗಿದೆ. ರಾಜ್ಯದಲ್ಲಿ ದಲಿತ ಸಮುದಾಯದ ಯಾರೊಬ್ಬರೂ ಮುಖ್ಯಮಂತ್ರಿಯಾಗಿಲ್ಲ. ರಾಷ್ಟ್ರೀಯ ಪಕ್ಷಗಳು ಅವರಿಗೆ ಪಕ್ಷದ ಅಧ್ಯಕ್ಷ ಸ್ಥಾನ. ಪಕ್ಷದ ಈ ನಡೆಯನ್ನು ಸಮುದಾಯ ಗಮನಿಸುತ್ತಿದೆ. ಶ್ರೀ ಗೋವಿಂದ ಕಾರಜೋಳರವರನ್ನು ಕೇಂದ್ರ ಸಚಿವರಾಗಿ ಆಯ್ಕೆ ಮಾಡುವ ಮೂಲಕ ನ್ಯಾಯ ಕೊಡಬೇಕು.
ಇಲ್ಲದೇ ಹೋದರೆ ಮುಂದಿನ ದಿನಗಳಲ್ಲಿ ಈ ಬಗ್ಗೆ ಮಾದಿಗ ಸಮುದಾಯವು ರಾಜಕೀಯ ನಿರ್ಧಾರ ಮತ್ತು ಹೋರಾಟದ ನಿರ್ಧಾರವನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂಬುದಾಗಿ ಪತ್ರಿಕಾ ಗೋಷ್ಟಿಯಲ್ಲಿ ಸ್ವಾಮೀಜಿ ತಿಳಿಸಿದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments