ಚಳ್ಳಕೆರೆ: ನಗರದ ತಾಲೂಕು ಕಚೇರಿಯ ಮುಂದೆ ಲಾರಿ ಸಂಘದ ಮಾಲೀಕರು ಹಾಗೂ ಚಾಲಕರು ಕೇಂದ್ರ ಸರ್ಕಾರದ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 16(1 )ಮತ್ತು(2) ಕಾಯ್ದೆಯನ್ನು ವಿರೋಧಿಸಿ ನಗರದ ಎಪಿಎಂಸಿ ಮಾರುಕಟ್ಟೆಯಿಂದ ಮೆರವಣಿಗೆ ಮೂಲಕ ಬಂದು ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ತಾಲೂಕು ಲಾರಿ ಮಾಲೀಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಭರಮಯ್ಯ ಮಾತನಾಡಿ ಕೇಂದ್ರ ಸರ್ಕಾರದ ನೂತನ ನೀತಿಯಿಂದಾಗಿ ಲಾರಿ ಚಾಲಕರು ಹಾಗೂ ಮಾಲೀಕರು ಸಂಕಷ್ಟಕ್ಕೆ ಈಡಾಗಿದ್ದಾರೆ ಕೇಂದ್ರ ಸರ್ಕಾರ ರಚಿಸಿರುವ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 106(1) ಮತ್ತು(2)ರ ಕಾಯ್ದೆ ಅನ್ವಯ ಹತ್ತು ವರ್ಷ ಜೈಲು 7 ಲಕ್ಷ ದಂಡದ ಕಾನೂನನ್ನು ಜಾರಿಗೊಳಿಸುವುದರಿಂದ ಅಮಾಯಕ ಲಾರಿ ಚಾಲಕರು ಹಾಗೂ ಮಾಲೀಕರು ತೊಂದರೆ ಎದುರಿಸುವಂತಾಗುತ್ತಿದೆ ಈ ಹಿಂದೆ ಈ ಕಾಯ್ದೆ ಅಡಿಯಲ್ಲಿ ಹಿಟ್ ಅಂಡ್ ರನ್ ಕೇಸ್ ಗೆ ಎರಡು ವರ್ಷ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತಿತ್ತು ಈಗ ಹೊಸ ಕಾಯ್ದೆಯ ಪ್ರಕಾರ 10 ವರ್ಷ ಜೈಲು ಮತ್ತು 7 ಲಕ್ಷ ದಂಡವನ್ನು ವಿಧಿಸುತ್ತಿರುವುದು ಸರಿಯಲ್ಲ ಕೇಂದ್ರ ಸರ್ಕಾರ ಕೂಡಲೇ ಈ ಕಾಯ್ದೆಯನ್ನು ಹಿಂಪಡೆಯಬೇಕು ಇಲ್ಲದಿದ್ದರೆ ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರ ಕರೆ ನೀಡಿದ್ದೇವೆ ಮುಂದಿನ ದಿನಗಳಲ್ಲಿ ಇದರ ಪರಿಣಾಮ ಸಾರ್ವಜನಿಕರ ಮೇಲೆ ಬೀರುತ್ತದೆ ಕೂಡಲೇ ಕೇಂದ್ರ ಸರ್ಕಾರ ಎಚ್ಚೆತ್ತುಕೊಂಡು ಕಾಯ್ದೆಯನ್ನು ಹಿಂಪಡೆದು ಲಾರಿ ಚಾಲಕರ ಹಿಚರಕ್ಷಣೆ ಕಾಪಾಡಬೇಕು ಎಂದು ಒತ್ತಾಯಿಸಿದರು ಮನವಿ ಪತ್ರವನ್ನು ತಹಸಿಲ್ದಾರ್ ರೆಹಾನ್ ಪಾಷಾ ರವರಿಗೆ ಸಲ್ಲಿಸಿ ಸರ್ಕಾರಕ್ಕೆ ಮನವಿ ಮಾಡಿದರು.
ತಹಸಿಲ್ದಾರ್ ರೆಹಾನ್ ಪಾಷ ಮಾತನಾಡಿ ಮನವಿಯನ್ನು ಸ್ವೀಕರಿಸಲಾಗಿದ್ದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಿದರು
ಈ ಸಂಧರ್ಭದಲ್ಲಿ ಚಳ್ಳಕೆರೆ ಮಿನಿ ಲಾರಿ ಮಾಲೀಕರ ಸಂಘ ಅಧ್ಯಕ್ಷ ದನಂಜಯ್, ಚಳ್ಳಕೆರೆ ಟ್ಯಾಂಕರ್ ಲಾರಿ ಮಾಲೀಕರ ಸಂಘ ಅಧ್ಯಕ್ಷರು ನರಸಿಂಹ, ಆನಂದಪ್ಪ, ಮೋಹನ್, ಹನುಮಂತ. ಪ್ರಸನ್ನ ಕುಮಾರ್, ತಿಪ್ಪೇಸ್ವಾಮಿ, ಅಭಿಷೇಕ್, ಪ್ರಸಾದ್, ದಿನೇಶ್, ತಿಪ್ಪೇಸ್ವಾಮಿ, ಇತರರು ಪಾಲ್ಗೊಂಡಿದ್ದರು.
0 Comments