ಚಳ್ಳಕೆರೆ ಸೆ.13. ನಗರ ಹಾಗೂ ಗ್ರಾಮೀಣ ಭಾಗದ ಬಡಕುಟುಂಬಸ್ಥರಿಗೆ ಖಾಯಿಲೆ ಇದೆ ಎಂದು ಗೊತ್ತಾದರೂ ಕೆಲಗಳ ಒತ್ತಡ ಹಾಗೂ ಹಣದ ಕೊರತೆಯಿಂದ ಚಿಕಿತ್ಸೆ ಪಡೆಯದೇ ಸಾವು ನೋವು ಅನುಭವಿಸುತ್ತಾರೆ ಪ್ರತಿ ಮನೆಗೂ ಭೇಟಿ ನೀಡಿ ಆಯುಷ್ ಮಾನ್ ಭವ ಯೋಜನೆ ಬಗ್ಗೆ ಅರಿವು ಮೂಡಿಸುವಂತೆ ಶಾಸಕ ಟಿ.ರಘುಮೂರ್ತಿ ಕಿವಿಮಾತು ಹೇಳಿದರು. ನಗರದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಆವರಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಭಾರತ್ ಆಯುಷ್ಮಾನ್ ಭವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹತ್ತು ಹಲವು ಉಚಿತ ಆರೋಗ್ಯ ತಪಾಷಣೆ ಹಾಗೂ ಚಿಕಿತ್ಸೆಗೆಂದು ಯೋಜನೆಗಳನ್ನು ಜಾರಿಗೊಳಿಸುತ್ತಿದ್ದು ಅವುಗಳನ್ನು ಕಟ್ಟಕಡೆಯ ಅರ್ಹರಿಗೆ ಯಾರೂ ಅನಾರೋಗ್ಯದಿಂದ ನರಳದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಯೋಜನೆಗಳನ್ನು ಮನೆಬಾಗಿಲಿಗೆ ತಲುಪಿಸುವ ಕೆಲಸ ಮಾಡಬೇಕು.
ಆರೋಗ್ಯವೆಂಬುದು ಪ್ರತಿಯೊಬ್ಬ ವ್ಯಕ್ತಿಗೆ ಮುಖ್ಯವಾಗಿರುತ್ತದೆ ಬಡವರು ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಾದಾಗ ವೈದ್ಯರು ಸೂಕ್ತ ರೀತಿಯಲ್ಲಿ ಚಿಕಿತ್ಸೆ ನೀಡಬೇಕು ಹಾಗೂ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ತಿಳಿಸಿ ಆ ಮೂಲಕ ಸಾರ್ವಜನಿಕರಿಗೆ ನೆರವಾಗಬೇಕು ಆಯುಷ್ಮಾನ್ ಭವ ಆರೋಗ್ಯ ಗುರುತಿನ ಚೀಟಿಗಳನ್ನು ಅಂಗನವಾಡಿ. ಹಾಗೂ ಆಶಾ ಕಾರ್ಯಕರ್ತೆಯರು ಪ್ರತಿ ಮನೆಗಳಿಗೆ ತಲುಪಿಸುವ ಕಾರ್ಯ ಮಾಡಬೇಕು ಸಾರ್ವಜನಿಕರು ಇಂತಹ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಂಡು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ತಿಳಿಸಿದರು.
ತಾಲೂಕು ಆರೋಗ್ಯ ಅಧಿಕಾರಿ ಡಾ ಕಾಶಿ ಮಾತನಾಡಿ ಆಯುಷ್ಮಾನ್ ಭವ ಆಪ್ ಕಾ ದ್ವಾರ್ ಎಂಬ ಯೋಜನೆಯು ಕೇಂದ್ರ ಸರ್ಕಾರದ ಅಡಿಯಲ್ಲಿ ಜಾರಿಯಾಗಿದ್ದು ಐದು ವರ್ಷ ವಯಸ್ಸಿನ ಮೇಲ್ಪಟ್ಟ ಎಲ್ಲಾ ಸಾರ್ವಜನಿಕರು ಈ ಯೋಜನೆಗೆ ಅರ್ಹರಾಗಿರುತ್ತಾರೆ. ಪ್ರತಿ ಮನೆ ಬಾಗಿಲಿಗೆ ಈ ಯೋಜನೆಯ ಕಾರ್ಡ್ ಗಳನ್ನು ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ತಲುಪಿಸಲಿದ್ದಾರೆ ಈ ಯೋಜನೆ ಸಾಂಕೇತಿಕವಾಗಿ ಸಪ್ಟೆಂಬರ್ 17 ರಿಂದ ಆರಂಭವಾಗಲಿದ್ದು ಗ್ರಾಮ ಒನ್ ಕೇಂದ್ರದಲ್ಲಿ ಸಾರ್ವಜನಿಕರು ನೋಂದಾಯಿಸಿಕೊಳ್ಳಬೇಕು
ಈ ಯೋಜನೆ ಅಡಿಯಲ್ಲಿ ಪ್ರತಿ ಮಂಗಳವಾರ ನಗರ ಗ್ರಾಮೀಣ ಪ್ರದೇಶಗಳಲ್ಲಿ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಹಾಗೂ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿ ಸಾಂಕ್ರಾಮಿಕ ರೋಗಗಳ ತಪಾಸಣೆ ಚುಚ್ಚುಮದ್ದು ಕಾರ್ಯಕ್ರಮ ಯೋಗ ಧ್ಯಾನ ಶಿಬಿರಗಳನ್ನು ಹಮ್ಮಿಕೊಳ್ಳಲಾಗುವುದು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಸಗಿ ವೈದ್ಯರ ಸಹಭಾಗಿತ್ವದಲ್ಲಿ ಆರೋಗ್ಯ ಮೇಳಗಳನ್ನು ಹಮ್ಮಿಕೊಂಡು ಆರೋಗ್ಯ ಕಾಳಜಿಯ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲಾಗುವುದು
ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಅಕ್ಟೋಬರ್ 2 ರಿಂದ ಆಯುಷ್ಮಾನ್ ಸಭಾ ಕಾರ್ಯಕ್ರಮ ಹಮ್ಮಿಕೊಂಡು ವಾರ್ಡ್ ಸಭೆ ಗ್ರಾಮ ಸಭೆಗಳ ಮೂಲಕ ಸ್ಥಳದಲ್ಲಿ ಆಯುಷ್ಮಾನ್ ಭವ ಕಾರ್ಡ್ ಗಳನ್ನು ವಿತರಿಸಲಾಗುವುದು ಹಾಗೂ ಆರೋಗ್ಯಕ್ಕೆ ಸಂಬಂಧಿಸಿದಂತೆ ಮಾಹಿತಿಗಳನ್ನು ಸಾರ್ವಜನಿಕರಿಗೆ ತಿಳಿಸಲಾಗುವುದು ಈ ಯೋಜನೆ ಅಡಿಯಲ್ಲಿ ಗ್ರಾಮ ಪಂಚಾಯಿತಿಗಳು 100ರಷ್ಟು ಉತ್ತಮ ಸಾಧನೆ ಮಾಡಿದರೆ ಅಂತಹ ಪಂಚಾಯತಿಗಳನ್ನು ಹಾಗೂ ವಾರ್ಡ್ ಗಳನ್ನು ಗುರುತಿಸಿ ಪ್ರಶಸ್ತಿಗಳನ್ನು ನೀಡಲಾಗುವುದು ಎಂದು ತಿಳಿಸಿದರು.
ಅರ್ಯಕ್ರಮದಲ್ಲಿ ನಗರದಭೆ ಸ್ಥಾಯಿಸಮಿತಿ ಅಧ್ಯಕ್ಷ ಎಂ.ಜೆ.ರಾಘವೇಂಸ್ರ.ಸಾರ್ವಜನಿಕ ಆಸ್ಪತ್ರೆಯ ಆಡಳೀತಧಿಕಾರಿ ಡಾ.ವೆಂಕಟೇಶ್, ಪೌರಾಯುಕ್ತ ಸಿ.ಚಂದ್ರಪ್ಪ, ಹಿರಿಯ ಮುಖಂಡರಾದ ಸಿರಿಯಪ್ಪ,ದೊಡ್ಡ ರಂಗಪ್ಪ,ಹಾಗೂ ಆಸ್ಪತ್ರೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
0 Comments