ಚಳ್ಳಕೆರೆ ಸೆ.13ತಾಂತ್ರಿಕವಾಗಿ ಬೆಳೆಯುತ್ತಿರುವ ಇಂದಿನ ಯುಗವನ್ನು ಜ್ಞಾನದ ಯುಗ. ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಅಕ್ಷ ರಾಭ್ಯಾಸಕ್ಕೆ ಸೀಮಿತವಾಗದೆ. ಜತೆಗೆ ಜ್ಞಾನದ ಅವಶ್ಯಕತೆಯಿರುವುದರಿಂದ ಪ್ರಾಥಮಿಕ ಹಾಗೂ ಪ್ರೌಢಶಾಲೆ ಹಂತದಲ್ಲೇ ಮಕ್ಕಳಿಗೆ ವಿಜ್ಞಾನ ಶಿಕ್ಷ ಣದ ಬಗ್ಗೆ ಅಭಿರುಚಿ ಬೆಳೆಸ ಬೆಕೆಂದು ಶಾಸಕ ಟಿ.ರಘುಮೂರ್ತಿ ಕಿವಿಮಾತು ಹೇಳಿದರು.
ನಗರದ ಕುವೆಂಪು ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸಭಾಂಗಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಪ್ರೌಢಶಾಲಾ ವಿಜ್ಞಾನ ಶಿಕ್ಷಕರ ಸಂಘ ಹಾಗೂ ವಿದಿಧ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ವಿದ್ಯಾರ್ಥಿಗಳು ವಿಜ್ಞಾನದ ಬಗ್ಗೆ ವೈಜ್ಞಾನಿಕ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಹೊಸ ಹೊಸ ಅವಿಷ್ಕಾರಗಳನ್ನು ಕಂಡು ಹಿಡಿಯ ಬೇಕು ತಾಂತ್ರಿಕವಾಗಿ ಬೆಳೆಯುತ್ತಿರುವ ಇಂದಿನ ಯುಗವನ್ನು ಜ್ಞಾನದ ಯುಗ. ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಅಕ್ಷ ರಾಭ್ಯಾಸ ಇದ್ದರೆ ಸಾಕಾಗಾದು. ಜತೆಗೆ ಜ್ಞಾನದ ಅವಶ್ಯಕತೆ ಇಂದಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಅದರಲ್ಲೂ ಪ್ರಾಥಮಿಕ ಹಾಗೂ ಪ್ರೌಢಶಾಲೆ ಹಂತದಲ್ಲೇ ಮಕ್ಕಳಿಗೆ ವಿಜ್ಞಾನ ಶಿಕ್ಷ ಣದ ಬಗ್ಗೆ ಅಭಿರುಚಿ ಬೆಳೆಸುವುದು ಅತ್ಯವಶ್ಯಕತೆ ಇದೆ. ತಾಲೂಕಿನಲ್ಲಿ ಕೇವಲ ಉತ್ತೀರ್ಣರಾಗಲು ಅಂಕಗಳನ್ನು ತೆಗೆಯುವುದನ್ನು ಬಿಟ್ಟು ವಿಜ್ಞಾನದಲ್ಲಿ ಹೊಸ ತಂತ್ರಜ್ಞಾನ ಕಂಡುಹಿಯುವ ವಿಜ್ಞಾನಿಗಳಾಗ ಬೇಕು ತಾಲೂಕಿಗೆ ಅವಶ್ಯಕತೆ ಇಲ್ಲದಿದ್ದರೂ ದೇಶಕ್ಕೆ ಅವಶ್ಯಕತೆ ಯಾಗಲು 11800, ಎಕರೆ ಸರಕಾರಿ ಭೂಮಿನ್ನು ನೀಡಿರುವುದರಿಂದ ಪ್ರಪಂಚದ ಭೂಪಟ ದಲ್ಲಿ ಚಳ್ಳಕೆರೆ ನೋಡುವಂತಾಗಿದೆ. ಭಾರತ ದೇಶ ಚಂದ್ರಯಾನ 3 ಯಶಸ್ವಿಯಾಗಿ ಉಡಾವಣೆ ಮಾಡಿ ವಿಶ್ವಕ್ಕೆ ಭಾರತ ವಿಜ್ಞಾನದಲ್ಲಿ ಮುಂದಿದೆ ಎಂದು ತೋರಿಸಿದರು ಅದೇ ರೀತಿ ವಿದ್ಯಾರ್ಥಿಗಳು ಕೂಡ ಕೇವಲ ಓದುವುದರಲ್ಲಿ ಸೀಮಿತವಾಗದೆ ಹೊಸ ಆವಿಷ್ಕಾರ ತೊಡಗಿ ಕೊಳ್ಳಬೇಕು ಎಂದು ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಶ್ ಮಾತನಾಡಿ, ಪಠ್ಯ ಪುಸ್ತಕಗಳನ್ನು ಓದಿ ಪರೀಕ್ಷೆ ಬರೆಯುವುದಕ್ಕೆ ಸೀಮಿತಗೊಳಿಸದೇ ಮಕ್ಕಳಲ್ಲಿನ ಪ್ರತಿಭೆಯನ್ನು ಪ್ರದರ್ಶಿಸಲ ಕಲ್ಪಿಸುವುದು ಮುಖ್ಯ.ರಚನಾತ್ಮಕ ಹಾಗೂ ಗುಣಾತ್ಮಕ ಶಿಕ್ಷಣ ದೊರೆಯಬೇಕಾದರೆ ಮಕ್ಕಳು ಪತ್ಯೇತರ ಚಟುವ ಪಾಲ್ಗೊಳ್ಳುವುದು ಅಗತ್ಯ. ಈ ಕಾರಣದಿಂದ ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸುವ ನಿಟ್ಟಿನಲ್ಲಿ ವಿಜ್ಞಾನ ಪ್ರದರ್ಶನ ಏರ್ಪಡಿಸಲಾಗುತ್ತಿದೆ ವಿವಿಧ ಪ್ರೌಢಶಾಲೆಗಳಿಂದ 135 ಮಾಡೆಲ್ ಗಳನ್ನು ವಿದ್ಯಾರ್ಥಿಗಳು ತಯಾರಿಸಿದ್ದಾರೆ ಎಂದು ತಿಳಿಸಿದರು.

ನಿವೃತ್ತ ಪ್ರಚಾರ್ಯ ಶಿವಲಿಂಗಪ್ಪ ಮಾತನಾಡಿದರು. ಸ್ಥಾಯಿಸಮಿತಿ ಅಧ್ಯಕ್ಷ ಎಂ.ಜೆ.ರಾಘವೇಂದ್ರ
ಪೌರಾಯುಕ್ತ ಚಂದ್ರಪ್ಪ, ಪ್ತೌಢಶಾಲಾ ಶಿಕ್ಷಕರಾದ ಡಿ.ಟಿ.ಶ್ರೀನಿವಾಸ್. ಪಾಲಯ್ಯ .ಬಿ.ರಾಜುಕುಮಾರ್.ತಿಪ್ಪೇಸ್ವಾಮಿ.ಬಸವರಾಜ್.ರಂಗನಾಥ್. ಮಂಜುನಾಥ್.ಶಿವರಾಜ್. ಇತರರಿದ್ದರು.
0 Comments