ಕೈಕೊಟ್ಟ ಮಳೆ ಶೇಂಗಾ ಬೆಳೆ ಒಣಗಲು ಪ್ರಾರಂಭ ಅನ್ನದಾತ ಮಳೆಗಾಗಿ ಮುಗಿಲಿನತ್ತ ಕೈಮುಗಿದು ಮಳೆಗಾಗಿ ಪ್ರಾರ್ಥನೆ

by | 17/08/23 | ಕೃಷಿ

ಚಳ್ಳಕೆರೆ ಆ.17.ಕಳೆದ ತಿಂಗಳು ಸ್ವಲ್ಪಮಟ್ಟಿಗೆ ಕರುಣೆ ತೋರಿದ ಅಕಾಲಿಕ ಮಳೆ ನಂತರ ಮಾಯವಾದ ಮಳೆರಾಯ ಬಿತ್ತನೆ ಮಾಡಿದ ಬೆಳೆ ಬಾಡುತ್ತಿದ್ದು ಮತ್ತೊಂದೆಡೆ ರೋಗಬಾಧೆ ಕೂಡ ಹೆಚ್ಚಾಗಿದ್ದು ಅನ್ನದಾತರನ್ನು ಚಿಂತೆಗೀಡು ಮಾಡುವಂತಾಗಿದೆ. ಹೌದು ಇದು ಚಳ್ಳಕೆರೆ ತಾಲೂಕಿನ ಪ್ರಮುಖ ವಾಣಿಜ್ಯ ಬೆಳೆ ಬಡವರ ಬಾದಾಮಿ ಎಂದು ಖ್ಯಾತಿ ಪಡೆದಿರುವ ಶೇಂಗಾ ಬೆಳೆ ಮೇಲೆ
ಮಳೆರಾಯನ ವಕ್ರದೃಷ್ಟಿಯಿಂದ ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ಶೇಂಗಾ ಬೆಳೆಗಳು ಸಕಾಲಕ್ಕೆ ಮಳೆ ಬಾರದೆ
ಬಿಸಿಲಿನ ತಾಪಕ್ಕೆ ಬಾಡಲು ಪ್ರಾರಂಭವಾಗಿದ್ದು ಅನ್ನದಾತ ಮಳೆರಾಯನ ಕೃಫೆಗಾಗಿ ಮುಗಿಲು ನೋಡುವಂತಾಗಿದೆ. ರೈತರು ಮುಂಗಾರು ಹಂಗಾಮಿನಲ್ಲಿ ಸುರಿದ ಕಡಿಮೆ ಪ್ರಮಾಣದ ಮಳೆಯಿಂದ ಕಡಿಮೆ ಭೂಮಿ ತೇವಾಂಶ ಹಾಗೂ ಒಣ ಭೂಮಿಗೆ ದುಬಾರಿ ಬೆಲೆಯ ಬಿತ್ತನೇ ಶೇಂಗಾ ಬಿತ್ತನೆ ಮಾಡಿದ ನಂತರ ಕಳೆದ ತಿಂಗಳಲ್ಲಿ ಎಡೆಬಿಡದೆ ಸುರಿದ ಅಕಾಲಿಕ ಮಳೆಯಿಂದಾಗಿ ಶೇಂಗಾ ಬೆಳೆಯಲ್ಲಿ ಹೆಚ್ಚು ಕಳೆಹುಲ್ಲು ಬೆಳೆದು ಕಳೆತೆಗೆಯಲು ಕೀಟನಾಶಕ. ಎಡೆಕುಂಟೆ ಹೊಡೆದು ಕೂಲಿ ಹಾಳುಗಳ ಸಹಾಯದಿಂದ ಕಳೆ ಹುಲ್ಲು ಸ್ವಚ್ಚ ಪಡಿಸಿಕೊಂಡಿದ್ದು ಶೇಂಗಾ ಬೆಳೆ ಬಿತ್ತನೆ ಮಾಡಿ ಎರಡು ತಿಂಗಳು ಕಳೆದರೂ ಶೇಂಗಾ ಬೆಳೆ ನೆಲ ಬಿಟ್ಟು ಎತ್ತರಕ್ಕೆ ಬೆಳೆದಿಲ್ಲ ಈಗ ಹೂ .ಕಾಯಿ ಕಟ್ಟಲು ಪ್ರಾರಂಭಿಸಿದ್ದು ಮಳೆಯ ಕೊರತೆಯಿಂದ ಭೂಮಿಯಲ್ಲಿ ತೇವಾಂಶವಿಲ್ಲದೆ ಬೆಳೆಗಳು ಒಣಗಲು ಪ್ರಾರಂಭಿಸಿದ್ದು ಇನ್ನು ಒಂದು ವಾರದೊಳಗೆ ಮಳೆ ಬಾರದಿದ್ದರೆ ಬೆಳೆಗಳು ಸಂಪೂರ್ಣವಾಗಿ ಒಣಗಲಿದ್ದು ಈ ಬಾರಿಯೂ ಮಳೆ ಕೈಕೊಟ್ಟರೆ
ತೀವ್ರ ಬರಗಾಲಕ್ಕೆ ಸಿಲುಕುವ ಆತಂಕ ರೈತರಲ್ಲಿ ಮನೆ ಮಾಡಿದೆ.
ತಾಲೂಕಿನ ಮು೦ಗಾರು ಆರಂಭದಲ್ಲಿ ಉತ್ತಮ ಮಳೆ ಬಂದು ರೈತಾಪಿ
ವರ್ಗಕ್ಕೆ ಒಂದಿಷ್ಟು ಸಂತಸದ ಸನ್ನಿವೇಶ ಉಂಟಾಗಿ ಶೇಂಗಾ ಬಿತ್ತನೆ
ಮಾಡಿದ್ದರು. ಎಡಕು೦ಟೆ, ಕಳೆ, ತೆಗೆದು ಹೂವು ಕಾಯಿ ಕಟ್ಟುವ ಸಮಯಕ್ಕೆ
ಸರಿಯಾಗಿ ಮಳೆ ಕೈಕೊಟ್ಟ ಕಾರಣ ಬೆಳೆಗಳಿಗೆ ಕೊಳ, ಬೆಂಕಿ ರೋಗ
ಕಾಣಿಸಿಕೊಂಡಿತ್ತು. ಈಗ ಬಿಸಿಲಿನ ತಾಪ ಹೆಚ್ಚಾಗಿದ್ದು ರೈತರು ಸಾಲ-ಸೂಲ
ಮಾಡಿ ಬಿತ್ತನೆ ಮಾಡಿದ್ದ ಶೇ೦ಗಾ ಬೆಳೆಹೂವು, ಕಾಯಿಕಟ್ಟುವ ಸಮಯದಲ್ಲಿ
ಮಳೆ ಕೈ ಕೊಟ್ಟಿದ್ದರಿ೦ದ ಬೆಳೆ ಸುಟ್ಟು ಕರಲಾಗಲು ಪ್ರಾರಂಭಿಸಿದೆ.
. ಆಗೊಮ್ಮೆ ಈಗೊಮ್ಮೆ ಕೆಲವು ಕಡೆ ಮಳೆ
ಬಂದರೆ ಮತ್ತೊ೦ದು ಕಡೆ ಮಳೆ ಬಾರದೆ ಮುಗಿಲಿನತ್ತ ನೋಡುತ್ತ ರೈತ,
‘ಎಲ್ಲಿ ಓಡುವಿರಿ ನಿಲ್ಲಿ ನಿಲ್ಲಿ ಮೋಡಗಳೇ ನಾಲ್ಕು ಹನಿಯ ಚೆಲ್ಲಿ ಹೋಗಿ’
ಎಂದು ಪ್ರಾರ್ಥನೆ ಮಾಡಿದರೂ ಮಳೆರಾಯ ಕರುಣೆ ತೋರಿಸುತ್ತಿಲ್ಲ.
ಬಯಲು ಸೀಮೆಯ ರೈತರು ಸುಮಾರು 15 ವರ್ಷಗಳಿಂದ ಸಕಾಲಕ್ಕೆ
ಮಳೆ ಬೆಳೆಯಾಗದೇ ಅತಿವೃಷ್ಟಿ-ಅನಾವೃಷ್ಟಿಗೆ ಸಿಲುಕಿ ನಷ್ಟ ಅನುಭವಿಸು
ತ್ತಲೇ ಇದ್ದಾರೆ. ಬೆಳೆ ಬಾರದೆ ಇದಕ್ಕೆ ಸಂಬಂಧಿಸಿದ ವಿಮೆ ಸಹ ಬರದೇ
ರೈತರು ಸಾಲದ ದವಡಗೆ ಸಿಲುಕುವಂತೆ ಮಾಡಿದೆ. ಈ ಹಿಂದೆ ಮಾಡಿರುವ ಸಾಲ ಒಂದು ಕಡೆ
ಯಾದರೆ ಈಗ ಮತ್ತೆ ಮತ್ತೆ ಸಾಲ ಮಾಡಬೇಕಾದ ಸನ್ನಿವೇಶ ಎದುರಾಗು
ತಲೇ ಇವೆ. ಪ್ರತಿ ವರ್ಷದಂತೆ ಈ ಬಾರಿಯೂ ಈರುಳ್ಳಿ, ಶೇಂಗಾ, ತೊಗರಿ,ಸಜ್ಜೆ, ಜೋಳ ಸೇರಿದಂತೆ ವಿವಿಧ ಬೆಳೆಗಳನ್ನು ರೈತರು ಬಿತ್ತನೆ ಮಾಡಿದ್ದು,
ಮಳೆ ಕೈಕೊಟ್ಟ ಕಾರಣ ಋಷ್ಠಿ ಭೂ ಪ್ರದೇಶಗಳತ್ತ ಒಮ್ಮೆ ಕಣ್ಣು ಹಾಯಿಸಿದರೆ
ಹೊಲಗಳಲ್ಲಿ ಶೇಂಗಾ ಒಣಗಲು ಪ್ರಾರಂಭಿಸುವ ದೃಶ್ಯ ಕಂಡುಬರುತ್ತದೆ. ರೈತರಿಗೆ ಈ
ಬಾರಿಯೂ ಭರದ ಛಾಯೆ ಇದ್ದು ರೈತರಲ್ಲಿ ಆತಂಕವನ್ನುಂಟು ಮಾಡಿದೆ.
ಬೆಳೆ ಹಾನಿದರೂ ಅವೈಜ್ಞಾನಿಕ ಬೆಳೆ ವಿಮೆ ಪದ್ದತಿಯಿಂದ ಕಳೆದ
ವರ್ಷ ಬಿತ್ತನೆ ಮಾಡಿದ ಶೇಂಗಾ ಬೆಳೆ ನಷ್ಟ ವಾದರೂ ಬೆಳೆ ವಿಮೆ ಪಾವತಿ
ಮಾಡಿಲ್ಲ. ಈ ಬಾರಿಯೂ ಮಳೆಯಿಲ್ಲದೆ ಬೆಳೆಗಳು ಒಣ ಗಲು ಪ್ರಾರ೦ಭಿ
ಸಿದ್ದು ಈಗಲಾದರೂ ರೈತರು ಕಟ್ಟಿದ ಬೆಳೆ ವಿಮೆ ಈ ಬಾರಿಯಾದರು ಬಿಡುಗಡೆ ಮಾಡಲು ಸಂಬಂಧ ಪಟ್ಟ ಅಧಿಕಾರಿಗಳು ಮುಂದಾಗುವರೇ ಕಾದು ನೋಡ ಬೇಕಿದೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page