ಕೈ ಕೊಟ್ಟ ಮಳೆ ಒಣಗುತ್ತಿರುವ ಬೆಳೆಗಳು. ಬರದ ಛಾಯೆ.ಬರಪೀಡಿತ ಪ್ರದೇಶ ಪಟ್ಟಿಯಿಂದ ಚಳ್ಳಕೆರೆ ಹಿರಿಯೂರು ವಂಚಿತ ರೈತರ ಅಕ್ರೋಶ.

by | 27/08/23 | ಕರ್ನಾಟಕ, ಕೃಷಿ


ಚಳ್ಳಕೆರೆ ಆ.27.ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ಬೆಳೆಗಳಿಗೆ‌ ಮಳೆರಾಯನ ವಕ್ರದೃಷ್ಟಿಯಿಂದ ಬಾರದ ಮಳೆ ಶೇಂಗಾ ವಿವಿಧ ಬೆಳೆಗಳು ಕಮರಿಹೋಗುತ್ತಿದ್ದು ಈ ಬಾರಿಯೂ ಮಳೆಯಿಲ್ಲದೆ ಮುಂದಿನ ದಿನಗಳು‌ ತೀವ್ರ ಬರಗಾಲಕ್ಕೆ ಸಿಲುಕುವ ಆತಂಕ ರೈತರಲ್ಲಿ ಮನೆ ಮಾಡಿದೆ.
ತಾಲೂಕಿನ ಮುಂಗಾರು ಆರಂಭದಲ್ಲಿ ಅಲ್ಪಸ್ವಲ್ಪ ಮಳೆ ಬಂದು ರೈತಾಪಿ ವರ್ಗ ಸಾಲಾ ಸೂಲ ಮಾಡಿ ದುಬಾರಿ ಬಿತ್ತನೆ ಬೀಜ.ಗೊಬ್ಬರ.ಕೂಲಿ.ಕೃಷಿ ಸೇರಿದಂತೆ ಬೆಳೆ ಬಿತ್ತನೆ ಮಾಡಿ ಉತ್ತಮ ಇಳುವರಿ ಕನಸು ಕಂಡಿದ್ದ ರೈತರಿಗೆ ಮಳೆರಾಯನ ವಕ್ರದೃಷ್ಠಿಯಿಂದ ಶೇಂಗಾ.ತೊಗರಿ.ಸಜ್ಜೆ.ಜೋಳ ಸೇರಿದಂತೆ ವಿವಿಧ ಬೆಳೆಗಳು ಹೂವು.ಕಾಯಿ ಕಟ್ಟುವ ಮುನ್ನವೇ ಬಿಸಿಲಿನ ತಾಪಕ್ಕೆ ಕಮರಿ ಹೋಗುತ್ತಿದ್ದು ಇನ್ನು ಒಂದು ಮಳೆ ಬಾರದಿದ್ದರೆ ಸಂಪೂರ್ಣ ಬೆಳೆಗಳು ನೆಲಕಚ್ಚಲಿದ್ದು ಹಾಕಿದ ಬಂಡವಾಳವೂ ಕೈಸೇರದೆ ಈಗೆ ಒಂದು ತಿಂಗಳು ಮಳೆ ಬಾರದಿದ್ದರೆ ಜನ ಜಸನುವಾರುಗಳಿಗೆ ಕುಡಿಯುವ ನೀರು ಹಾಗೂ ಮೇವಿಗಾಗಿ ಪರದಾಡುವ ಸ್ಥಿತಿ ಎದುರಾಗಿ ತೀವ್ರ ಬರದ ಛಾಯೆ ಆವರಿದಲಿದೆ.

ಒಂದು ತಿಂಗಳಿನಿಂದ ಮೋಡ ಕವಿದ ವಾತಾವರಣ ಇದ್ದರೂ ಒಮ್ಮೆಯೂ
ಹದ ಮಳೆ ಬಿದ್ದಿಲ್ಲ. ಆಗೊಮ್ಮೆ ಈಗೊಮ್ಮೆ ಕೆಲವು ಕಡೆ ಮಳೆ
ಎಂದರೆ ಮತ್ತೊಂದು ಕಡೆ ಮಳೆ ಬಾರದೆ ಮುಗಿಲಿನತ್ತ ನೋಡುತ್ತ ರೈತ,
ಎಲ್ಲಿ ಓಡುವಿರಿ ನಿಲ್ಲಿ ನಿಲ್ಲಿ ಮೋಡಗಳೇ ನಾಲ್ಕು ಹನಿಯ ಚೆಲ್ಲಿ ಹೋಗಿ‌ ಎಂದು ಪ್ರಾರ್ಥನೆ ಮಾಡಿದರೂ ಮಳೆರಾಯ ಕರುಣೆ ತೋರಿಸುತ್ತಿಲ್ಲ.ಬಯಲು ಸೀಮೆಯ ರೈತರು ಸುಮಾರು ಕಳೆದ ಹದಿನೈದು ವರ್ಷಗಳಿಂದ ಸಕಾಲಕ್ಕೆ ಮಳೆ ಬೆಳೆಯಾಗದೇ ಅತಿವೃಷ್ಟಿ-ಅನಾವೃಷ್ಟಿಗೆ ಸಿಲುಕಿ ನಷ್ಟ ಅನುಭವಿಸು
ತ್ತಲೇ ಇದ್ದಾರೆ. ಬೆಳೆ ಬಾರದೆ ಇದಕ್ಕೆ ಸಂಬಂಧಿಸಿದ ವಿಮೆ ಸಹ ಬರದೇ ಸಾಲಗಾರರಾಗುತ್ತಲೇ ಇದ್ದಾರೆ. ಈ ಹಿಂದೆ ಮಾಡಿರುವ ಸಾಲ ಒಂದು ಕಡೆಯಾದರೆ ಈಗ ಮತ್ತೆ ಮತ್ತೆ ಸಾಲ ಮಾಡಬೇಕಾದ ಸನ್ನಿವೇಶ ಎದುರಾಗು ತ್ತಲೇ ಇವೆ. ಪ್ರತಿ ವರ್ಷದಂತೆ ಈ ಬಾರಿಯೂ ಈರುಳ್ಳಿ, ಶೇಂಗಾ,ತೊಗರಿ,ಸಜ್ಜೆ, ಜೋಳ ಸೇರಿದಂತೆ ವಿವಿಧ ಬೆಳೆಗಳನ್ನು ರೈತರು ಬಿತ್ತನೆ ಮಾಡಿದ್ದು,ಮಳೆ ಕೈಕೊಟ್ಟ ಕಾರಣ ಋಷ್ಠಿ ಭೂ ಪ್ರದೇಶಗಳತ್ತ ಒಮ್ಮೆ ಕಣ್ಣು ಹಾಯಿಸಿದರೆ ಹೊಲಗಳಲ್ಲಿ ಶೇಂಗಾ ಒಣಗಿರುವ ದೃಶ್ಯ ಕಂಡುಬರುತ್ತದೆ. ನೀರಾವರಿ ಇರುವ ಪ್ರದೇಶಗಳನ್ನು ಹೊರತುಪಡಿಸಿದರೆ ಮಿಕ್ಕಂತೆ ರೈತರಿಗೆ ಈಬಾರಿಯೂ ಭರದ ಛಾಯೆ ಇದ್ದು ರೈತರಲ್ಲಿ ಆತಂಕವನ್ನುಂಟು ಮಾಡಿದೆ.
ರೈತ ಸಂಘದ ಹಿರಿಯ ಉಪಾಧ್ಯಕ್ಷ ಕೆ.ಪಿ.ಭೂತಯ್ಯ ಜಮಧ್ವನಿ ಡಿಜಿಟಲ್ ಮೀಡಿಯಾದೊಂದಿಗೆಮಾತನಾಡಿ, ಬೆಳೆ ಹಾನಿ ಕುರಿತು ಕಂದಾಯ, ಕೃಷಿ ಮತ್ತು ವಿಮಾ ಕಂಪ
ಅಧಿಕಾರಿಗಳು ಸಮೀಕ್ಷೆ ನಡೆಸುತ್ತಿರುವ ಪದ್ಧತಿ ಅವೈಜ್ಞಾನಿಕವಾಗಿದ್ದು ಕಳೆದವರ್ಷ ಬಿತ್ತನೆ ಮಾಡಿದ ಶೇಂಗಾ ಬೆಳೆ ನಷ್ಟ ವಾದರೂ ಬೆಳೆ ವಿಮೆ ಪಾವತಿಮಾಡಿಲ್ಲ. ಈ ಬಾರಿಯೂ ಮಳೆಯಿಲ್ಲದೆ ಬೆಳೆಗಳು ಒಣ ಗಲು ಪ್ರಾರಂಭಿ
ಸಿದ್ದು ತಾಲೂಕಿನ ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಾವುದೋ‌ ಒಂದು ಮೂಲೆಯಲ್ಲಿ ಉತ್ತಮ ಫಸಲು ಇರುವ ಭೂಮಿಯನ್ನು ಆಯ್ಕೆಮಾಡಿಕೊಂಡು ವಿಮೆ ಮಂಜೂರಾತಿಗಾಗಿ ಕಳಿಸುವುದನ್ನು ಬಿಟ್ಟುಗ್ರಾ.ಪಂ. ವ್ಯಾಪ್ತಿಯ ಎಲ್ಲಭೂಮಿಗಳಲ್ಲೂ ಬೆಳೆವಿಮೆ ಕಂಪನಿ ಹಾಗೂ ಇಲಾಖೆ ಅಧಿಕಾರಿಗಳುನಡೆಸುತ್ತಿರುವ ರೈತ ವಿರೋಧಿ, ಅವೈಜ್ಞಾನಿಕ ಪದ್ಧತಿಕೂಡಲೇ ಕೈಬಿಟ್ಟು ಮಳೆ ಕೈಕೊಟ್ಟಿರುವ ಪೂರ್ಣ ಪ್ರದೇಶವನ್ನು ವಿಮೆಗೂಳ ಪಡಿಸಬೇಕೆಂದು ಸರಕಾರಗಳನ್ನು ಒತ್ತಾಯಿಸಿದ್ದಾರೆ.
ಬರಪಟ್ಟಿಯಿಂದ ವಂಚನೆ. ಜಿಲ್ಲೆಯಲ್ಲಿ ಮಳೆಯ ಅಭಾವ ಉಂಟಾಗಿದ್ದು, ಇದರಿಂದ ರೈತರು ಕಂಗಾಲಾಗಿದ್ದಾರೆ. ಇತ್ತ ಅಷ್ಟೊ, ಇಷ್ಟೋ ಬಿತ್ತನೆಯಾದ ಬೆಳೆಗಳು ಮಳೆಯಿಲ್ಲದೆ ಸೊರಗುತ್ತಿವೆ. ಮತ್ತೊಂದೆಡೆ ಸರ್ಕಾರ ಮಳೆ ಇಲ್ಲದಿರುವ ಪ್ರದೇಶಗಳನ್ನು ಬರ ಪೀಡಿತ ತಾಲೂಕುಗಳನ್ನು ಘೋಷಣೆ ಮಾಡಿದೆ.ಮತ್ತೊಂದೆಡೆ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಉಸ್ತುವರಿ ಸಚಿವ ಡಿ.ಸುಧಾಕರ್ ಕ್ಷೇತ್ರಹಿರಿಯೂರು ತಾಲೂಕು ಹಾಗೂ ಮೂರು ಬಾರಿ ಹ್ಯಾಟ್ರಿಕ್ ಗೆಲುವಿನ ಸರದಾರ ಕಾಂಗ್ರೇಸ್ ಶಾಸಕ ಟಿ.ರಘುಮೂರ್ತಿ ಕ್ಷೇತ್ರವಾದ ಚಳ್ಳಕೆರೆ ತಾಲೂಕುಗಳು ಸದಾ ಬರಪೀಡಿದ ಪ್ರದೇಶ ಎಂದು ಹಣೆ ಪಟ್ಟಿಕಟ್ಟಿಕೊಂಡಿದ್ದರೂ ಸಹ ಈ ಬಾರಿಯ ಬರಪೀಡಿತ ಪಟ್ಟಿಯಿಂದ ಕೈಬಿಡಲಾಗಿದೆ. ಆದ್ದರಿಂದ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ವಿರುದ್ಧ ಆಕ್ರೋಶಗಳು ಭುಗಿಲೆದ್ದಿವೆ.

ನಮ್ಮ ತಾಲೂಕಿನಲ್ಲಿ ಮಳೆಯಾಗಿಲ್ಲ, ಬಿತ್ತನೆ ಕಾರ್ಯ ಕೂಡ ನಡೆದಿಲ್ಲ. ಒಂದಿಷ್ಟು ಬಿತ್ತನೆಯಾದ ಬೆಳೆಗಳು ಮಳೆಯಿಲ್ಲದೆ ಒಣಗುತ್ತಿವೆ. ಮಳೆಗಾಗಿ ರೈತರು ಮುಗಿಲು ನೋಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸಚಿವರು ಹಿರಿಯೂರು ಹಾಗೂ ಚಳ್ಳಕೆರೆ ತಾಲೂಕನ್ನು ಬರ ಪೀಡಿತ ಪಟ್ಟಿಗೆ ಸೇರಿಸಿಲ್ಲ. ರೈತರ ಬಗ್ಗೆ ಎಳ್ಳಷ್ಟೂ ಕಾಳಜಿಯಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಉಂಟಾಗುತ್ತಿದೆ. ಇತ್ತ ಜಿಲ್ಲೆಯ ಏಕೈಕ ಜೀವನಾಡಿ ಆಗಿರುವ ವಾಣಿ ವಿಲಾಸ ಜಲಾಶಯಕ್ಕೆ ಸಹ ನೀರು ಹರಿದು ಬಂದಿಲ್ಲ. ಈಗಿದ್ದರೂ ಸಹ ಸಚಿವರು ಕ್ಷೇತ್ರ ಹಾಗೂ ಜಿಲ್ಲೆಯ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬರ ಪೀಡಿತ ಪ್ರದೇಶದ ಪಟ್ಟಿಯಲ್ಲಿ ,2018-19 ನೇ ಸಾಲಿನಲ್ಲಿ ಜಿಲ್ಲೆಯ ಹಿರಿಯೂರು.ಚಳ್ಳಕೆರೆ ಹೊಸದುರ್ಗ. ಮೊಳಕಾಲ್ಮೂ.ಹೊಳಲ್ಕೆರೆ . ಚಿತ್ರದುರ್ಗ ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಘೋಷಣೆ ಮಾಡಿತ್ತು ಆದರೆ 2022-23 ನೇ ಸಾಲಿನಲ್ಲಿ ಬಯಲು ಸೀಮೆ ಪ್ರದೇಶ ಎಂದು ಹಣೆ ಪಟ್ಟಿಕಕೊಂಡಿರುವ ಚಳ್ಳಕೆರೆ ಹಾಗೂ ಹಿರಿಯೂರು ತಾಲೂಕುಗಳನ್ನು ಪರಪೀಡಿತ ರಾಜ್ಯದ ಅತೀ ಕಡಿಮೆ ಮಳೆ ಬೀಳುವ ಪ್ರದೇಶ ಎಂದು ಚಳ್ಳಕೆರೆ ಗುರುತಿಸಿಕೊಂಡಿದೆ. ಆದರೂ ಇಂತಹ ಸಂದರ್ಭದಲ್ಲಿ ಚಳ್ಳಕೆರೆ ತಾಲೂಕನ್ನು ಗುರುತಿಸದಿರುವುದು ದುರ್ದೈವ ಸಂಗತಿಯಾಗಿದೆ ಎಂದು ರೈತರು ಆಕ್ರೋಶ ಹೊರಹಾಕಿದ್ದಾರೆ. ಈಗಲಾದರೂ ಸರಕಾರ ಕೈಬಿಟ್ಟಿರುವ ತಾಲೂಕುಗಳನ್ನು ಬರಪೀಡಿ ಪ್ರದೇಶ ಪಟ್ಟಿಗೆ ಸೇರಿಸುವರೇ ಕಾದು ನೋಡ ಬೇಕಾಗಿದೆ.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page