ಮೊಳಕಾಲ್ಮೂರು ಆ.17:
ಮೊಳಕಾಲ್ಮೂರು ನಗರ ಪ್ರದೇಶಗಳಲ್ಲಿ ಜಿಲ್ಲಾ ಮಟ್ಟದ ತಂಬಾಕು ತನಿಖಾ ತಂಡವು ತಂಬಾಕು ಉತ್ಪನ್ನಗಳ ಮಾರಾಟಗಾರರ ಅಂಗಡಿಗಳಿಗೆ ದಾಳಿ ಮಾಡಿ ದಂಡ ವಿಧಿಸಿದೆ.
ತಂಬಾಕು ಮತ್ತು ಕೊರೋನಾ ಕುರಿತು ಸಾರ್ವಜನಿಕರಲ್ಲಿ ಮತ್ತು ಅಂಗಡಿ ಮಾಲೀಕರಿಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡದಂತೆ, ಪಾನ್ ಮಸಾಲ, ತಂಬಾಕು ಜಗಿದು ಉಗಿಯದಂತೆ ತಡೆಗಟ್ಟಲು ಜಾಗೃತಿ ಮೂಡಿಸಲಾಯಿತು.
ಸಂಬಂಧಪಟ್ಟ ಸೆಕ್ಷನ್-4, 6ಎ ಮತ್ತು 6ಬಿ ಬೋರ್ಡ್ಗಳನ್ನು ಹಾಕಲು ಸೂಚಿಸಲಾಯಿತು ಮತ್ತು ಸೆಕ್ಷನ್-4 ಅಡಿಯಲ್ಲಿ 33 ಕೇಸುಗಳನ್ನು ದಾಖಲಿಸಿ ರೂ.3300 ದಂಡವನ್ನು, ಸೆಕ್ಷನ್-6ಎ ಅಡಿಯಲ್ಲಿ 3 ಕೇಸುಗಳನ್ನು ದಾಖಲಿಸಿ ರೂ. 300 ದಂಡವನ್ನು ಮತ್ತು ಸೆಕ್ಷನ್-6ಬಿ ಅಡಿಯಲ್ಲಿ 1 ಕೇಸುಗಳನ್ನು ದಾಖಲಿಸಿ ರೂ. 100 ದಂಡ ವಸೂಲಿ ಮಾಡಲಾಯಿತು.
ತಂಬಾಕು ದಾಳಿಯಲ್ಲಿ ತಾಲ್ಲೂಕು ಮಟ್ಟದ ತನಿಖಾ ತಂಡದ ಅಧಿಕಾರಿಗಳಾದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಬಿ.ಎಂ.ಪ್ರಭುದೇವ್, ಮೊಳಕಾಲ್ಮುರು ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಎನ್.ಮುನಿಸ್ವಾಮಿ, ಪಟ್ಟಣ ಪಂಚಾಯಿತಿ ಆರೋಗ್ಯ ನಿರೀಕ್ಷಣಾಧಿಕಾರಿ ಟಿ.ರವಿಕುಮಾರ್, ಹೆಡ್ಕಾನ್ಸ್ಟೇಬಲ್ ಕೆ.ಪಿ.ಶ್ರೀಧರ್ ಇದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments