ಕೋರೆಗಾಂವ್ ವಿಜಯಸ್ತಂಭದ ಇತಿಹಾಸ ಪ್ರತಿಯೊಬ್ಬರೂ ತಿಳಿದುಕೊಳ್ಳುವುದು ಅಗತ್ಯವಿದೆ ಎಂದು ಮಾಜಿ ಪುರಸಭೆ ಸದಸ್ಯ ಎಂ.ಶಿವಮೂರ್ತಿ.

by | 01/01/24 | ಸುದ್ದಿ

ಚಳ್ಳಕೆರೆ ಜನಧ್ವನಿ ವಾರ್ತೆ ಜ.1 ಕೋರೆಗಾಂವ್ ವಿಜಯಸ್ತಂಭದ ಇತಿಹಾಸ ಪ್ರತಿಯೊಬ್ಬರೂ ತಿಳಿದುಕೊಳ್ಳುವುದು ಅಗತ್ಯವಿದೆ ಎಂದು ಮಾಜಿ ಪುರಸಭೆ ಸದಸ್ಯ ಎಂ.ಶಿವಮೂರ್ತಿ ಹೇಳಿದರು.
ನಗರದ ಡಾ.ಬಿ.ಆರ್.ಅಬೇಡ್ಕರ್ ವೃತ್ತದಲ್ಲಿರುವ ಪ್ರತಿಮೆಗೆ ದಲಿತ ಸಂಘಟನೆಗಳ ಮಾಹಾ ಒಕ್ಕೂಟ ಬಹುಜನವಾದ ಹಾಗೂ ಭೀಮಾ ಕೋರೆಗಾಂವ್ ವಿಜಯದ ವರ್ಷಾಚರಣ ಅಂಗವಾಗಿ ಮಾಲಾರ್ಪಣೆ ನೆರೆವೇರಿಸಿ ಮಾತನಾಡಿದರು.


ಕೋರೆಗಾವ ಯುದ್ಧ ಡಾ. ಬಾಬಾ ಸಾಹೇಬ್ ಅಂಬೇಡ್ಕರರಿಗೆ ದಲಿತ ಹೋರಾಟಕ್ಕೆ ಮುನ್ನುಡಿ ಬರೆಯಿತು. ವಿಶ್ವಕ್ಕೆ ಕೋರೆಗಾಂವ್ ಯುದ್ಧವನ್ನು ಪರಿಚಯಿಸಿದ ಇತಿಹಾಸಕಾರ ಡಾ. ಅಂಬೇಡ್ಕರ. 1818 ಜನೆವರಿ 1 ಕೋರೆಗಾಂವ್ ಯುದ್ಧ ನಡೆದ ದಿನವಾಗಿದ್ದು ಭಾರತೀಯರು ಜ. 1 ಸ್ವಾಭಿಮಾನಿ ದಿನವನ್ನಾಗಿ ಆಚರಿಸಲು ಕರೆ ನೀಡಿದ್ದಾರೆ. ದೇಶದಲ್ಲಿ ಇಂದಿಗೂ ಕೋರೆಗಾಂವ ಯುದ್ಧವನ್ನು ಸ್ವಾಭಿಮಾನದ ಸಂಕೇತವಾಗಿ ಆಚರಿಸಲಾಗುತ್ತದೆ. ಕರ್ನಾಟಕದಲ್ಲಿ 1986ರಿಂದ ದಲಿತ ಸಂಘಟನೆಗಳು ವಿಜಯೋತ್ಸವ ಆಚರಿಸುತ್ತ ಬಂದಿವೆ ಎಂದು ತಿಳಿಸಿದರು
ದಲಿತ ಸಂಘಟನೆಗಳ ಮಹಾಒಕ್ಕೂಟದ ಅಧ್ಯಕ್ಷ ಉಮೇಶ್ ಬ್ಯಾನರ್ಜಿ ಮಾತನಾಡಿ ಅಸಾಧ್ಯ ಕಾರ್ಯವನ್ನು ಸಂಘಟನೆಯಿಂದ ಸಾಧ್ಯ ಮಾಡಿ ತೋರಿಸಿದ 1818ರ ಭೀಮಾ ಕೋರೆಗಾಂವ್ ಯುದ್ಧ ವಿಶ್ವಕ್ಕೆ ದಲಿತ ಹಾಗೂ ಭಾರತೀಯರ ಶಕ್ತಿಯನ್ನು ತೋರಿಸಿಕೊಟ್ಟ ಮಹಾಯುದ್ಧವಾಗಿದೆ. ಕೋರೆಗಾಂವ್ ಯುದ್ಧ ಪೇಶ್ವೆಯವರ ವಿರುದ್ಧ ಬ್ರಿಟೀಷರ ಪರವಾಗಿ ಮಾಡಲಾಯಿತು. ಬ್ರಿಟೀಷರ ಪರವಾಗಿ ಮಾಡಿದ ಏಕೈಕ ಯುದ್ಧದ ವಿಜಯೋತ್ಸವ ಆಚರಣೆ ಇದಾಗಿದೆ. ಪೇಶ್ವೆಯುವರು ದಲಿತರಿಗೆ ಮಾಡಿದ ಅವಮಾನದಿಂದಾಗಿ ಸಿಡಿದ್ದೆದ್ದ 800 ಸೈನಿಕರು ಪೇಶ್ವೆಯವರ ಬಲಿಷ್ಠ 32,000 ಸೈನಿಕರನ್ನು ಸೋಲಿಸಿ ಇತಿಹಾಸ ನಿರ್ಮಾಣ ಮಾಡಿದರು. ಇತಿಹಾಸದಲ್ಲಿ ಈ ಪ್ರಮಾಣದ ಸೈನ್ಯವನ್ನು ಸೋಲಿಸಿದ ದಾಖಲೆ ವಿಶ್ವದ ಯಾವುದೆ ದೇಶದ ಇತಿಹಾಸದಲ್ಲಿ ಕಂಡುಬರುವುದಿಲ್ಲ ಎಂದರು.

ಸಾಮಾಜಿಕ ಹೋರಾಟಗಾರ ಭೀನಕೆರೆ ಶಿವಮೂರ್ತಿ. ಮೈತ್ರಿ ದ್ಯಾಮಣ್ಣ ಮಾತನಾಡಿದರು. ಉಪಾಧ್ಯಕ್ಷ ಪೆನ್ನೇಶ್, ಡಿ.ಚಂದ್ರು, ಈಶ್ವರನಾಯಕ, ಜೆ.ಕೆ.ತಿಪ್ಪೇಸ್ವಾಮಿ, ರವಿಕುಮಾರ್ ನನ್ನಿವಾಳ, ವೀರಭದ್ರ, ಇತರರಿದ್ದರು.
.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page