ಕ್ಷಯ ಎಲ್ಲಿದ್ದರೂ ಅದು ಎಲ್ಲೆಡೆ ಇದ್ದಂತೆ” “ಕ್ಷಯಕ್ಕೆ ಭಯ ಬೇಡ ನಿಗದಿತ ಚಿಕಿತ್ಸೆ ಲಭ್ಯವಿದೆ” -ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ

by | 23/05/23 | ಆರೋಗ್ಯ


ಚಿತ್ರದುರ್ಗ ಮೇ.23:
ಕ್ಷಯ ರೋಗವು ಒಂದು ಸಾಂಕ್ರಾಮಿಕ ರೋಗ. ಚಿಕಿತ್ಸೆ ಪಡೆಯದ ಕ್ಷಯ ರೋಗಿ ಒಂದು ವರ್ಷಕ್ಕೆ 10 ರಿಂದ 15 ಜನರಿಗೆ ರೋಗವನ್ನು ಹರಡಬಲ್ಲನು ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ. ಮೂಗಪ್ಪ ಹೇಳಿದರು.
ಚಿತ್ರದುರ್ಗ ತಾಲ್ಲೂಕಿನ ಕ್ಯಾದಿಗೆರೆ ಗ್ರಾಮದಲ್ಲಿ ಮಂಗಳವಾರ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಮತ್ತು ಆರೋಗ್ಯ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ತಾಯಂದಿರ ಸಭೆಯಲ್ಲಿ ಅವರು ಮಾತನಾಡಿದರು.
ಶೀಘ್ರ ಪತ್ತೆ ತ್ವರಿತ ಚಿಕಿತ್ಸೆಯಿಂದ ಕ್ಷಯ ರೋಗವನ್ನು ಸಂಪೂರ್ಣವಾಗಿ ಗುಣಪಡಿಸಬಹುದು.
ಎರಡು ವಾರಕ್ಕಿಂತ ಹೆಚ್ಚು ಕೆಮ್ಮು ಸಹಿತ ಕಫ ಸಂಜೆ ವೇಳೆ ಜ್ವರ ಬರುವುದು, ಹಸಿವಾಗದಿರುವುದು, ತೂಕ ಕಡಿಮೆಯಾಗುವುದು, ಇಂತಹ ಲಕ್ಷಣಗಳು ಕಂಡು ಬಂದಲ್ಲಿ ಸಮೀಪದ ಸರ್ಕಾರಿ ಆಸ್ಪತ್ರೆಗಳಲ್ಲಿ ಕಫ ಪರೀಕ್ಷೆ ಮಾಡಿಸುವುದು ಒಳಿತು ಎಂದರು.
ಕ್ಷಯ ರೋಗ ದೃಢಪಟ್ಟ ರೋಗಿಗೆ ಸರ್ಕಾರದಿಂದ ಉಚಿತ ಔಷಧಿ ಒದಗಿಸಲಾಗುವುದು. ಚಿಕಿತ್ಸಾ ಅವಧಿಯಲ್ಲಿ ರೋಗಿಗೆ ಪೌಷ್ಟಿಕ ಆಹಾರಕ್ಕಾಗಿ ಮಾಸಿಕ ಐದು ನೂರು ರೂಪಾಯಿಗಳನ್ನು ಉಚಿತವಾಗಿ ರೋಗಿಯ ಬ್ಯಾಂಕ್ ಖಾತೆಗೆ ಹಾಕಲಾಗುವುದು. ರೋಗ ಹರಡದಂತೆ ಸಾರ್ವಜನಿಕರು ಆರೋಗ್ಯ ಮಾಹಿತಿ ಪಡೆದುಕೊಳ್ಳಬೇಕು. ರೋಗಿಯು ಎಲ್ಲೆಂದರಲ್ಲಿ ಉಗುಳಬಾರದು, ಕೆಮ್ಮುವಾಗ ಸೀನುವಾಗ ಕರವಸ್ತ್ರ ಬಳಕೆ ಮಾಡಬೇಕು. ವೈದ್ಯರ ಸಲಹೆಯಂತೆ ಸಂಪೂರ್ಣ ಚಿಕಿತ್ಸೆ 6 ರಿಂದ 8 ತಿಂಗಳು ಪಡೆದಲ್ಲಿ ರೋಗವನ್ನು ಹತ್ತಿಕ್ಕಬಹುದು ಎಂದರು.
ಶ್ರೀ ಧರ್ಮಸ್ಥಳ ಜ್ಞಾನವಿಕಾಸ ಸಮಿತಿ ಸಮನ್ವಯಾಧಿಕಾರಿ ಕೆ.ಬಿ.ಸುಧಾ ಅವರು ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಸಂಘದ ಸದಸ್ಯರುಗಳ ಸಭೆಗಳಲ್ಲಿ ಆರೋಗ್ಯ ಮಾಹಿತಿಯನ್ನು ಒದಗಿಸುವ ಮುಖಾಂತರ ಸಾರ್ವಜನಿಕರ ಆರೋಗ್ಯ ಕಾಪಾಡಿಕೊಂಡು ಅವರ ಅಭಿವೃದ್ಧಿಗೆ ಶ್ರಮಿಸುತ್ತಿರುವುದರಿಂದ ತಾಯಂದಿರುಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದರು.
ಸಭೆಯ ಅಧ್ಯಕ್ಷತೆಯನ್ನು ಎಸ್.ಸುನಂದ ವಹಿಸಿದ್ದರು. ಈ ಸಂದರ್ಭದಲ್ಲಿ ಸದಸ್ಯರುಗಳಾದ ಸಿ. ರೇಖಾ, ಶಿಲ್ಪ, ಅನಿತಾ, ಭಾರತಿ, ಎಂ. ಚೈತ್ರ, ಶಿಲ್ಪ. ರೇಣುಕಮ್ಮ ಸಂಸ್ಥೆಯ ತಾಲ್ಲೂಕ್ ನೋಡಲ್ ಅಧಿಕಾರಿ ಶಿವರಾಜ್ ನಾಯಕ್, 25ಕ್ಕೂ ಹೆಚ್ಚು ತಾಯಂದಿರು ಸಭೆಯಲ್ಲಿ ಭಾಗವಹಿಸಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page