ಚಳ್ಳಕೆರೆ ಜನಧ್ವನಿ ವಾರ್ತೆ ಏ30
ವಿರೋದ ಪಕ್ಷದವರು ಅಭಿವೃದ್ಶಿ ಕೆಲಸಗಳನ್ನು ಸಹಿಸಲಾರದೆ ಕ್ಷೇತ್ರದಲ್ಲಿ ಶಾಸಕರು ಏನು ಅಭಿವೃದ್ಧಿ ಮಾಡಿದ್ದಾರೆ ಚುನಾವಣೆಯಲ್ಲಿ ಮಾತ್ರ ಜನರ ಬಳಿ ಬರುತ್ತಾರೆ ಎಂಬ ಆರೋಗಳನ್ನು ಮಾಡುತ್ತಿದ್ದಾರೆ ಅಭಿವೃದ್ಧಿ ಮಾಡಿರುವ ಬಗ್ಗೆ ಅವರ ಕಣ್ಣಿಗೆ ಕಾಣುವುದಿಲ್ಲವೇ ಎಂದು ಶಾಸಕ ಟಿ.ರಘುಮೂರ್ತಿ ಕಿಡಿಕಾರಿದ್ದಾರೆ.
ಚಳ್ಳಕೆರೆ ವಿಧಾನಸಭಾಕ್ಷೇತ್ರ ವ್ಯಾಪ್ತಿಯ ಸೋಮಗುದ್ದು, ಸಾಣೀಕೆರೆ. ಸೇರಿದಂತೆ ವಿವಿಧ ಗ್ರಾಮಗಳಲ್ಲಿ ರೋಡ್ ಶೋ ಹಾಗೂ ಮನೆ ಮನೆಗೆ ಭೇಟಿ ನೀಡಿ ಮತಯಾಚನೆ ಮಾಡಿದರು.
ಕಳೆದ ಹತ್ತು ವರ್ಷಗಳ ನನ್ನ ಅವಧಿಯಲ್ಲಿ ಶಿಕ್ಷಣ, ಕುಡಿಯುವ ನೀರು, ರಸ್ತೆ ,ಸರಕಾರಿ ಶಾಲ ಕಾಲೇಜ್ ಕಟ್ಟಡಗಳ ಅಭಿವೃದ್ಧಿ, ಕೆರೆ ಅಭಿವೃದ್ಧಿ ಹಾಗೂ ನೀರಾವರಿಗೆ ಹೆಚ್ಚು ಒತ್ತು ಕೊಡುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದೇನೆ ಮೇ 10 ರಂದು ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ 3 ನೇ ಕ್ರಮ ಸಂಖ್ಯೆ ಹಸ್ತದ ಗುರುತಿಗೆ ನಿಮ್ಮ ಅಮೂಲ್ಯವಾದ ಮತವನ್ನು ಹಾಕುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಕಾಂಗ್ರೆಸ್ ಸರಕಾರದಿಂದ ಮಾತ್ರ ಬಡವರ,ದೀನ ದಲಿತ, ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿ ಸಾಧ್ಯ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ಶಾಸಕ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಟಿ.ರಘುಮೂರ್ತಿ ಮನವಿ ಮಾಡಿಕೊಂಡರು.
ಈ ಸಂದರ್ಭದಲ್ಲಿ ಗ್ರಾಮದ ಮಹಿಳೆಯರು ಮುಖಂಡರು ಶಾಸಕ ಟಿ.ರಘುಮೂರ್ತಿ ಅಣ್ಣನವರಿಗೆ ಕಾಂಗ್ರೆಸ್ ಪಕ್ಷಕ್ಕೆ ಹಸ್ತದ ಗುರುತಿಗೆ ನೀವು ಮತ ಕೇಳದಿದ್ದರೂ ನಾವು ನಿಮಗೆ ಮತ ಹಾಕುತ್ತೇವೆ ಎಂದು ಭರವಸೆ ನೀಡಿದರು.
ಮುಖಂಡರು ಮಹಿಳೆಯರು ಮಂಗಳಾರತಿ ವಾದ್ಯ ಬ್ಯಾಂಡ್ ಸೆಟ್ ಮಾಡುವುದರ ಮೂಲಕ ಅದ್ದೂರಿ ಸ್ವಾಗತವನ್ನು ಮಾಡಿದರು ನಂತರ ಹೂವಿನ ಹಾರವನ್ನು ಹಾಕುವುದರ ಮೂಲಕ ಈ ಬಾರಿ ಗೆಲುವು ನಿಮ್ಮದೇ ಎಂದು ಆಶೀರ್ವಾದ ಮಾಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಮುಖಂಡರು, ಚುನಾಯಿತ ಪ್ರತಿನಿಧಿಗಳು, ಅಭಿಮಾನಿ ಬಳಗದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಚುನಾವಣಾ ಪ್ರಚಾರವನ್ನು ಯಶಸ್ವಿಯಾಗಿ ಮಾಡಿದರ
0 Comments