ಚಳ್ಳಕೆರೆ ಜನಧ್ವನಿ ವಾರ್ತೆ ಏ 21.
ಚಳ್ಳಕೆರೆ ವಿಧಾನ ಸಭಾ ಕ್ಷೇತ್ರವ್ಯಾಪ್ತಿಯ ವಿವಿಧ ಗ್ರಾಮ ಹಾಗೂ ನಗರದಲ್ಲಿ ವಿವಿಧ ಪಕ್ಷದ ಮುಖಂಡರು ಹಾಗೂ ವರ್ತಕರು ಕಾಂಗ್ರೆಸ್ ಪಕ್ಷದ ಅಭಿವೃದ್ಧಿ ಹಾಗೂ ಜನ ಪರ ಯೋಜನೆಗಳನ್ನು ಮೆಚ್ಚಿ ಕಾಂಗ್ರೆಸ್ ಪಕ್ಷಕ್ಕೆ ಸೇರುವ ಮೂಲಕ ಬೆಂಬಲ ವ್ಯಕ್ತ ಪಡಿಸುತ್ತಿದ್ದಾರೆ ಎಂದು ಶಾಸಕ ಟಿ.ರಘುಮೂರ್ತಿ ಹರ್ಷವ್ಯಕ್ತಪಡಿಸಿದರು.
ತಾಲೂಕಿನ ಪರಶುರಾಂಪುರ ಗ್ರಾಮದಲ್ಲಿ ಸ್ವಯಂ ಪ್ರೇರಿತರಾಗಿ ಬಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಹಾಗೂ ವಿಧಾಸನ ಸಭೆ ಚುನಾವಣೆ ಮತಯಾಚನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಕಾಂಗ್ರೆಸ್ ಸರಕಾರ ಅವಧಿಯಲ್ಲಿ ರಾಜ್ಯದಲ್ಲಿ ಗುಡಿಸಲು ಮುಕ್ತ ಮಾಡುವ ಉದ್ದೇಶದಿಂದ ಆಶ್ರಯ, ಅಂಬೇಡ್ಕರ್, ಸೇರಿದಂತೆ ವಿವಿಧ ವಸತಿ ಯೋಜನೆಯಡಿ ಕ್ಷೇತ್ರದಲ್ಲಿ ಸಾಕಷ್ಟು ವಸತಿ ಸೌಲಭ್ಯ ಕಲ್ಪಿಸಿದ್ದು. ಬಿಜೆಪಿ ಸರಕಾರದಲ್ಲಿ ಮನೆಗಳನ್ನು ನೀಡಿಲ್ಲ ನಾನು ಕಾಂಗ್ರೆಸ್ ಶಾಸಕ ಎಂದು ಕ್ಷೆತ್ರದಕ್ಕೆ ಅನುದಾನ ಬಿಡುಗಡೆ ಮಾಡಿದ ಅನುದಾನ ಹಿಂಪಡೆದಿದ್ದಾರೆ ಇದರಿಂದ ಅಭಿವೃದ್ಧಿಗೆ ಸ್ವಲ್ಪ ಹಿನ್ನೆಡೆಯಾಗಿದೆ.
ಅದರೂ ಸಹ ಸರಕಾರದ ಅಡಿಯಲ್ಲಿ ಬರುವ ಸುಮಾರು ೪೦ ಇಲಾಖೆಗಳ ಕಾರ್ಯಕ್ರಗಮನ್ನು ಎಲ್ಲಾ ವರ್ಗದ ಬಡ ಜನರಿಗೆ ಅನುಕೂಲವಾಗುವಂತೆ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಇದಲ್ಲದೆ ಸಾರ್ವಜನಿಕರಿಗೆ ಅನುಕೂಲವಾಗುವಂತೆ ನಗರ ವ್ಯಾಪ್ತಿಯ ಸಾರಿಗೆ ಬಸ್ನಿಲ್ದಾಣ, ಮಿನಿ ವಿಧಾನರ್ಸೌ, ಮಹಿಳಾ ಮಕ್ಕಳ ಆಸ್ಪತ್ರೆ, ರಂಗಮAದಿರ, ದೇವರಾಜ್ ಅರಸು ಭವನ, ಪರಶುರಾಂಪುರ ಹೋಬಳಿ ಕೇಂದ್ರದಲ್ಲಿ ಐ ಟಿ.ಐ ಕಾಲೇಜು ಸ್ಥಾಪನೆ ಶಾಸಕನಾಗಿ ಆಯ್ಕೆಯಾದ ದಿನದಿಂದ ೧೦ ವರ್ಷಗಳ ಅವಧಿಯಲ್ಲಿ ಸಹಕಾರದಿಂದ ಸಾರ್ವಜನಿಕರ ಅವಶ್ಯಕತೆಗಳನ್ನು ಅರಿತು ಸಮಯ ಪ್ರಜ್ಞೆಯಿಂದ ನಾನು ಕರ್ತವ್ಯವನ್ನು ನಿರ್ವಹಿಸಿದ್ದೇನೆ ಮತ್ತೊಮ್ಮೆ ನಿಮ್ಮ ಮುಂದೆ ಮತಯಾಚನೆ ಮಾಡಲು ಬಂದಿದ್ದೇನೆ ಮತ್ತೋಮ್ಮೆ ಮತದಾರ ಆರ್ಶೀವಾದ ಮಾಡುವಂತೆ ತಮ್ಮಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಈ ಬಾರಿಯೂ ನಾನು ಶಾಸಕ ನಾಗುವುದು ಖಚಿತ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಿದರು.
ಪರಶುರಾಂಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಶಿಧರ್ ಮಾತನಾಡಿ ಕ್ಷೇತ್ರದಲ್ಲಿ ಶಾಸಕರಾದ ಟಿ.ರಘುಮೂರ್ತಿಯವರು ಸಿದ್ದರಾಮಯ್ಯ ಮುಖ್ಯಂಮತ್ರಿಗಳ ಅವಧಿಯಲ್ಲಿ ಕ್ಷೇತ್ರಕ್ಕೆ ಸಾಕಷ್ಟು ಅನುದಾನ ತಂದು ಅಭಿವೃದ್ಧಿ ಮಾಡಿದ್ದಾರೆ ರಾಜ್ಯದಲ್ಲಿ ಹೊಸ ತಾಲೂಕುಗಳ ಘೋಷಣೆಯಲ್ಲಿ ಪರಶುರಾಂಪುರ ಹೋಬಳಿ ಹೆಸರು ಕೂಡ ಇತ್ತು ಇನ್ನೇನು ಹೆಸರು ಘೋಷಣೆ ಮಾಡುವ ಕೆಲವೆ ಗಂಟೆಗಳಲ್ಲಿ ರದ್ದು ಮಾಡಿರುವುದು ಶಾಸರಲ್ಲಿ ಬೇಸರ ತಂದಿದೆ ಈ ಬಾರಿ ರಾಜ್ಯದಲ್ಲಿ ಬಿಜೆಪಿ ಸರಕಾರ ಬರುವುದು ಖಚಿತತ ಪರಶುರಾಂಪುರ ಹೋಬಳಿ ಕೇಂದ್ರ ತಾಲೂಕು ಆಗುವುದು ಖಚಿತ ಮತ್ತೊಮ್ಮೆ ಶಾಸಕ ಟಿ.ರಘುಮೂರ್ತಿಯವರಿಗೆ ಮತನೀಡಿ ವಿಧಾನಸೌಧಕ್ಕೆ ಕಳಿಸುವಂತೆ ಮನವಿ ಮಾಡಿಕೊಂಡರು.
ಪರಶುರಾAಪುರ ಗ್ರಾಮದ ಶ್ರೀನಿವಾಸ್, ಸತೀಶ್, ಸಂದೀಪ್, ರಾಕೇಶ್, ಜಯಣ್ಣ, ರವಿ, ರಂಗನಾಥಯಾದವ್.ತಿಪ್ಪೇಸ್ವಾಮಿ,ಪ್ರಕಾಶ್, ಶುಭಾಷ್. ಗೋವಿಂದರಾಜ್ ಸೇರಿದಂತೆ ಇತರರು ಕಾಂಗ್ರೆಸ್ ಪಕ್ಷದ ಸಿದ್ದಾಂತ ಹಾಗೂ ಶಾಸರ ಕ್ಷೇತ್ರದ ಅಭಿವೃದ್ಧಿಗೆ ಮೆಚ್ಚಿ ವಿವಿಧ ಪಕ್ಷದ ಮುಖಂಡರು ಕಾರ್ಯಕ್ರರ್ತರು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡರು.
ನಿವೃತ್ತ ಪ್ರಾಚಾರ್ಯ ಬಿ.ವಿ.ಸಿರಿಯಣ್ಣ. ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments