ಚಳ್ಳಕೆರೆ 16 ನನ್ನ ಕೆಲಸ ನಾನು ಪ್ರಮಾಣಿಕವಾಗಿ ಮಾಡಿದ್ದೇನೆ. ಜನರು ನನ್ನ ಪರವಾಗಿದ್ದು ವಿರೋಧಿಗಳ ಮಾತಿಗೆ ಮನ್ನಣೆ ನೀಡಲ್ಲ ಜನರೇ ನನಗೆ ಸುಪ್ರೀಂ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.
ತಾಲೂಕಿನ ಡಿ.ಉಪ್ಪಾರಟ್ಟಿ ಗ್ರಾಮದಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಬಿಜೆಪಿ ಪಕ್ಷದ ಮಂಡಲ ಮಾಜಿ ಅಧ್ಯಕ್ಷರು ಸೇರಿ ಅನೇಕ ಮುಖಂಡರು ಬಿಜೆಪಿ ತೊರೆದು ಶಾಸಕ ಟಿ.ರಘುಮೂರ್ತಿ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಮಾತನಾಡಿದರು.
ಬಿಜೆಪಿ ಪಕ್ಷದ ವರ್ತನೆಯಿಂದ ಬೇಸತ್ತು ಕಾಂಗ್ರೆಸ್ ಪಕ್ಷಕ್ಕೆ ಬಿಜೆಪಿ ಮಂಡಲ ಅಧ್ಯಕ್ಷ ಸೇರುತ್ತಿರುವುದು ಅವರು ಎಷ್ಟು ನೊಂದಿದ್ದಾರೆ ಎಂಬುದು ತಿಳಿಯುತ್ತದೆ. ನಮಗೆ ಯಾದವ ಸಮಾಜದ ಮುಖಂಡರಾದ ಸಿರಿಯಣ್ಣ ಅಂತಹ ನಿಷ್ಠೆ ಇರುವವರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಬರುತ್ತಿರುವುದು ಮತ್ತಷ್ಟು ನಮ್ಮ ಶಕ್ತಿಯನ್ನು ಹೆಚ್ಚಿಸಿದೆ. ಅವರು ಕಾಂಗ್ರೆಸ್ ಪಕ್ಷದ ಅಭಿವೃದ್ಧಿ ಮೆಚ್ಚಿ ಬರುವ ಜೊತೆಗೆ ಅನೇಕ ಮುಖಂಡರು ಮತ್ತು ತಮ್ಮ ಬೆಂಬಲಿಗರ ಜೊತೆ ಕಾಂಗ್ರೆಸ್ ಸೇರಿದ್ದಾರೆ ಎಂದರು.
ಬಿಜೆಪಿ ಸರ್ಕಾರದ ಜನ ವಿರೋಧಿ ನೀತಿಯಿಂದ ಜನರು ಬೇಸತ್ತಿದ್ದಾರೆ. ಸರ್ಕಾರ ಬರುವವರೆಗೂ ಬಿಜೆಪಿಗೆ ಕಾರ್ಯಕರ್ತರು ಬೇಕು. ನಂತರ ಅವರನ್ನು ಹೀನಾಯವಾಗಿ ನಡೆಸಿಕೊಳ್ಳುತ್ತಾರೆ. ಕ್ಷೇತ್ರದಲ್ಲಿ ಸಾವಿರಾರು ಜನರು ಬಿಜೆಪಿ ಮತ್ತು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆ ಆಗುತ್ತಿದ್ದಾರೆ. ಜೆಡಿಎಸ್ ಪಕ್ಷದವರು ಕಾಂಗ್ರೆಸ್ ಸರ್ಕಾರದಲ್ಲಿ ಅಭಿವೃದ್ಧಿ ಆಗಿಲ್ಲ ಎಂದು ಹೇಳುತ್ತಾರೆ ಆದರೆ ಸ್ವಲ್ಪ ಕಣ್ಣು ಬಿಟ್ಟು ನೋಡಿದರೆ ಮಾತ್ರ ಅಭಿವೃದ್ಧಿ ಕಾಣುತ್ತದೆ. ಬಾಯಿ ಇದೆ ಅಂತ ಮಾತಡುವುದು ಅಲ್ಲ. ಎಲ್ಲಾ ರಾಜಕೀಯ ತಂತ್ರ ನಮಗೂ ಗೊತ್ತದೆ ಸಮಯ ನೋಡಿ ದಾಳ ಉರುಳಿಸುತ್ತೇನೆ ಎಂದು ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಕಿಡಿಕಾರಿದರು.
ಈ ಸಂದರ್ಭದಲ್ಲಿ ಬಿ.ಜೆ.ಪಿ. ಮಂಡಲ ಅಧ್ಯಕ್ಷರು ಹಾಗೂ ನಿವೃತ್ತ ಪ್ರಾಂಶುಪಾಲರು ಮತ್ತು ಗೋಕುಲ ಪತ್ತಿನ ಸಹಕಾರ ಸಂಘದ ಸಂಸ್ಥಾಪಕರು ಹಾಗೂ ಯಾದವ ಸಮುದಾಯದ ಮುಖಂಡ ಬಿ.ವಿ.ಸಿರಿಯಣ್ಣ , ಮುಖಂಡರಾದ ಗೋವಿಂದಪ್ಪ, ಆನಂದ, ಚಂದ್ರಣ್ಣ, ಶಿವಣ್ಣ ಸೇರಿ ಹಲವರು ಕಾಂಗ್ರೆಸ್ ಸೇರ್ಪಡೆ ಆದರು..
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ರವಿಕುಮಾರ್, ಚಳ್ಳಕೆರೆ ಪರಶುರಾಮಪುರ ಬ್ಲಾಕ್ ಕಾಂಗ್ರೆಸ್ ಶಶಿಧರ್, ಚಳ್ಳಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೀರಭದ್ರಪ್ಪ, ಮುಖಂಡರಾದ ಗುಂಡಣ್ಣ, ಯರ್ರಬಾಲಪ್ಪ, ಉಪ್ಪಾರ ಸಂಘದ ತಾಲೂಕ ಅಧ್ಯಕ್ಷರಾದ ಹನುಮಂತಪ್ಪ ಹಾಗೂ ಮುಖಂಡರು, ಕಾರ್ಯಕರ್ತರು ಇದ್ದರು.
0 Comments