ಖಾಜಾನೆ ತುಂಬುವ ವಾಣಿಜ್ಯ ಮಳಿಗೆಗಳ ನಿರ್ವಹಣೆಗೆ ಸಿಬ್ಬಂದಿ ಕೊರತೆ- ಸರಕಾರಿ ಮಳಿಗೆಗಳ ನಿರ್ವಹಣೆ ನಿರ್ಲಕ್ಕೆ ಸರಕಾರದ ಬೊಕ್ಕಸಕ್ಕೆ ನಷ್ಟ….

by | 12/05/24 | ತನಿಖೆ ವರದಿ


ಚಳ್ಳಕೆರೆ ಜನಧ್ವನಿ ವಾರ್ತೆ ಮೇ 8 ಸ್ಥಳೀಯ ಸಂಸ್ಥೆಗಳಿಗೆ ಆರ್ಥಿಕ ಶಕ್ತಿ ನೀಡಬೇಕಿದ್ದ ಸರಕಾರಿ ವಾಣಿಜ್ಯ ಮಳಿಗೆಗಳುಸರಕಾರಿ ಬೊಕ್ಕಸ ಸೇರುವ ಬದಲು ಪ್ರಭಾವಿಗಳ ಖಾಜನೆ ಸೇರುತ್ತಿದೆ ಎಂದು ಸಾರ್ವಜನಿಕರಿಂದ ಆರೋಪ ಒಂದು ಕಡೆಯಾದರೆ ಆಧಾಯ ತರುವ ಕಟ್ಟಡಗಳ ನಿರ್ವಹಣೆಗೆ ಸಿಬ್ಬಂದಿ ಕೊರತೆ ಎದ್ದು ಕಾಣುತ್ತಿದೆ.
ಹೌದು ಇದು ಚಳ್ಳೆಕರೆ ನಗರದ ತಾಲೂಕು ಪಂಚಾಯತ್ ಕಚೇರಿಗೆ ಸೇರಿದ 11 ಮಳಿಗಳಿದ್ದು ಬೆಂಗಳೂರು ರಸ್ತೆಯಲ್ಲಿ ಹೊಸ ಕಟ್ಟಡಗಳು 4, ಹಳೆಯ ಕಟ್ಟಡಗಳು 2 ಒಟ್ಟು 6 ವಾಣೀಜ್ಯ ಮಳಿಗಗಳಿವೆ . ಬಾಡಿಗೆ ದಾರರಿಗೆ ತಾಲೂಕು ಪಂಚಾಯತ್ ಕಚೇರಿಯಿಂದ 5 ವರ್ಷದ ಅಗ್ರಿಮೆಂಟ್ ಮಾಡಿಕೊಟ್ಟಿದೆ. ಪ್ರತಿ ತಿಂಗಳು ವಿದ್ಯುತ್ ಬಿಲ್ಲನ್ನು ನಾನೇ ಪಾವತಿ ಮಾಡಿಕೊಂಡು ಹೋಗುತ್ತೇನೆ ನನ್ನ ವಶದಲ್ಲಿರುವ ತನಕ ಈ ಮಳಿಗೆಯನ್ನು ಬೇರೆಯಾರಿಗೂ ಮರು ಬಾಡಿಗೆ, ಲೀಜ್ ವಗೈರೆ ಕೊಡುವುದಿಲ್ಲ. ಮಳಿಗೆ ಯಾವುದೇ ಜಖಂ ಆಗದಂತೆ ನೋಡಿಕೊಳ್ಳುತ್ತೇನೆ. ಸುಣ್ಣ-ಬಣ್ಣ ಮತ್ತು ಸಣ್ಣಪುಟ್ಟ ರಿಪೇರಿಗಳನ್ನು ನಾನೇ ಮಾಡಿಸಿ ಕೊಳ್ಳುತ್ತೇನೆ. ದೊಡ್ಡ ರಿಪೇರಿಗಳೇನಾದರೂ ಇದ್ದಲ್ಲಿ ತಮ್ಮ ಗಮನಕ್ಕೆ ತಂದು ಮಾಡಿಸಿ ಕೊಳ್ಳುತ್ತೇನೆ. ಗುತ್ತಿಗೆ ಅವಧಿ ಮುಗಿದ ತಕ್ಷಣ ಸದರಿ ಮಳಿಗೆಯನ್ನು ತಮ್ಮ ವಶಕ್ಕೆ ಬಿಟ್ಟುಕೊಡುತ್ತೇನೆ. ಹರಾಜು ಇಸ್ತಿಹಾರ್ನಲ್ಲಿ ವಿಧಿಸಿರುವ ಷರತ್ತುಗಳಿಗೆ ಬದ್ಧನಾಗಿರುತ್ತೇನೆ. ಈ ಬಗ್ಗೆ ಯಾವುದೇ ರೀತಿಯ ತಂಟೆ-ತಕರಾರುವಗೈರೆ ಮಾಡುವುದಿಲ್ಲ. ಎಂದು ಸಾಕ್ಷಿದಾರರ ಸಮಕ್ಷಮ ಒಪ್ಪಿ ಬರೆದುಕೊಟ್ಟ ಬಾಡಿಗೆ ಕರಾರು ಪತ್ರ ಇಷ್ಟೆಲ್ಲ ಷರತ್ ಬರೆದುಕೊಂಡ ಬಾಡಿಗೆ ಪಡೆದು ನಿಯಮಗಳನ್ನು ಗಾಳಿ ತೂರಿ ಸರಕಾರಿ ಮಳಿಗೆಯನ್ನೇ ಕಿತ್ತು ಹೊಸದಾಗಿ ಮಾಡಿಕೊಂಡಿರುವುದಲ್ಲದೆ. ಸರಕಾರಿ ಖಾಲಿ ಜಾಗದಲ್ಲಿಯೂ ಸಹ ಕಟ್ಟಡ ನಿರ್ಮಿಸಿಕೊಂಡು ಅಂಗಡಿ ವಿಸ್ತೀರ್ಣ ಮಾಡಿಕೊಂಡಿರುವ ಬಗ್ಗೆ ಜನಧ್ವನಿ ಡಿಜಿಟಲ್ ಮೀಡಿಯಾ ಮೇ 1 ರಂದು ಸುದ್ದಿ ಬಿತ್ತರಿಸಿ 12 ದಿನಗಳು ಕಳೆದರೂ ಯಾವ ಅಧಿಕಾರಿಗಳು ಇತ್ತ ಇಣಿಕಿ ನೋಡಿಲ್ಲ ಸುದ್ದಿ ಬೆಳಕು ಚೆಲ್ಲಿದ ನಂತರವೂ ಸಹ ಕಟ್ಟಡ ದುರಸ್ಥಿ ಕಾಮಗಾರಿ ನಿಲ್ಲಿಸದೇ ಇರುವುದು ಸಾರ್ವಜಿನರಲ್ಲಿ ಅನುಮಾನಕ್ಕೆ ಎಡೆ ಮಾಡಿದೆ.
ತಾಲೂಕು ಪಂಚಾಯತ್ ವಾಣಿಜ್ಯ ಮಳಿಗಳ ಬಾಡಿಗೆ ವಸೂಲಿ ಸೇರಿದಂತೆ ಅವುಗಳ ಲೆಕ್ಕ ಪತ್ರ ನಿರ್ವಹಣೆ ಮಾಡುವ ಸಿಬ್ಬಂದಿಯೇ ಎಲ್ಲ ಯಾರು ಬಾಡಿಗೆ ಕಟ್ಟಿದ್ದಾರೆ.? ಕಟ್ಟ ಬಾಡಿಗೆ ದಾರರ ಸರಿಯಾದ ದಾಖಲೆಗಳೂ ಸಹ ಕಚೇರಿಯಲ್ಲಿ ಇಲ್ಲದೆ ಇರುವುದು ಮತಷ್ಟು ಅನುಮಾನೆಕ್ಕೆ ಎಡೆ ಮಾಡಿದೆ.

ಬಾಡಿಗೆ ಪಡೆದ ರಾಘವೇಂದ್ರ ಮೆಟಲ್ ಸ್ಟೋರ್ ಮಾಲಿಕನಿಕೆ ಸುಮಾರು 20 ರಿಂದ 25 ವರ್ಷಗಳ ಕಾಲ ಲೀಜಿಗೆ ಕೊಟ್ಟಿದ್ದಾರೆ ಎಂಬ ಗುಸು ಗುಸು ಮಾತುಗಳೂ ಸಹ ಕೇಳಿ ಬರುತ್ತಿವೆ ಕೂಡಲೆ ಸಂಬಂಧಪಟ್ಟ ಮೇಲಾಧಿಕಾರಿಗಳ ಮಧ್ಯ ಪ್ರವೇಶಿಸಿ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವರೇ ಕಾದು ನೋಡ ಬೇಕಿದೆ.

ಒಂದು ವೇಳೆ ಅಧಿಕಾರಿಗಳ ಸ್ವಂತ ಮನೆಯನ್ನು ಬಾಡಿಗೆ ಪಡೆದ ಬಾಡಿಗೆ ದಾರರೂ ಈ ರೀತಿ ಮಾಡಿದ್ದರೆ ಸುಮ್ಮನೆ ಇರುತ್ತಿದ್ದರೆ ಎಂಬ ಪ್ರಶ್ನೆಗಳೂ ಸಹ ಕೇಳಿ ಬರುತ್ತಿದ್ದು .ಇಲಾಖೆಯ ಷರತ್ ಗಳನ್ನು ಗಾಳಿಗೆ ತೂರಿದ ಮಳಿಗೆ ದಾರರನಿಗೆ ಇದುವರೆಗೂ ಸಂಬಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಜರುಗಿಸದೆ ಇರುವುದು ಸಾರ್ವಜನಿಕರಲ್ಲಿ ಅನುಮಾನೆಕ್ಕೆ ಎಡೆಮಾಡಿದೆ.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page