ಖಾಯಂ ಪಿಡಿಓ ನೇಮಕ ಮಾಡದಿದ್ದರೆ ಧರಣಿ ನಡೆಸವದಾಗಿ ತಳಕು ಗ್ರಾಪಂ ಸದಸ್ಯರ ಆಗ್ರಹ.

by | 21/11/23 | ಜನಧ್ವನಿ


ಚಳ್ಳಕೆರೆ ನ.21 ಖಾಯಂ ಪಿಡಿಒ ಇಲ್ಲದೆ ಗ್ರಾಪಂ ಅಭಿವೃದ್ಧಿ ಕುಂಠಿತವಾಗಿದ್ದು ಕೂಡಲೆ ಮೂಲ ಪಿಡಿಒ ಹಾಕದಿದ್ದರೆ ಹೋರಾಟ ಮಾಡುವುದಾಗಿ ಗ್ರಾಪಂಸದಸ್ಯರು ಆಗ್ರಹಿಸಿದ್ದಾರೆ.
ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿ ಕೇಂದ್ರಸ್ಥಳದಲ್ಲಿರುವ ಗ್ರಾಮ ಪಂಚಾಯತ್ ಕಚೇರಿಯ ಪಂಚಾಯತ್ ಅಭಿವೃದ್ಧಿ ಕಾರಿ ಸುಮಾರು ವರ್ಷಗಳಿಂದ ಬೇರೆ ಕಡೆ ನಿಯೋಜನೆಗೊಂಡಿದ್ದು ಕಚೇರಿಯಲ್ಲಿ ಪಿಡಿಒಗಳನ್ನು ಪದೇ ಪದೇ ವರ್ಗಾವಣೆ ಮಾಡುವುದರಿಂದ ಯಾವದೇ ಅಭಿವೃದ್ಧಿಕಾಮಗಾರಿಗಳು ನಡೆಯುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಗ್ರಾಪಂ ಸದಸ್ಯ ಕರಿಂಸಾಬ್, ಮಾತನಾಡಿ ಮೊಳಕಾಲ್ಕೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ 4 ಹೋಬಳಿ ಮುಖ್ಯ ಕೇಂದ್ರವಾಗಿದ್ದು, 23 ಸದಸ್ಯರನ್ನು ಹೊಂದಿದೆ. 5 ಹಳ್ಳಿಗಳಿಂದ ಕೂಡಿದ ಪಂಚಾಯಿತಿಗೆ 4 ರಿಂದ 5 ಮುಜರೆ ಗ್ರಾಮಗಳು ಸೇರಿ 25 ಗ್ರಾಮಗಳಿವೆ.
ಈ ಪಂಚಾಯಿತಿಯಲ್ಲಿ ಎ ಗ್ರೇಡ್ ಕಾರ್ಯದರ್ಶಿಗಳು ವಾರದಲ್ಲಿ 3 ದಿನ ಮಾತ್ರ ಕೆಲಸಕ್ಕೆ ಬರುತ್ತಾರೆ. ಇದರಿಂದಾಗಿ ಗ್ರಾಮದ ಅಭಿವೃದ್ಧಿಯಾಗುತ್ತಿಲ್ಲ. 45 ಸಾವಿರ ಜನಸಂಖ್ಯೆ ಹೊಂದಿರುವ ಪಂಚಾಯಿತಿಯಲ್ಲಿ ಖಾಯಂ ಪಿಡಿಓ ಇಲ್ಲ. ಇದರಿಂದ ತುಂಬಾ
ತೊಂದರೆಯಾಗಿದೆ ಎಂದು ದೂರಿದರು. ತಳಕು ಪಂಚಾಯಿತಿ ಮೂಲಕ ಪಿಡಿಓ ಸುಮಾರು 32 ತಿಂಗಳುಗಳಿಂದ ವೇತನವನ್ನು ಮಾತ್ರ ಪಡೆಯುತ್ತಿದ್ದು ಕೆಲಸ ಮಾಡುತ್ತಿಲ್ಲ. ಅಲ್ಲದೆ ಅವರು ಎಲ್ಲಿ ಕೆಲಸ ಮಾಡುತ್ತಿದ್ದಾರೆ ಎಂಬುದು ಗೊತ್ತಿಲ್ಲ, ಪಂಚಾಯಿತಿ ಅಸ್ತಿತ್ವಕ್ಕೆ ಬಂದು 32 ತಿಂಗಳಾಗಿದ್ದು, ಇದುವರೆವಿಗೂ 9 ಜನ ಪಿಡಿಓಗಳು ಬಂದು ಹೋಗಿದ್ದಾರೆ. ಈ ಹಿನ್ನಲೆಯಲ್ಲಿ ಖಾಯಂ ಪಿಡಿಓರನ್ನು ಪಂಚಾಯಿತಿಗೆ
ನೀಡುವಂತೆ ಜಿ.ಪಂ. ಸಿಇಓ ಮತ್ತು ತಾ.ಪಂ. ಇಓರವರಿಗೆ ಮನವಿ ಮಾಡಲಾಗುತ್ತಾದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕರೀಂಸಾಬ್ ಇದುವರೆವಿಗೂ ಆರೋಪಿಸಿದರು.ತಕ್ಷಣ ಪಿಡಿಓ ನೇಮಕ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಜಿ.ಪಂ ಎದುರು ಗ್ರಾಮ ಪಂಚಾಯಿತಿಯ ಸದಸ್ಯರೆಲ್ಲಾ ಸೇರಿ ಅನಿರ್ಧಿಷ್ಟ ಕಾಲದವರೆಗೆ ಧರಣಿ
ನಡೆಸಲಾಗುವುದೆಂದು ಎಚ್ಚರಿಕೆ ನೀಡಿದರು. ಸುದ್ದಿಗೋಷ್ಟಿಯಲ್ಲಿ ತಳಕು ಪಂಚಾಯಿತಿ ಸದಸ್ಯರಾದ ಲಕ್ಷ್ಮೀ, ಮಾರಯ್ಯ, ವಾಣಿಬಾಯಿ, ಭಾಗ್ಯಮ್ಮ, ಬಿ. ತಿಪ್ಪೇಸ್ವಾಮಿ, ಶಾಮಂತಕುಮಾರ್ ಭಾಗವಹಿಸಿದ್ದರು.

ಹೆಸರೇಳಲು ಇಚ್ಚೆ ಪಡೆದ ಸದಸ್ಯರೊಬ್ಬರು ಜನಧ್ವನಿ ಡಿಜಿಟಲ್ ಮೀಡಿಯಾದೊಂದಿಗೆ ಮಾತನಾಡಿ ಗ್ರಾಪಂ ಕಚೇರಿಯಲ್ಲಿ ಪ್ರಭಾರ ಪಿಡಿಒಗಳು ಬಂದರೂ ಯಾವುದೇ ಅಭಿವೃದ್ಧಿ ಕಾಮಗಾರಿಗಳು ನಿಂತಿಲ್ಲ ನರೇಗಾ ಕಾಮಗಾರಿ ಸೇರಿದಂತೆ ವಿವಿಧ ಯೋಜನೆಗಳಲ್ಲಿ ಅಭಿವೃದ್ಧಿ ನಡೆಯತ್ತಿದೆ ಸೋಮವಾರ ಪ್ರಭಾರ ಪಿಡಿಒ ಸಾಮಾನ್ಯ ಸಭೆ ನಡೆಸಿದ್ದಾರೆ ಅಧ್ಯಕ್ಷ ಹಾಗೂ ಸದಸ್ಯರನ್ನು ವಿಶ್ವಾಸಕ್ಕೆ ಪಡೆದು ಅಭಿವೃದ್ಧಿ ಬಗ್ಗೆ ಎಲ್ಲರ ಸಹಕಾರ ಕೇಳಿದ್ದಾರೆ ಇದಕ್ಕೆ ಸರ್ವ ಸದಸ್ಯರು ಒಪ್ಪಿಗೆ ನೀಡಲಾಗಿದೆ. ಆದರೆ ಕೆಲವೇ ಕೆಲವು ಸದಸ್ಯರು ಮಾತನಾಡಿ ಪದೇ ಪದೆ ಪಿಡಿಒಗಳ ಬದಲಾವಣೆ ಮಾಡುವ ವಿಚಾರದಲ್ಲಿ ಧ್ವನಿ ಎತ್ತುತ್ತಾರೆ ಇದರಿಂದೆ ಯಾರೂ ಬರಲು ಇಷ್ಟ ಪಡುತ್ತಿಲ್ಲ ಇರುವ ಪಿಡಿಒ ಗಳೊಂದಿಗೆ ಸದಸ್ಯರು ಒಟ್ಟಾಗಿ ಸೇವಾ ಮನೋಭಾವದಿಂದ ಕೆಲಸ ಮಾಡಿದರೆ ಯಾವುದೇ ಸಮಸ್ಯೆ ಬರುವುದಿಲ್ಲ ಎಂದು ಮಾಹಿತಿ ಹಂಚಿಕೊಂಡರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page