ಖಾಸಗಿ ಶಾಲಾ ಕಾಲೇಜುಗಳನ್ನು ನಾಚಿಸುವಂತೆ ಚಳ್ಳಕೆರೆ ನಗರದ ಹೆಚ್ .ಪಿ . ಪಿ .ಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ತಂಡ ಕರಪತ್ರಗಳೊಂದಿಗೆ ದಾಖಲಾತಿ ಆಂದೋಲ ಮಾಡುತ್ತಿರುವುದು ಇದೇ ಪ್ರಥಮ.

by | 20/05/24 | ಶಿಕ್ಷಣ


ಚಳ್ಳಕೆರೆ ಮೇ 20 ಕನ್ನಡದ ಮೊದಲ ಪ್ರಾಧ್ಯಾಪಕರಾದ ತಳುಕಿನ ವೆಂಕಣ್ಣಯ್ಯನವರು ಜನಿಸಿದ ತವರೂರು ಚಳ್ಳಕೆರೆ,ರಾಷ್ಟ್ರಕವಿ ಕುವೆಂಪುರವರನ್ನು ಕನ್ನಡ ನಾಡಿಗೆ ಕೊಟ್ಟ, ಗುರು ಪರಂಪರೆಯೊಂದಿಗೆ ಅನೇಕ ವಿದ್ಯಾರ್ಥಿಗಳನ್ನು ತಮ್ಮ ಮನೆಯಲ್ಲಿ ಆಶ್ರಯ ನೀಡಿ ಶಿಕ್ಷಣ ನೀಡಿದ ವೆಂಕಣ್ಣಯ್ಯನವರು ಹುಟ್ಟಿದ ತವರೂರು ನಮ್ಮೂರು.
ಜಾನಪದ ಗಾರುಡಿಗ ಬೇಂದ್ರೆಯವರೊಂದಿಗೆ ಸಾಹಿತ್ಯ ಅಭಿರುಚಿಯ ಮೂಲಕ ಸಾಹಿತ್ಯ ಆಂದೋಲನವನ್ನು ಪತ್ರಗಳ ಮೂಲಕ ಹಂಚಿಕೊಂಡು ತಮ್ಮದೇ ಆದ ಸಾಹಿತ್ಯ ಸೊಗಡನ್ನು ಮೂಡಿಸಿದ ಬೆಳಗೆರೆ ಜಾನಕಮ್ಮ ನವರು ಜನಿಸಿದ ಪುಣ್ಯಭೂಮಿ,
ತ.ಸು. ಶ್ಯಾಮರಾಯರು, ತ.ರಾ.ಸುಬ್ಬರಾಯರು,ಬೆಳಗೆರೆ ಕೃಷ್ಣಶಾಸ್ತ್ರಿಗಳು,ರವಿಬೆಳಗೆರೆಯವರು….. ಈಗೆ ಕನ್ನಡ ಸಾಹಿತ್ಯ,ಶಿಕ್ಷಣಕ್ಕೆ ನಾಡಿಗೆ ಅಪಾರ ಕೊಡುಗೆ ನೀಡಿದ ಚಳ್ಳಕೆರೆ ನಗರದ ಹೆಚ್ .ಪಿ . ಪಿ .ಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಮಂಜುನಾಥ್ ಬಿ .ಎಸ್ ರವರು ಬರದ ನಾಡಿನ ಅತ್ಯಂತ ಕಡಿಮೆ ಮಳೆ ಬೀಳುವ ವಿಜ್ಞಾನ ನಗರಿಯಲ್ಲಿ ….

ಖಾಸಗಿ ಶಾಲಾ ಕಾಲೇಜುಗಳನ್ನು ನಾಚಿಸುವಂತೆ ಇದೇ ಪ್ರಥಮ ಬಾರಿಗೆ ಕರಪತ್ರಗಳ ಮೂಲಕ ನಗರ ಹಾಗೂ ಗ್ರಾಮೀಣ ಭಾಗದ ಪ್ರತಿಯೊಬ್ಬ ಬಡ ಮಕ್ಕಳಿಗೆ ಸರಕಾರಿ ಕಾಲೇಜಿನಲ್ಲಿ ಶಿಕ್ಷಣ ಕೊಡಿಸುವ ಉದ್ದೇಶದಿಂದ ದಾಖಲಾತಿ ಆಂದೋನವನ್ನು ಹಮ್ಮಿಕೊಂಡು ಉಪನ್ಯಾಸಕ ತಂಡ ರಚಿಸಿ ಪಿಯು ಕಾಲೇಜುಗಳ ಬಳಿ ಹೋಗಿ ದಾಖಲಾತಿ ಆಂದೋಲನ ಮಾಡುವ ಮೂಲಕ ಹೆಚ್ಚು ಪ್ರಚಾರ ಮಾಡುತ್ತಿದ್ದಾರೆ.
ಶಿಕ್ಷಣವೇ ಆಸರೆಯಾಗಿರುವ ಜನರಿಗೆ ಮನೆ ಮನೆಗೆ ಉನ್ನತ ಶಿಕ್ಷಣದ ಅಭಿಯಾನವನ್ನು ನಡೆಸುವುದರ ಮೂಲಕ ಸಾಮಾಜಿಕ ಕಳಕಳಿ, ಶೈಕ್ಷಣಿಕ ಅಭಿವೃದ್ಧಿಗೆ ಹೆಚ್ಚಿನ ಪ್ರಾಧ್ಯಾನತೆ ನೀಡಿ ಶಿಕ್ಷಣದ ಜಾಗೃತಿಗೆ ಪಣತೊಟ್ಟ ಪ್ರಾಂಶುಪಾಲರಿಗೂ ಕಾರ್ಯಯೋನ್ಮುಖರಾದ ಪ್ರಾಧ್ಯಾಪಕರಿಗೂ ಕಾಲೇಜಿನ ಎಲ್ಲಾ ಕರ್ತವ್ಯ ನಿರತರಿಗೂ ಧನ್ಯವಾದಗಳು

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page