ಚಿತ್ರದುರ್ಗ:
ಪ್ರಸಕ್ತ ಸಾಲಿನ 2024-25 ರ ಹೊಸ ಶೈಕ್ಷಣಿಕ ವರ್ಷ ಮೇ 29 ರಿಂದ ಅಧಿಕೃತವಾಗಿ ಶುರುವಾಗುತ್ತದೆ. ಆದರೆ ಬಹುತೇಕ ಖಾಸಗಿ ಶಾಲೆಗಳ ಆಡಳಿತ ಮಂಡಳಿಯವರು ಶಾಲಾ ಮಕ್ಕಳ ಮರು ಪ್ರವೇಶಾತಿ ಸೇರಿದಂತೆ ಹೊಸ ಪ್ರವೇಶವನ್ನು ಮುಗಿಸುವ ಹಂತದಲ್ಲಿದ್ದು, ಖಾಸಗಿ ಶಿಕ್ಷಣ ಸಂಸ್ಥೆಗಳು ತಮ್ಮ ಪ್ರವೇಶ ಶುಲ್ಕವನ್ನು ಏಕಾಏಕಿ ಏರಿಕೆ ಮಾಡಿದ್ದಾರೆಂಬುದು ಮಕ್ಕಳ ಪೋಷಕರ ಆರೋಪವಾಗಿದೆ.
ಈ ಖಾಸಗಿ ಶಿಕ್ಷಣ ಸಂಸ್ಥೆಗಳು ಯಾರದೇ ಹಂಗಿಲ್ಲದೇ ಕಾನೂನು ಮೀರಿ ಶುಲ್ಕ ವಸೂಲಿ ಮಾಡುತ್ತಿರುವುದಲ್ಲದೆ, ದೊಡ್ಡ ಪ್ರಮಾಣದಲ್ಲಿ ಶುಲ್ಕ ಹೆಚ್ಚಳ ಮಾಡಿವೆ. ಆದರೂ ಸಂಬಂಧಿಸಿದ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ಕಣ್ಣು ಮುಚ್ಚಿ ಕೂತಿದ್ದಾರೆ. ಇದರಿಂದಾಗಿ ಮಕ್ಕಳು ಮತ್ತು ಪೋಷಕರ ಶೋಷಣೆ ನಿರಂತರವಾಗಿ ನಡೆಯುತ್ತಿದ್ದುಶಾಲಾ ಮಕ್ಕಳ ಪಾಲಕರು ಚಿಂತಿತರಾಗಿದ್ದಾರೆ.
ಸಿಬಿಎಸ್ಇ, ಐಸಿಎಸ್ಇ ಮತ್ತು ಎಸ್ ಎಸ್ ಎಲ್ ಸಿ ಬೋರ್ಡ್ ಗೆ ಸಂಯೋಜಿತ ಕೆಲ ಖಾಸಗಿ ಶಾಲೆಗಳು ಮನಬಂದಂತೆಶುಲ್ಕ ಏರಿಕೆ ಮಾಡಿದ್ದು ಪ್ರತಿಷ್ಟಿತ ಶಾಲೆಗಳಲ್ಲಿನ ಕಲಿಕೆ ಎನ್ನುವುದು ಬಡಜನರಿಗೆ ಕನ್ನಡಿಯೊಳಗಿನ ಗಂಟಾಗಿ ಪರಿಣಮಿಸಿದೆ.ಖಾಸಗಿ ಶಿಕ್ಷಣ ಸಂಸ್ಥೆಗಳ ಅಸಹಕಾರದಿಂದ ಬಿಇಒಗಳು ಕೈಕಟ್ಟಿ ಕೂರುವಂತಾಗಿರುವುದು ಗುಟ್ಟಾಗಿ ಉಳಿದಿಲ್ಲ.
ಎಲ್ ಕೆಜಿ, ಯುಕೆಜಿ, 1ನೇ ತರಗತಿ ಹೀಗೆ ಮಕ್ಕಳ ಪ್ರವೇಶಾತಿಗೆ ಜಿಲ್ಲಾ ಮಟ್ಟದ ಖಾಸಗಿ ಸಂಸ್ಥೆಗಳಲ್ಲಿ ಆ ಶುಲ್ಕ, ಈ ಶುಲ್ಕ ಎಂದು ಬಿಂಬಿಸಿ ಕನಿಷ್ಟ 50ಸಾವಿರದಿಂದ ಲಕ್ಷರೂ. ತನಕ ಶುಲ್ಕ ಪಡೆಯಾಲಾಗುತ್ತಿದೆ.
ಖಾಸಗಿ ಶಾಲೆಗಳ ಶುಲ್ಕ ನಿಗದಿ ವಿಚಾರವಾಗಿ ಸರ್ಕಾರ ಯಾವುದೇ ರೀತಿಯ ಹಸ್ತಕ್ಷೇಪ ಮಾಡುವಂತಿಲ್ಲ.ಅದು ಆಯಾ ಶಾಲೆಗೆ ಸಂಬಂದಿಸಿದ್ದು ಎಂಬುದಾಗಿ ಕರ್ನಾಟಕ ಹೈಕೋರ್ಟ್ ಕಳೆದ ವರ್ಷ ನೀಡಿದ ತೀರ್ಪು ನೀಡಿದ ಮೇಲೆ ಖಾಸಗಿ ಶಾಲೆಗಳಿಗೆ ವರದಾನವಾಗಿದ್ದು ಮನ ಬಂದಂತೆ ಶುಲ್ಕ ಏರಿಕೆ ಮಾಡಿವೆ.
ಶುಲ್ಕ ಏರಿಕೆ ಶಿಕ್ಷಣ ಸಂಸ್ಥೆಗಳಿಗೆ ಮಾತ್ರ ಅನುಕೂಲವಾಗಿದ್ದು ಶಾಲೆಯಲ್ಲಿ ಬೋಧನೆ ಮಾಡುವಂತ ಶಿಕ್ಷಕರ ವೇತನ ಹೆಚ್ಚಳ ಮಾಡುತ್ತಿಲ್ಲ. ಶಾಲಾ ಆಡಳಿತ ಮಂಡಳಿ ಶಾಲಾ ಸಿಬ್ಬಂದಿಗೆ ಸರಿಯಾಗಿ ವೇತನ ನೀಡುವುದಿಲ್ಲ.ಕಾನೂನು ಉಲ್ಲಂಘಿಸಿ ಶಿಕ್ಷಕರಿಗೆ , ಸಿಬ್ಬಂದಿಗಳಿಗೆ ಕಡಿಮೆ ವೇತನ ನೀಡಿ ಶೋಷಿಸಲಾಗುತ್ತಿದೆ. ಎಂಬುದು ಮಕ್ಕಳ ಪೋಷಕರ ಆರೋಪವಾಗಿದೆ.
ಶೈಕ್ಷಣಿಕ ವರ್ಷ ಆರಂಭವಾಗುವ ಮೊದಲೇ ಪಾಲಕರ ಬಳಿ ಇಡು ಗಂಟಿನಂತೆ ದೊಡ್ಡ ಮೊತ್ತ ವಸೂಲಿ ಮಾಡುತ್ತಿರುವ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಡಳಿತ ಕಡಿವಾಣ ಹಾಕಬೇಕಾಗಿದೆ ಎಂಬುದಾಗಿ ಮಕ್ಕಳ ಪೋಷಕರು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments