ಖಾಸಗಿ ಶಿಕ್ಷಣ ಸಂಸ್ಥೆಗಳಿಂದ -ಪೋಷಕರ ಶೋಷಣೆ ಅಧಿಕ ಶುಲ್ಕ ವಸೂಲಿ ಮಾಡುವ ಶಿಕ್ಷಣ ಸಂಸ್ಥೆಗಳು ಕಣ್ಮುಚ್ಚಿ ಕುಳಿತಿರುವಂತ ಸಾರ್ವಜನಿಕ ಶಿಕ್ಷಣಇಲಾಖೆ

by | 21/05/24 | ಜನಧ್ವನಿ


ಚಿತ್ರದುರ್ಗ:
ಪ್ರಸಕ್ತ ಸಾಲಿನ 2024-25 ರ ಹೊಸ ಶೈಕ್ಷಣಿಕ ವರ್ಷ ಮೇ 29 ರಿಂದ ಅಧಿಕೃತವಾಗಿ ಶುರುವಾಗುತ್ತದೆ. ಆದರೆ ಬಹುತೇಕ ಖಾಸಗಿ ಶಾಲೆಗಳ ಆಡಳಿತ ಮಂಡಳಿಯವರು ಶಾಲಾ ಮಕ್ಕಳ ಮರು ಪ್ರವೇಶಾತಿ ಸೇರಿದಂತೆ ಹೊಸ ಪ್ರವೇಶವನ್ನು ಮುಗಿಸುವ ಹಂತದಲ್ಲಿದ್ದು, ಖಾಸಗಿ ಶಿಕ್ಷಣ ಸಂಸ್ಥೆಗಳು ತಮ್ಮ ಪ್ರವೇಶ ಶುಲ್ಕವನ್ನು ಏಕಾಏಕಿ ಏರಿಕೆ ಮಾಡಿದ್ದಾರೆಂಬುದು ಮಕ್ಕಳ ಪೋಷಕರ ಆರೋಪವಾಗಿದೆ.
ಈ ಖಾಸಗಿ ಶಿಕ್ಷಣ ಸಂಸ್ಥೆಗಳು ಯಾರದೇ ಹಂಗಿಲ್ಲದೇ ಕಾನೂನು ಮೀರಿ ಶುಲ್ಕ ವಸೂಲಿ ಮಾಡುತ್ತಿರುವುದಲ್ಲದೆ, ದೊಡ್ಡ ಪ್ರಮಾಣದಲ್ಲಿ ಶುಲ್ಕ ಹೆಚ್ಚಳ ಮಾಡಿವೆ. ಆದರೂ ಸಂಬಂಧಿಸಿದ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ಕಣ್ಣು ಮುಚ್ಚಿ ಕೂತಿದ್ದಾರೆ. ಇದರಿಂದಾಗಿ ಮಕ್ಕಳು ಮತ್ತು ಪೋಷಕರ ಶೋಷಣೆ ನಿರಂತರವಾಗಿ ನಡೆಯುತ್ತಿದ್ದುಶಾಲಾ ಮಕ್ಕಳ ಪಾಲಕರು ಚಿಂತಿತರಾಗಿದ್ದಾರೆ.
ಸಿಬಿಎಸ್ಇ, ಐಸಿಎಸ್ಇ ಮತ್ತು ಎಸ್ ಎಸ್ ಎಲ್ ಸಿ ಬೋರ್ಡ್ ಗೆ ಸಂಯೋಜಿತ ಕೆಲ ಖಾಸಗಿ ಶಾಲೆಗಳು ಮನಬಂದಂತೆಶುಲ್ಕ ಏರಿಕೆ ಮಾಡಿದ್ದು ಪ್ರತಿಷ್ಟಿತ ಶಾಲೆಗಳಲ್ಲಿನ ಕಲಿಕೆ ಎನ್ನುವುದು ಬಡಜನರಿಗೆ ಕನ್ನಡಿಯೊಳಗಿನ ಗಂಟಾಗಿ ಪರಿಣಮಿಸಿದೆ.ಖಾಸಗಿ ಶಿಕ್ಷಣ ಸಂಸ್ಥೆಗಳ ಅಸಹಕಾರದಿಂದ ಬಿಇಒಗಳು ಕೈಕಟ್ಟಿ ಕೂರುವಂತಾಗಿರುವುದು ಗುಟ್ಟಾಗಿ ಉಳಿದಿಲ್ಲ.
ಎಲ್ ಕೆಜಿ, ಯುಕೆಜಿ, 1ನೇ ತರಗತಿ ಹೀಗೆ ಮಕ್ಕಳ ಪ್ರವೇಶಾತಿಗೆ ಜಿಲ್ಲಾ ಮಟ್ಟದ ಖಾಸಗಿ ಸಂಸ್ಥೆಗಳಲ್ಲಿ ಆ ಶುಲ್ಕ, ಈ ಶುಲ್ಕ ಎಂದು ಬಿಂಬಿಸಿ ಕನಿಷ್ಟ 50ಸಾವಿರದಿಂದ ಲಕ್ಷರೂ. ತನಕ ಶುಲ್ಕ ಪಡೆಯಾಲಾಗುತ್ತಿದೆ.
ಖಾಸಗಿ ಶಾಲೆಗಳ ಶುಲ್ಕ ನಿಗದಿ ವಿಚಾರವಾಗಿ ಸರ್ಕಾರ ಯಾವುದೇ ರೀತಿಯ ಹಸ್ತಕ್ಷೇಪ ಮಾಡುವಂತಿಲ್ಲ.ಅದು ಆಯಾ ಶಾಲೆಗೆ ಸಂಬಂದಿಸಿದ್ದು ಎಂಬುದಾಗಿ ಕರ್ನಾಟಕ ಹೈಕೋರ್ಟ್ ಕಳೆದ ವರ್ಷ ನೀಡಿದ ತೀರ್ಪು ನೀಡಿದ ಮೇಲೆ ಖಾಸಗಿ ಶಾಲೆಗಳಿಗೆ ವರದಾನವಾಗಿದ್ದು ಮನ ಬಂದಂತೆ ಶುಲ್ಕ ಏರಿಕೆ ಮಾಡಿವೆ.
ಶುಲ್ಕ ಏರಿಕೆ ಶಿಕ್ಷಣ ಸಂಸ್ಥೆಗಳಿಗೆ ಮಾತ್ರ ಅನುಕೂಲವಾಗಿದ್ದು ಶಾಲೆಯಲ್ಲಿ ಬೋಧನೆ ಮಾಡುವಂತ ಶಿಕ್ಷಕರ ವೇತನ ಹೆಚ್ಚಳ ಮಾಡುತ್ತಿಲ್ಲ. ಶಾಲಾ ಆಡಳಿತ ಮಂಡಳಿ ಶಾಲಾ ಸಿಬ್ಬಂದಿಗೆ ಸರಿಯಾಗಿ ವೇತನ ನೀಡುವುದಿಲ್ಲ.ಕಾನೂನು ಉಲ್ಲಂಘಿಸಿ ಶಿಕ್ಷಕರಿಗೆ , ಸಿಬ್ಬಂದಿಗಳಿಗೆ ಕಡಿಮೆ ವೇತನ ನೀಡಿ ಶೋಷಿಸಲಾಗುತ್ತಿದೆ. ಎಂಬುದು ಮಕ್ಕಳ ಪೋಷಕರ ಆರೋಪವಾಗಿದೆ.
ಶೈಕ್ಷಣಿಕ ವರ್ಷ ಆರಂಭವಾಗುವ ಮೊದಲೇ ಪಾಲಕರ ಬಳಿ ಇಡು ಗಂಟಿನಂತೆ ದೊಡ್ಡ ಮೊತ್ತ ವಸೂಲಿ ಮಾಡುತ್ತಿರುವ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಡಳಿತ ಕಡಿವಾಣ ಹಾಕಬೇಕಾಗಿದೆ ಎಂಬುದಾಗಿ ಮಕ್ಕಳ ಪೋಷಕರು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page