ಚಳ್ಳಕೆರೆ, ಸೆ.7 ಚಳ್ಳಕೆರೆ. ತಾಲೂಕಿನ ಯುವ ಉತ್ಸಾಹಿ ಪದವೀಧರ ವಿದ್ಯಾರ್ಥಿಗಳ ಸಮೂಹವನ್ನು ಪತ್ರಿಕಾ ರಂಗಕ್ಕೆ ಆಹ್ವಾನಿಸಿ ಪರಿಚಯಿಸುವ ಹಾಗೂ ಯುವ ಪತ್ರಕರ್ತರಿಗೆ ಮಾಧ್ಯಮ ರಂಗದ ಕಾರ್ಯ ಚಟುವಟಿಕೆಗಳ ಬಗ್ಗೆ ತಿಳಿಸಿಕೊಡುವ ದೃಷ್ಟಿಯಿಂದ ಗಡಿನಾಡು ಪತ್ರಕರ್ತರ ಕಾರ್ಯಗಾರ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಮಾಧ್ಯಮ ಮಹಾ ಒಕ್ಕೂಟದ ರಾಜ್ಯಾಧ್ಯಕ್ಷ ಕೆ ಶಿವಕುಮಾರ್ ಹಾಗೂ ಪ್ರಧಾನ ಕಾರ್ಯದರ್ಶಿ ಈಶ್ವರಪ್ಪ ತಿಳಿಸಿದರು.
ಪತ್ರಿಕೆಯೊಂದಿಗೆ ಮಾತನಾಡಿದ ಅವರು ಇದೇ ಸೆ.10ರ ಭಾನುವಾರದಂದು ನಗರದ ರೋಟರಿ ಬಾಲ ಭವನದಲ್ಲಿ ಕರ್ನಾಟಕ ಮಾಧ್ಯಮ ಮಹಾ ಒಕ್ಕೂಟ ಬೆಂಗಳೂರು, ಚಿತ್ರದುರ್ಗ,ಹಾಗೂ ದಾವಣಗೆರೆ ಜಿಲ್ಲಾ ಘಟಕಗಳ ಸಹಯೋಗದೊಂದಿಗೆ ಒಂದು ದಿನದ ಗಡಿನಾಡು ಪತ್ರಕರ್ತರ ಕಾರ್ಯಗಾರ ಶಿಬಿರವನ್ನು ಹಮ್ಮಿಕೊಂಡಿದ್ದು ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಟಿ ರಘುಮೂರ್ತಿ ನೆರವೇರಿಸಲಿದ್ದಾರೆ.
ಗಡಿನಾಡು ಪತ್ರಕರ್ತರ ಕಾರ್ಯಗಾರ ಶಿಬಿರಕ್ಕೆ ಖ್ಯಾತ ಸಾಹಿತಿ ಹಾಗೂ ಸಂಸ್ಕೃತ ಚಿಂತಕರಾದ ವಡ್ಡಿಗೆರೆ ನಾಗರಾಜಯ್ಯ ಚಾಲನೆ ನೀಡಲಿದ್ದು ಅಧ್ಯಕ್ಷತೆಯನ್ನು ಮಾಧ್ಯಮ ಮಹಾ ಒಕ್ಕೂಟದ ದಾವಣಗೆರೆ ಜಿಲ್ಲಾ ಘಟಕದ ಅಧ್ಯಕ್ಷ ಮಹಾಂತೇಶ್ ರಾವ್ ಸುರ್ವೆ ವಹಿಸಲಿದ್ದಾರೆ ಕಾನೂನು ಮತ್ತು ಪತ್ರಿಕೋದ್ಯಮ ಕುರಿತು ವಿಶೇಷ ಉಪನ್ಯಾಸವನ್ನು ಚಿತ್ರದುರ್ಗ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ವೈ ತಿಪ್ಪೇಸ್ವಾಮಿ ಹಾಗೂ ಗಡಿನಾಡು ಪತ್ರಕರ್ತರ ಸಮಸ್ಯೆಗಳ ಕುರಿತು ನ್ಯೂಸ್ ಪೇಪರ್ ಅಸೋಸಿಯೇಷನ್ ಆಫ್ ಇಂಡಿಯಾ ಅಧ್ಯಕ್ಷರಾದ ಬಿವಿ ವಾಸದೇವ ವಿಶೇಷ ಉಪನ್ಯಾಸ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಎ ನಾರಾಯಣಸ್ವಾಮಿ ವಿಧಾನಪರಿಷತ್ ಸದಸ್ಯ ಕೆಎಸ್ ನವೀನ್ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಎಂಜೆ ರಾಘವೇಂದ್ರ ವಾಣಿಜ್ಯೋತಿ ಸುನಿಲ್ ಕುಮಾರ್ ಲೋಕಾಯುಕ್ತ ಎಸ್ಪಿ ವಾಸುದೇವ್ ವಿಶೇಷ ಆಹ್ವಾನಿತರಾಗಿ ಚಳ್ಳಕೆರೆ ಪೊಲೀಸ್ ಉಪಾಧ್ಯಕ್ಷರಾದ ಟಿ ವಿ ರಾಜಣ್ಣ ಮಾಧ್ಯಮ ಮಹಾ ಒಕ್ಕೂಟದ ಜಿಲ್ಲಾಧ್ಯಕ್ಷ ಅನಂತಮೂರ್ತಿ ನಾಯಕ್ ನಿವೃತ್ತ ಪ್ರಾಂಶುಪಾಲ ಜಯಪ್ಪ ಸಾಹಿತಿಗಳಾದ ಗಂಗಾಧರ ಬಿ ಎಲ್ ನಿಟ್ಟೂರು ಲಿಂಗೇಗೌಡ ಟಿ ವೀರಭದ್ರಯ್ಯ ಮೆಹಬೂಬ್ ಮಾಲಾ ಬಾವಾಡಿ ತಿಪ್ಪಣ್ಣ ಮರಿಕುಂಟೆ ಕೆಎಸ್ ಸುರೇಶ್ ಪಾಲ್ಗೊಳ್ಳಲಿದ್ದಾರೆ
ಗಡಿನಾಡು ಪತ್ರಕರ್ತರ ಕಾರ್ಯಗಾರ ಶಿಬಿರದಲ್ಲಿ ಪಾಲ್ಗೊಳ್ಳಲು ಇಚ್ಚಿಸುವ ಪತ್ರಿಕೋದ್ಯಮ ವಿದ್ಯಾರ್ಥಿಗಳು ಹಾಗೂ ಯುವ ಪತ್ರಕರ್ತರು ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿತ್ತು ಶಿಬಿರದಲ್ಲಿ ಭಾಗವಹಿಸಿದ ಎಲ್ಲಾ ಪತ್ರಕರ್ತರಿಗೂ ಪ್ರಮಾಣ ಪತ್ರ ನೀಡಲಾಗುವುದು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9845828872/ 9886541749 ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.
0 Comments