ಗಡಿನಾಡು ಪತ್ರಕರ್ತರ ಕಾರ್ಯಗಾರ ಶಿಬಿರದಲ್ಲಿ ಪಾಲ್ಗೊಳ್ಳಲು ಇಚ್ಚಿಸುವ ಪತ್ರಿಕೋದ್ಯಮ ವಿದ್ಯಾರ್ಥಿಗಳು ಹಾಗೂ ಯುವ ಪತ್ರಕರ್ತರು ಹೆಸರನ್ನು ನೊಂದಾಯಿಸಿಕೊಳ್ಳುವಂತೆಕರ್ನಾಟಕ ಮಾಧ್ಯಮ ಮಹಾ ಒಕ್ಕೂಟದ ರಾಜ್ಯಾದ್ಯಕ್ಷ ಕೆ ಶಿವಕುಮಾರ್ .

by | 07/09/23 | ಸುದ್ದಿ

ಚಳ್ಳಕೆರೆ, ಸೆ.7 ಚಳ್ಳಕೆರೆ. ತಾಲೂಕಿನ ಯುವ ಉತ್ಸಾಹಿ ಪದವೀಧರ ವಿದ್ಯಾರ್ಥಿಗಳ ಸಮೂಹವನ್ನು ಪತ್ರಿಕಾ ರಂಗಕ್ಕೆ ಆಹ್ವಾನಿಸಿ  ಪರಿಚಯಿಸುವ ಹಾಗೂ ಯುವ ಪತ್ರಕರ್ತರಿಗೆ ಮಾಧ್ಯಮ ರಂಗದ ಕಾರ್ಯ ಚಟುವಟಿಕೆಗಳ ಬಗ್ಗೆ ತಿಳಿಸಿಕೊಡುವ ದೃಷ್ಟಿಯಿಂದ ಗಡಿನಾಡು ಪತ್ರಕರ್ತರ ಕಾರ್ಯಗಾರ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಮಾಧ್ಯಮ ಮಹಾ ಒಕ್ಕೂಟದ ರಾಜ್ಯಾಧ್ಯಕ್ಷ ಕೆ ಶಿವಕುಮಾರ್ ಹಾಗೂ ಪ್ರಧಾನ ಕಾರ್ಯದರ್ಶಿ ಈಶ್ವರಪ್ಪ ತಿಳಿಸಿದರು‌.

ಪತ್ರಿಕೆಯೊಂದಿಗೆ ಮಾತನಾಡಿದ ಅವರು ಇದೇ ಸೆ.10ರ ಭಾನುವಾರದಂದು ನಗರದ ರೋಟರಿ ಬಾಲ ಭವನದಲ್ಲಿ ಕರ್ನಾಟಕ ಮಾಧ್ಯಮ ಮಹಾ ಒಕ್ಕೂಟ ಬೆಂಗಳೂರು, ಚಿತ್ರದುರ್ಗ,ಹಾಗೂ ದಾವಣಗೆರೆ ಜಿಲ್ಲಾ ಘಟಕಗಳ ಸಹಯೋಗದೊಂದಿಗೆ ಒಂದು ದಿನದ ಗಡಿನಾಡು ಪತ್ರಕರ್ತರ ಕಾರ್ಯಗಾರ ಶಿಬಿರವನ್ನು ಹಮ್ಮಿಕೊಂಡಿದ್ದು ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಟಿ ರಘುಮೂರ್ತಿ ನೆರವೇರಿಸಲಿದ್ದಾರೆ.

ಗಡಿನಾಡು ಪತ್ರಕರ್ತರ ಕಾರ್ಯಗಾರ ಶಿಬಿರಕ್ಕೆ ಖ್ಯಾತ ಸಾಹಿತಿ ಹಾಗೂ ಸಂಸ್ಕೃತ ಚಿಂತಕರಾದ ವಡ್ಡಿಗೆರೆ ನಾಗರಾಜಯ್ಯ ಚಾಲನೆ ನೀಡಲಿದ್ದು ಅಧ್ಯಕ್ಷತೆಯನ್ನು ಮಾಧ್ಯಮ ಮಹಾ ಒಕ್ಕೂಟದ ದಾವಣಗೆರೆ ಜಿಲ್ಲಾ ಘಟಕದ ಅಧ್ಯಕ್ಷ ಮಹಾಂತೇಶ್ ರಾವ್  ಸುರ್ವೆ ವಹಿಸಲಿದ್ದಾರೆ ಕಾನೂನು ಮತ್ತು ಪತ್ರಿಕೋದ್ಯಮ ಕುರಿತು ವಿಶೇಷ ಉಪನ್ಯಾಸವನ್ನು ಚಿತ್ರದುರ್ಗ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ವೈ ತಿಪ್ಪೇಸ್ವಾಮಿ ಹಾಗೂ ಗಡಿನಾಡು ಪತ್ರಕರ್ತರ ಸಮಸ್ಯೆಗಳ ಕುರಿತು ನ್ಯೂಸ್ ಪೇಪರ್ ಅಸೋಸಿಯೇಷನ್ ಆಫ್ ಇಂಡಿಯಾ ಅಧ್ಯಕ್ಷರಾದ ಬಿವಿ ವಾಸದೇವ ವಿಶೇಷ ಉಪನ್ಯಾಸ ನೀಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಎ ನಾರಾಯಣಸ್ವಾಮಿ ವಿಧಾನಪರಿಷತ್ ಸದಸ್ಯ ಕೆಎಸ್ ನವೀನ್ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಎಂಜೆ ರಾಘವೇಂದ್ರ ವಾಣಿಜ್ಯೋತಿ ಸುನಿಲ್ ಕುಮಾರ್ ಲೋಕಾಯುಕ್ತ ಎಸ್ಪಿ ವಾಸುದೇವ್ ವಿಶೇಷ ಆಹ್ವಾನಿತರಾಗಿ ಚಳ್ಳಕೆರೆ ಪೊಲೀಸ್ ಉಪಾಧ್ಯಕ್ಷರಾದ ಟಿ ವಿ ರಾಜಣ್ಣ ಮಾಧ್ಯಮ ಮಹಾ ಒಕ್ಕೂಟದ ಜಿಲ್ಲಾಧ್ಯಕ್ಷ ಅನಂತಮೂರ್ತಿ ನಾಯಕ್ ನಿವೃತ್ತ ಪ್ರಾಂಶುಪಾಲ ಜಯಪ್ಪ ಸಾಹಿತಿಗಳಾದ ಗಂಗಾಧರ ಬಿ ಎಲ್ ನಿಟ್ಟೂರು ಲಿಂಗೇಗೌಡ ಟಿ ವೀರಭದ್ರಯ್ಯ ಮೆಹಬೂಬ್ ಮಾಲಾ ಬಾವಾಡಿ ತಿಪ್ಪಣ್ಣ ಮರಿಕುಂಟೆ ಕೆಎಸ್ ಸುರೇಶ್ ಪಾಲ್ಗೊಳ್ಳಲಿದ್ದಾರೆ

ಗಡಿನಾಡು ಪತ್ರಕರ್ತರ ಕಾರ್ಯಗಾರ ಶಿಬಿರದಲ್ಲಿ ಪಾಲ್ಗೊಳ್ಳಲು ಇಚ್ಚಿಸುವ ಪತ್ರಿಕೋದ್ಯಮ ವಿದ್ಯಾರ್ಥಿಗಳು ಹಾಗೂ ಯುವ ಪತ್ರಕರ್ತರು ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿತ್ತು ಶಿಬಿರದಲ್ಲಿ ಭಾಗವಹಿಸಿದ ಎಲ್ಲಾ ಪತ್ರಕರ್ತರಿಗೂ ಪ್ರಮಾಣ ಪತ್ರ ನೀಡಲಾಗುವುದು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9845828872/ 9886541749 ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page