ಗಾಂಧೀಜಿಯವರ ಅಹಿಂಸಾ ತತ್ವಗಳು ಹಾಗೂ ಅವರ ಆದರ್ಶಗನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಕೊಳ್ಳುವ ಅಗತ್ಯವಿದೆ ಶಾಸಕ ಟಿ. ರ ಘಮೂರ್ತಿ .

by | 02/10/23 | ಸುದ್ದಿ


ಚಳ್ಳಕೆರೆ ಅ.2.ಮಹಾತ್ಮಾ ಗಾಂಧೀಜಿಯವರು ಹಾಕಿ ಕೊಟ್ಟ ಅಹಿಂಸಾ ಮಾರ್ಗ ಹಾಗೂ ಅವರ ಜೀವನ ಶೈಲಿಯು ಇಂದಿನ ಯುವಕರಿಗೆ ಸ್ಫೂರ್ತಿದಾಯಕವಾಗಿದೆ. ಗಾಂಧೀಜಿಯವರ ಅಹಿಂಸಾ ತತ್ವಗಳು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಕೊಳ್ಳುವ ಅಗತ್ಯವಿದೆ ಎಂದು ಶಾಸಕ ಟಿ. ರ ಘಮೂರ್ತಿ ಹೇಳಿದರು. ನಗರದ ತಾಲೂಕು ಕಚೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿವತಿಯಿಂದ ಆಯೋಜಿಸಿದ್ದ ರಾಷ್ಟ್ರಪಿತ ಮಹಾತ್ಮಗಾಂಧೀಜಿ ಹಾಗೂ ಮಾಜಿ ಪ್ರಧಾನಿ ದಿ. ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿ‌ದ ಅಂಗವಾಗಿ ಬಾವಚಿತ್ರಗಳಿಗೆ ಪುಸ್ಪನಮನ ಸಲ್ಲಿಸಿ ಮಾತನಾಡಿದರು.

ನಾನು ಕಳೆದ ವಾರವಷ್ಟೆ ಗಾಂಧೀಜಿ ಹುಟ್ಟಿದ ಊರಾದ ಪೋರಬಂದರ್ ಗೆ ಹೋಗಿ ಅವರು ಹುಟ್ಟಿದ ಮನೆ ಹಾಗೂ ಅವರ ಚರಕ. ಹಾಸಿಗೆ ಸೇರಿದಂತೆ ಅವರು ಬಳಕೆ ಮಾಡುತ್ತಿದ್ದ ವಸ್ತುಗನ್ನು ಸಾರ್ವಜನಿಕ ವೀಕ್ಷಣೆಗಾಗಿ ಇಟ್ಟಿದ್ದು ನಾನೂ ಸಹ ನೋಡಿ ಬಂದಿದ್ದು ನನಗೆ ಖುಷಿ ತಂದಿದೆ .
ಗಾಂಧೀಜಿಯವರ ಜೀವನವೇ ನನ್ನ ಸಂದೇಶ ಎಂದು ಜಗತ್ತಿಗೆ ಸಾರಿದ ಗಾಂಧೀಜಿಯವರು ತಮ್ಮ ಸರಳ‌ ಜೀವನ ಹಾಗೂ ಆದರ್ಶಗಳ ಮೂಲಕ ಗುರುತಿಸಲ್ಪಡುತ್ತಾರೆ. ಅಹಿಂಸಾತ್ಮಕ ಹೋರಾಟದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಅವರು ಇತರೆ ದೇಶಗಳ ಸ್ವಾತಂತ್ರ್ಯ ಹೋರಾಟಕ್ಕೂ ಸ್ಫೂರ್ತಿಯಾಗಿದ್ದರು.


ಅದೇ ರೀತಿ ಸರಳ ಮತ್ತು ಸೌಜನ್ಯಯುತ ನಡವಳಿಕೆಯನ್ನು ಹೊಂದಿದ್ದ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರು ಕೂಡ ದೇಶದ ಪ್ರಗತಿಗೆ ಶ್ರಮಿಸಿದರು ಎಂದು ಹೇಳಿದರು.
ನಿವೃತ್ತ ಪ್ರೋ. ಟಿ.ನಾಗರಾಜ್ ವಿವೇಷ ಉಪನ್ಯಾಸ ನೀಡುತ್ತಾ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಬದುಕು ನಮಗೆಲ್ಲ ದಾರಿದೀಪವಾಗಿದೆ ಎಂದು ಅಭಿಪ್ರಾಯಪಟ್ಟರು.
ಇಂದು ಮಹಾತ್ಮಾ ಗಾಂಧಿ, ಲಾಲ್‌ ಬಹದ್ದೂರ್ ಶಾಸ್ತ್ರಿಯವರ ಸರಳ ಜೀವನ ಸಾಲ ಮಾಡದೆ ಉತ್ತಮ ಆಡಳೀತ ನೀಡಿದ ಪ್ರದಾನಿ ಲಾಲ್ ಬಹದ್ದೂರು ಶಾಸ್ತ್ತಿಗೆ ಸಲ್ಲುತ್ತದೆ. ಗಾಂಧೀಜಿಯವರ ತತ್ವಾದರ್ಶಗಳು ಸರ್ವಕಾಲಕ್ಕೂ ಪ್ರಸ್ತುತವಾಗಿವೆ. ವಿದೇಶಿಗರು ನಮ್ಮನ್ನು ಗಾಂಧೀ ನಾಡಿನವರು ಎಂದು ಗುರುತಿಸುವುದು ನಮಗೆಲ್ಲ‌ಹೆಮ್ಮೆಯ ವಿಷಯವಾಗಿದೆ .
ಅಹಿಂಸಾ ಚಳುವಳಿಯಿಂದ ಗಾಂಧೀಜಿ ಅವರು ಮಹಾತ್ಮ ಎಂದು ಕರೆಸಿಕೊಂಡರು. ಅವರ ಅಹಿಂಸಾ ತತ್ವದಿಂದ ಪ್ರಭಾವಿತಗೊಂಡ ವಿಶ್ವ ಸಂಸ್ಥೆಯು ಅಕ್ಟೋಬರ್ 2 ಅನ್ನು ವಿಶ್ವ ಅಹಿಂಸಾ ದಿನ ಎಂದು ಘೋಷಣೆ ಮಾಡಿತು. ಅಸ್ಪೃಶ್ಯತೆ ವಿರುದ್ಧ ಹೋರಾಡಿದ ಅವರು ಮಹಿಳೆಯರಿಗೆ ಸಾಮಾಜಿಕ ನ್ಯಾಯವನ್ನು ದೊರಕಿಸಿ ಕೊಟ್ಟರು ಎಂದು ತಿಳಿಸಿದರು. ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಅಧ್ಯಕ್ಷರು ಹಾಗೂ ತಹಶೀಲ್ದಾರ್ ರೇಹಾನ್ ಪಾಷ . ಬಿಇಒ ಸುರೇಶ್ ಮಾತನಾಡಿದರು.
ಕಾರ್ಯಕ್ರಮದಲ್ಲಿ ನಗರಸಭೆ ಸದಸ್ಯೆ ಸುಜಾತ. ಡಿವೈಎಸ್ಪಿ ರಾಜಣ್ಣ. ತೋಟಗಾರಿಕೆ ಅಧಿಕಾರಿ ವಿರುಪಾಕ್ಷಪ್ಪ.ಸಹಾಕ ಕೃಷಿ ನಿರ್ದೇಶಕ ಅಶೋಕ್. ಬಿಸಿಎಂ ಅಧಿಕಾರಿ ದಿವಾಕರ್. ಪಶುಸಂಗೋಪನೆ ಅಧಿಕಾರಿ ಡಾ.ರೇವಣ್ಣ. ಸಮಾಜಕಲ್ಯಾಣಾಧಿಕಾರಿ ಮಂಜುನಾಥ. ಎಸ್ಟಿ ಇಲಾಖೆ ಶಿವರಾಜ್.ಪಿಎಸ್ ಐ ಸತೀಶ್ ನಾಯ್ಕ.ತಾಪಂ ಕಚೇರಿ ಇರ್ಪಾನ್ ಇತರರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page