ಹಿರಿಯೂರು ತಾಲೂಕಿನ ಬಿಸಿಯೂಟ ಕಾರ್ಯಕ್ರಮದ ಅಡುಗೆ ಸಿಬ್ಬಂದಿಯವರಿಗೆ ಒಂದು ದಿನದ ತರಬೇತಿ ಕಾರ್ಯಗಾರ ಹಾಗೂ ಮಾನ್ಯ ಡಿ ಸುಧಾಕರ್ ಯೋಜನೆ ಮತ್ತು ಸ್ಯಾಂಖಿಕ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಬಂದ ನಂತರ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಹಂತ ಹಂತವಾಗಿ ಎಲ್ಲ ಯೋಜನೆಗಳನ್ನು ಪ್ರಾಮಾಣಿಕವಾಗಿ ಜಾರಿಗೊಳಿಸುತಿದ್ದೇವೆ. ಐದು ಗ್ಯಾರಂಟಿಯ ಯೋಜನೆಗಳ ಜೊತೆಗೆ ಬಿಸಿಊಟ ಹಾಗೂ ಅಂಗನವಾಡಿ ಸಿಬ್ಬಂದಿಗಳ ಬೇಡಿಕೆಗಳನ್ನ ಈಡೇರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರ ನೇತೃತ್ವದ ಸರಕಾರ ಪ್ರಾಮಾಣಿಕವಾಗಿ ಶ್ರಮಿಸುತ್ತಿದೆ ಎಂದು ತಿಳಿಸಿದರು. ತಾಲೂಕಿನಲ್ಲಿ ಶೈಕ್ಷಣಿಕ ಕ್ಷೇತ್ರಕ್ಕೆ ಎಲ್ಲಾ ರೀತಿಯ ನೆರವು ನೀಡುವುದರ ಜೊತೆಗೆ ಬಿಸಿ ಊಟದ ಸಿಬ್ಬಂದಿಗಳಿಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಘೋಷಿಸಿದರು ಈ ಸಂದರ್ಭದಲ್ಲಿ ಅಕ್ಷರ ದಾಸೋಹ ಕಾರ್ಯಕ್ರಮದ ಸಹಾಯಕ ನಿರ್ದೇಶಕರಾದ ಮಹೇಶ್ವರ ರೆಡ್ಡಿ ಅವರು ಸ್ವಾಗತಿಸಿದರು. ಸಿ.ಆರ್.ಪಿ ಚರಣ್ ಇವರು ಕಾರ್ಯಕ್ರಮ ನಿರೂಪಿಸಿದರು. ಹಿರಿಯೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಖಾದಿ ರಮೇಶ್ ಹಾಗೂ ನಗರಸಭಾ ಸದಸ್ಯರಾದ ಶ್ರೀ ಈರಲಿಂಗೇಗೌಡರು, ಶಿವರಂಜಿನಿ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರಾದ ಶ್ರೀಮತಿ ಗೀತಾ ನಾಗಕುಮಾರ್, ಬಿ ಅರ್ ಪಿ ಚಿದಾನಂದ್, ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿಯಾದ ರಮೇಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಮಂಜುನಾಥ್ ರವರು, ಶ್ರೀಧರ್ ರವರು, ಹಿರಿಯೂರು ತಾಲೂಕು ಬಿಸಿಯೂಟ ನೌಕರರ ಸಂಘದ ಅಧ್ಯಕ್ಷರಾದ ನಿಂಗಮ್ಮ, ಸಿಆರ್ಪಿಗಳಾದ ಮಂಜುನಾಥ್, ಯೋಗೀಶ್ವರ ಹಾಗೂ ಇಲಾಖೆಯ ಅಧಿಕಾರಿಗಳು ಹಾಗೂ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments