ಚಳ್ಳಕೆರೆನ.,17 ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ದೃಷ್ಟಿಯಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅವಿರತ ಶ್ರಮ ವಹಿಸಿದ್ದು ಅಧಿಕಾರಿಗಳು ಉತ್ತಮ ರೀತಿಯಲ್ಲಿ ಕೆಲಸ ನಿರ್ವಹಿಸಿ ಯಾವುದೇ ಫಲಾನುಭವಿಯು ಯೋಜನೆಯಿಂದ ವಂಚಿತರಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹರಿಪ್ರಸಾದ್ ತಿಳಿಸಿದರು.
ನಗರದ ತಮ್ಮ ಕಚೇರಿಯಲ್ಲಿ ಪತ್ರಿಕೆಯೊಂದಿಗೆ ಮಾತನಾಡಿದ ಅವರು ತಾಲೂಕಿನಲ್ಲಿ ಈವರೆಗೆ ಗೃಹಲಕ್ಷ್ಮಿ ಯೋಜನೆಯ 78,230 ಫಲಾನುಭವಿಗಳ ಪೈಕಿ 69,753 ಹಲಾನುಭವಿಗಳಿಗೆ ಡಿ ಬಿ ಟಿ ಮೂಲಕ ಯಶಸ್ವಿಯಾಗಿ ಹಣ ವರ್ಗಾವಣೆಗೊಳಿಸಲಾಗಿದೆ ಉಳಿದ ಫಲಾನುಭವಿಗಳಿಗೆ ಈ ತಿಂಗಳ ಕೊನೆಯಲ್ಲಿ ಮೂರು ತಿಂಗಳ ಹಣ ವರ್ಗಾವಣೆಯನ್ನು ಮಾಡಲಾಗುವುದು.
ಈಗಾಗಲೇ ತಾಲೂಕಿನ ನಾಯಕನಹಟ್ಟಿ ಪರಶುರಾಂಪುರ ತಳುಕು ಹಾಗೂ ಕಸಬಾ ಹೋಬಳಿಗಳಲ್ಲಿ ಎರಡು ದಿನಗಳ ಕಾಲ ಅಂಗನವಾಡಿ ಕಾರ್ಯಕರ್ತೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳ ಮೂಲಕ ಗೃಹಲಕ್ಷ್ಮಿ ವಂಚಿತ ಫಲಾನುಭವಿಗಳನ್ನು ಗುರುತಿಸಿ ಹತ್ತಿರದ ಅಂಚೆ ಕಚೇರಿಗಳಲ್ಲಿ 200ರೂ ಠೇವಣಿ ಮೂಲಕ ಖಾತೆ ತೆರೆಯಲು ಅವಕಾಶ ಕಲ್ಪಿಸಲಾಗಿದ್ದು ಈಗಾಗಲೇ 2416 ಖಾತೆಗಳನ್ನು ಕರೆಯಲಾಗಿದೆ.
ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಸಾರ್ವಜನಿಕರು ನಮ್ಮ ಕಚೇರಿಯನ್ನು ನೇರವಾಗಿ ಅಥವಾ 6360606683 ದೂರವಾಣಿ ಸಂಖ್ಯೆಗೆ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದ್ದು ಹೆಚ್ಚಿನ ಮಾಹಿತಿಯನ್ನು ನೀಡಲಾಗುವುದು ಗೃಹಲಕ್ಷ್ಮಿ ಯೋಜನೆ ಪಡೆಯಲು ಮನೆಯ ಯಜಮಾನಿಯಾಗಿ ನೋಂದಾಯಿಸಿದ್ದ ಫಲಾನುಭವಿಗಳಲ್ಲಿ 93 ಜನ ಮರಣ ಹೊಂದಿದವರ ಮಾಹಿತಿ ಪಡೆದು ಈಗಾಗಲೇ 80 ಜನರನ್ನು ಡಿಲೀಟ್ ಮಾಡಲಾಗಿದ್ದು ತಾಂತ್ರಿಕ ದೋಷಗಳಿಂದ 13 ಜನರ ಮಾಹಿತಿಯನ್ನು ಕಲೆಹಾಕಲಾಗುತ್ತಿದೆ ಕೆಲವರು ತಾಂತ್ರಿಕ ದೋಷದಿಂದ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಆಗಿಲ್ಲದವರು ಹೆಸರು ಬದಲಾವಣೆ ಹೊಸ ಪಡಿತರ ಚೀಟಿ ಪಡೆದವರು ಇಂತಹ ಫಲಾನುಭವಿಗಳು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಸಾಧ್ಯವಾಗಿಲ್ಲದವರು ಸರ್ಕಾರದಿಂದ ಅರ್ಜಿ ಸಲ್ಲಿಕೆಯ ಸಂದೇಶ ಬಂದ ನಂತರ ಗ್ರಾಮ ಒನ್ ಹಾಗೂ ಬಾಪೂಜಿ ಸೇವಾ ಕೇಂದ್ರದಲ್ಲಿ ನೊಂದಾಯಿಸಬಹುದಾಗಿದೆ ಎಂದು ತಿಳಿಸಿದರು.
0 Comments