ನಾಯಕನಹಟ್ಟಿ : ರಾಜ್ಯದ ಕಟ್ಟ ಕಡೆಯ ಕುಟುಂಬದ ಮನೆಯ ಯಜಮಾನಿಗೆ ರಾಜ್ಯ ಸರ್ಕಾರ ಪ್ರತಿ ತಿಂಗಳು 2000 ರೂಪಾಯಿಗಳನ್ನು ಅವರ ಖಾತೆಗೆ ಜಮಾ ಮಾಡುವಂತಹ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯನ್ನು ಇಂದು ಹ ಯೋಜನೆಯನ್ನು ಎಲ್ಲಾ ಕುಟುಂಬ ಯಜಮಾನರು ಸದ್ಬಳಕೆ ಮಾಡಿಕೊಳ್ಳಬೇಕು. ಎಂದು ಪಟ್ಟಣ ಪಂಚಾಯತ್ ಮುಖ್ಯಾ ಅಧಿಕಾರಿ ಎಂ ಶಿವಕುಮಾರ್ ತಿಳಿಸಿದರು.
ನಾಯಕನಹಟ್ಟಿಯ ವಾಲ್ಮೀಕಿ ವೃತ್ತದಲ್ಲಿ ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಾ ಅಧಿಕಾರಿ ಎಂ ಶಿವಕುಮಾರ್ ಅವರು, ಈ ಯೋಜನೆಯ ಫಲಾನುಭವಿಗಳು ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ 2000 ರೂಪಾಯಿ ಹಣವನ್ನು ಕುಟುಂಬದ ಯಜಮಾನರು ದುರುಪಯೋಗಪಡಿಸಿಕೊಳ್ಳದೆ ಸದುಪಯೋಗ ಮಾಡಿಕೊಳ್ಳಬೇಕು ಎಂದು ತಿಳಿಸಿದರು .
ರಾಜ್ಯದ ಕಟ್ಟ ಕಡೆಯ ಬಡ ಕುಟುಂಬದ ಯಜಮಾನಿಗೆ ರಾಜ್ಯ ಸರ್ಕಾರ ನೀಡುವ ಗೃಹಲಕ್ಷ್ಮಿ ಯೋಜನೆಯ ಎರಡು ಸಾವಿರ ರೂಪಾಯಿಗಳನ್ನು ಫಲಾನುಭವಿಯ ಖಾತೆಗೆ ಜಮಾ ಮಾಡಲಾಗುವುದು. ಪಂಚಾಯಿತಿ ವ್ಯಾಪ್ತಿಯಲ್ಲಿ 3700 ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದು ಇನ್ನು ಉಳಿದ ಫಲಾನುಭವಿಗಳು ಕೂಡಲೇ ಅರ್ಜಿಯನ್ನು ಸಲ್ಲಿಸಿ ಈ ಯೋಜನೆಯ ಅನುಕೂಲವನ್ನು ಪಡೆದುಕೊಳ್ಳಬೇಕು. ಯಾವೊಬ್ಬ ಕುಟುಂಬದ ಯಜಮಾನಯು ಸಹ ಈ ಯೋಜನೆಯಿಂದ ಯಾರು ವಂಚಿತರಾಗಬಾರದು ಎಂದು ಪಟ್ಟಣ ಪಂಚಾಯತ್ ಮುಖ್ಯ ಅಧಿಕಾರಿ ಎಂ ಶಿವಕುಮಾರ್ ಅವರು ತಿಳಿಸಿದರು.
ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯದ ಗೃಹಲಕ್ಷ್ಮಿ ಯೋಜನೆಯ ವಿವಾಹಿತೆಯಾರು, ಪಡಿತರ ಚೀಟಿಯಲ್ಲಿರುವ ಕುಟುಂಬದ ಯಜಮಾನಿರು, ಲೈಂಗಿಕ ಅಲ್ಪಸಂಖ್ಯಾತೆ ಯರು, ಡಿ ದರ್ಜೆ ನೌಕರರು, ಗುತ್ತಿಗೆ ನೌಕರರು ಈ ಸೌಲಭ್ಯಕ್ಕೆ ಅರ್ಹರಾಗಿರುತ್ತಾರೆ. ಜಿಎಸ್ಟಿ, ಆದಾಯ ತೆರಿಗೆ ಕಟ್ಟುವಂತ ಕುಟುಂಬದವರು ಅರ್ಹರಾಗಿರುವುದಿಲ್ಲ. ಕುಟುಂಬದಲ್ಲಿನ ಅತ್ತೆ-ಸೊಸೆಯರು ಒಪ್ಪಂದದ ಮೇರೆಗೆ ಯಾರಿಗಾದರೂ ಒಬ್ಬರಿಗೆ ಯೋಜನೆಯ ಲಾಭ ಪಡೆಯಬಹುದಾಗಿದೆ ಎಂದು ಚಳ್ಳಕೆರೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಇಲಾಖೆಯ ಅಧಿಕಾರಿ ಜಯಲಕ್ಷ್ಮಿವಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯತಿ ಸದಸ್ಯರಾದ ಸೈಯದ್ ಅನ್ವರ್ ಪಾಷ. ಕೆ ಪಿ ತಿಪ್ಪೇಸ್ವಾಮಿ.ಬೋರಮ್ಮ. ಮಂಜುಳಾ. ಸುನಿತಾ. ಪೆದ್ದನೋ ಓಬಯ್ಯ . ದುರುಗಪ್ಪ. ಆರೋಗ್ಯ ನಿರೀಕ್ಷಕರಾದ ಟಿ ರುದ್ರಮನಿ. ದ್ವಿತೀಯ ದರ್ಜೆ ಸಹಾಯಕರಾದ ಎಸ್ ಸುರೇಶ್, ಟಿ ತಿಪ್ಪೇಸ್ವಾಮಿ. ದಯಾನಂದ. ಕರವ ಸುಲಿಗಾರ ಸಂದೀಪ್. ಶಾಮಿಯಾನ ಬಂಗಾರಪ್ಪ ಆಶಾ ಕಾರ್ಯಕರ್ತೆಯರು. ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು. ವ್ಯಾಪ್ತಿಯ ಎಲ್ಲಾ ಗೃಹಿಣಿಯರು ಭಾಗವಹಿಸಿದ್ದರು.
,,,,,,,,,, ,,,,,,, ,,,,,,,,, ,,,,,,,
ಕಾಂಗ್ರೆಸ್ ಪಕ್ಷ ಚುನಾವಣೆಗಿಂತ ಮುಂಚೆ ಘೋಷಣೆ ಮಾಡಿದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಅತ್ತೆ -ಸೊಸೆಯರು ಕಿತ್ತಾಡದೆ ಒಪ್ಪಂದದ ಮೇರೆಗೆ ಸೌಲಭ್ಯವನ್ನು ಪಡೆದುಕೊಂಡು ಸಹಬಾಳ್ವೆಯಿಂದ ಕುಟುಂಬ ನಿರ್ವಹಣೆ ಮಾಡಬೇಕು.
ಎಸ್ ಪ್ರಭುಸ್ವಾಮಿ
ಕಾಂಗ್ರೆಸ್ ಮುಖಂಡರು.
ರಾಜ್ಯ ಸರ್ಕಾರ ನೀಡುವ ಯೋಜನೆಗಳನ್ನು ಸದುಪಯೋಗಪಡಿಸಿಕೊಂಡು ಗೃಹಿಣಿಯರು ತಮ್ಮ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಶಿಕ್ಷಣವಂತರನ್ನಾಗಿ ಮಾಡಬೇಕು.ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಆರುವರೆ ಕೋಟಿ ಜನರು ನೆಮ್ಮದಿಯಾಗಿದ್ದಾರೆ ಎಂದರು.
ಸೈಯದ್ ಅನ್ವರ್ ಭಾಷಾ
ಪಟ್ಟಣ ಪಂಚಾಯತ್ ಸದಸ್ಯ
ನುಡಿದಂತೆ ನಡೆಯುವ ಸರ್ಕಾರ ಎಂದರೆ ಅದು ಸಿದ್ದರಾಮಯ್ಯ ಸರ್ಕಾರ
ರಾಜ್ಯದ ಹೆಣ್ಣು ಮಕ್ಕಳು ಕಾಂಗ್ರೆಸ್ ಪಕ್ಷವನ್ನು ನಾವೆಲ್ಲರೂ ಬೆಂಬಲಿಸಬೇಕು. ಮತ್ತು ಎಲ್ಲಾ ಹೆಣ್ಣು ಮಕ್ಕಳು ಕಾಂಗ್ರೆಸ್ ಗೆ ಚಿರಋಣಿಯಾಗಿರಬೇಕು.
ಗೃಹಲಕ್ಷ್ಮಿ ಹಣ ಮಹಿಳೆಯರು ದುರುಪಯೋಗಪಡಿಸಿಕೊಳ್ಳದೆ ಒಳ್ಳೆಯದಕ್ಕಾಗಿ ಬಳಸಿ ಎಂದು ತಿಳಿಸಿದರು. ಮಹಿಳೆಯರಿಗೆ ಗೌರವಎಲ್ಲಿ ಸಿಗುತ್ತದೆಯೋ ಅಲ್ಲಿ ಇನ್ನು ಹೆಚ್ಚಾಗಿ ನಮಗೆ ಗೌರವ ಸಿಗುತ್ತದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿ ಎಂದು ಮನವಿ ಮಾಡಿಕೊಂಡರು ಮತ್ತು 4ನೇ ಗ್ಯಾರೆಂಟಿಯಾದ ಗೃಹಲಕ್ಷ್ಮಿ ಯೋಜನೆ ನಮ್ಮ ಖಾತೆಗೆ ರೂ.2000 ಹಣ ಬೀಳುತ್ತಿರುವುದು ನಮ್ಮ ಖುಷಿಯ ಸಂಗತಿ ಎಂದರು. ರಾಜ್ಯ ಸರ್ಕಾರ ಮಹಿಳೆಯರಿಗೆ ಶ್ರಮಿಸುತ್ತಿದೆ. ಗೃಹಲಕ್ಷ್ಮಿ ಯೋಜನೆಯಿಂದ ನಮ್ಮ ನಮಗೆಲ್ಲ ಮತ್ತು ಕುಟುಂಬಕ್ಕೆ. ಹುಡುಗನ ವಿದ್ಯಾಭ್ಯಾಸಕ್ಕಾಗಿ ನಮಗೆಲ್ಲ ಅನುಕೂಲವಾಗಿದೆ. ಎಂದು ಸಂತಸ ವ್ಯಕ್ತಪಡಿಸಿದರು.
ಮಂಜುಳಾ.
ಪಟ್ಟಣ ಪಂಚಾಯತ್ ಸದಸ್ಯೆ.
ಪಟ್ಟಣ ಪಂಚಾಯತಿ ಸದಸ್ಯೆಯಾದ ಸುನಿತ ಮುದಿಯಪ್ಪ ಮಾತನಾಡಿ ಗೃಹಲಕ್ಷ್ಮಿ ಯೋಜನೆಗೆ ಕಾರಣಕರ್ತರಾದ ನಮ್ಮ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ನಾನು ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದರು.
0 Comments