ಗೌರಸಮುದ್ರ ಜಾತ್ರೆ: ಪ್ರಾಣಿಬಲಿ ನಿಷೇಧ

by | 13/09/23 | ಜನಧ್ವನಿ

ಚಿತ್ರದುರ್ಗ ಸೆ.13:
ಚಳ್ಳಕೆರೆ ತಾಲ್ಲೂಕು ಗೌರಸಮುದ್ರ ಗ್ರಾಮದ ಗೌರಸಮುದ್ರ ಮಾರಮ್ಮ ದೇವಿ ಜಾತ್ರೆಯು ಇದೇ ಸೆಪ್ಟೆಂಬರ್ 18 ರಿಂದ 20 ರವರೆಗೆ ನಡೆಯಲಿದ್ದು, ಈ ಜಾತ್ರೆಗೆ ಲಕ್ಷಾಂತರ ಜನ ಭಕ್ತಾದಿಗಳು ಆಗಮಿಸಲಿದ್ದಾರೆ.
ಜಾತ್ರೆಗೆ ಬರುವ ಭಕ್ತಾದಿಗಳು ಜಾತ್ರೆಯಲ್ಲಿ ಯಾವುದೇ ರೀತಿಯ ಪ್ರಾಣಿಬಲಿ ಮಾಡಬಾರದು ಹಾಗೂ ಅಕ್ರಮ ಮದ್ಯ ಮಾರಾಟ ಮತ್ತು ಜೂಜಾಟ ಆಡಬಾರದೆಂದು ಸಾರ್ವಜನಿಕರಿಗೆ ತಿಳಿಯಪಡಿಸಿದೆ. ಪ್ರಾಣಿಬಲಿ, ಅಕ್ರಮ ಮದ್ಯ ಮಾರಾಟ ಮತ್ತು ಜೂಜಾಟವಾಡಿದ ಪಕ್ಷದಲ್ಲಿ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಧರ್ಮೇಂದ್ರಕುಮಾರ್ ತಿಳಿಸಿದ್ದಾರೆ.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *