ಗೌರಸಮುದ್ರ ಮಾರಮ್ಮ ಜಾತ್ರೆ ನಡೆಯುವ ಪ್ರದೇಶದಲ್ಲಿ ನಿತ್ಯ ಬರುವ ಭಕ್ತರಿಗಿಲ್ಲ ಸೌಲಭ್ಯ ಬಯಲೇ ಸ್ನಾನ, ಶೌಚಾಲಯ …

by | 23/05/24 | ಜನಧ್ವನಿ


ಚಳ್ಳಕೆರೆ ಜನಧ್ವನಿ ವಾರ್ತೆ ಮೇ 23. ಸಾವಿರಾರು ವರ್ಷಗಳ ಇತಿಹಾಸವಿರುವ ದೇವಸ್ಥನಕ್ಕೆ ಬರುವ ಭಕ್ತರಿಗೆ ಅಗತ್ಯ ಮೂಲಭೂತ ಸೌಲಭ್ಯಗಳಿಲ್ಲದೆ ನಲುಗುತ್ತಿದೆ.

ಹೌದು ಚಳ್ಳಕೆರೆ ತಾಲೂಕಿನ ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರಕ್ಕೆ ಸೇರಿದ ಗೌರಸಮುದ್ರ ಮಾರಮ್ಮ ದೇವಿಯ ಜಾತ್ರೆ ನಡೆಯುವ ತುಮ್ಮಲು ಪ್ರದೇಶದಲ್ಲಿ ನೆಲಸಿರುವ ಮಾರಮ್ಮ ದೇವಸ್ಥಾನಕ್ಕೆ ಪ್ರತಿ ಶುಕ್ರವಾರ ಹಾಗೂ ಮಂಗಳವಾರ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆ ಹಾಗೂ ನೆರೆಯ ರಾಜ್ಯಗಳಿಂದಲೂ ಭಕ್ತರು ಬರುತ್ತಾರೆ.
ರಾತ್ರಿ ತಂಗುವ ಮಹಿಳೆಯರಿಗೆ ಸ್ನಾನದ ಗೃಹ ಹಾಗೂ ಶೌಚಾಯಲಗಳಿಲ್ಲದೆ ಬಯಲೇ ಶೌಚಾಲಯ, ಸೀರೆಯ ಪರದೆ ಕಟ್ಟಿಕೊಂಡು ಮಹಿಳೆಯರು ಸ್ನಾನ ಮಾಡುವ ಪರಿಸ್ಥಿತಿ ಇದೆ. ಮಳೆ ಗಾಳಿ ಬಂದರೆ ಭಕ್ತರಿಗೆ ರಕ್ಷಣೆಗೆ ಇಲ್ಲಿ ಯಾವುದೇ ಸಮುದಾಯ ಭವನಗಳಿಲ್ಲದೆ ಬಿಸಿಲು ಮಳೆ,ಗಾಳಿಯಿಂದ ರಕ್ಷಣೆಗೆ ತೊಂಡರೆಯಾಗುತ್ತಿದೆ ಇತ್ತೀಚಿಗೆ ಭಕ್ತರು ಪೌಳಿಯನ್ನು ನಿರ್ಮಿಸಿದ್ದಾರೆ.
ಗೌರಸಮುದ್ರ ಗ್ರಾಮದ ಭಕ್ತಾಧಿಗಳ ಆರಾಧ್ಯ ದೇವತೆ ಮಾರಮ್ಮ ದೇವಿಯ ಸುಕ್ಷೇತ್ರ 500 ವರ್ಷಗಳ ಇತಿಹಾಸ ಹೊಂದಿದೆ. ಈ ದೇಗುಲವು ಮುಜರಾಯಿ ಇಲಾಖೆಗೆ ಒಳಪಟ್ಟಿದೆ ಎನ್ನಲಾಗಿದೆ ಆದರೆ ಮುಜರಾಯಿ ಇಲಾಖೆಗೆ ಸೇರಿಸಿದರುವ ಸಂಬಂಧಪಟ್ಟ ಇಲಾಖೆಯಲ್ಲಿ ದಾಖಲೆಗಳು ಲಭ್ಯವಿಲ್ಲ ಎನ್ನಲಾಗಿದೆ ಪ್ರತಿ ವರ್ಷದಲ್ಲಿ 20 ರಿಂದ 25 ಲಕ್ಷ ರೂ. ಆದಾಯ ಸಂಗ್ರಹವಾಗಲಿದೆ. ಆದರೂ ಮಾರಮ್ಮದೇವಿ ದೇವಸ್ಥಾನದಲ್ಲಿ ಮೂಲ ಸೌಕರ್ಯ ಮರಿಚೀಕೆಯಾಗಿದೆ.

ಜಾತ್ರೆ ಸಂದರ್ಭದಲ್ಲಿ ಮಾತ್ರ ಜನಪ್ರತಿ ನಿಧಿ ಹಾಗೂ ಅಧಿಕಾರಿ ಸಭೆ ಮಾಡಿ ಜಾತ್ರೆಗೆ ಬರುವ ಭಕ್ತರಿಗೆ ಯಾವುದೇ ತೊಂದರೆ ಯಾಗದಂತೆ ಎಲ್ಲಾ ಅಗತ್ಯ ಮೂಲ ಭೂತ ಸೌಲಭ್ಯಗಳನ್ನು ಒದಗಿಸುವಂತೆ ಹೇಳಲಾಗುತ್ತದೆ ಜಾತ್ರೆ ಮುಗಿದ ನಂತರ ಇತ್ತ ಯಾರು ಇಣಿಕಿ ನೋಡುವುದಿಲ್ಲ ಬಸ್ ತಂಗುದಾಣಗಳಿಲ್ಲ. ಭಕ್ತರಿಗೆ ಆರೋಗ್ಯ ಸಮಸ್ಯೆಯ ನಿವಾರಣೆಗೆ ಪ್ರಥಮ ಚಿಕಿತ್ಸಾ ಘಟಕ ಇಲ್ಲದಿರುವುದರಿಂದ 15 ಕಿ.ಮೀ.ದೂರದ ಬೇಡರೆಡ್ಡಿಹಳ್ಳಿ ಅಥವಾ 40 ಕಿ.ಮೀ. ದೂರವಿರುವ ಚಳ್ಳಕೆರೆಗೆ ಹೋಗಬೇಕಿದೆ.

ಗೌರಸಮುದ್ರ ಜಾತ್ರೆ ನಡೆಯುವ ತಮಲಿನಲ್ಲಿ ವಸತಿ ಮತ್ತು ಶೌಚಾಲಯಗಳಿಲ್ಲದೆ ಶುಕ್ರವಾರ ಮತ್ತು ಮಂಗಳವಾರ ಬರುವ ಮಹಿಳಾ ಭಕ್ತರು ಸೀರೆ ಕಟ್ಟಿಕೊಂಡು ಬಟ್ಟೆ ಬದಲಾಯಿಸಬೇಕಿದೆ.ಎಂದು ಬೇಸರ ವ್ಯಕ್ತಪಡಿಸಿದರು.


ಗ್ರಾಪಂ ಸದಸ್ಯ ಶಶಿಕುಮಾರ್ ಮಾತನಾಡಿ, ಮುಜರಾಯಿ ಇಲಾಖೆಗೆ ದೇವಿಯ ದುಡ್ಡು ಬೇಕೇ ಹೊರತು ಯಾತ್ರಿ ನಿವಾಸವಾಗಲಿ, ಶೌಚಾಲಯವಾಗಲಿ ಕಟ್ಟಿಸುತ್ತಿಲ್ಲ ಊರಿನವರು ತಾತ್ಕಾಲಿಕ ಶೌಚಾಲಯಗಳು ಜಾತ್ರೆಯಲ್ಲಿ ನಿರ್ಮಾಣ ಮಾಡುವುದು ಬೇಡ ಶಾಶ್ವತವಾಗಿ ಶೌಚಾಲಯ , ಸ್ನಾನದ ಗೃಹ, ನಿರ್ಮಿಸಬೇಕು ಎಂದು ಗಮನಸೆಳೆದಿದ್ದಾರೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page