ಮಂಡ್ಯ
ಮಂಡ್ಯ ವಿಧಾನಸಭಾ ಕ್ಷೇತ್ರದ ಕೆರಗೋಡು – ಮಂಡ್ಯ ನಗರ ಮುಖ್ಯರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿ ಮಾತನಾಡಲಾಯಿತು.
ಜನರ ಜೀವನ ಮಟ್ಟ ಸುಧಾರಣೆ ಹಾಗೂ ಭೌತಿಕ ಅಭಿವೃದ್ಧಿ ಎರೆಡೂ ರಾಜ್ಯ ಸರ್ಕಾರದ ಆದ್ಯತೆ. ಇಂದಿನ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನಮ್ಮ ಬದ್ದತೆಗೆ ಸಾಕ್ಷಿಯಾಗಿದೆ. ಜನರಿಗೆ ಗ್ಯಾರಂಟಿ ಯೋಜನೆಗಳನ್ನು ನೀಡುವುದು ಮಾತ್ರವಲ್ಲ ಅಭಿವೃದ್ಧಿ ಕಾಮಗಾರಿಗಳಿಗು ನಮ್ಮ ಸರ್ಕರ ಅಷ್ಟೇ ಆದ್ಯತೆ ನೀಡುತ್ತಿದೆ.
ಗುಣಮಟ್ಟ ಕೊಯ್ದುಕೊಂಡು ಆದಷ್ಟು ಬೇಗ ಕಾಮಗಾರಿ ಮುಗಿಸಬೇಕು, ರೈತರು ಸಹಕರಿಸಿಬೇಕು. ರಾಜ್ಯದಲ್ಲಿ ನಮ್ಮ ಸರ್ಕಾರ ಬಂದ ನಂತರ ಮಂಜೂರಾಗಿ ಟೆಂಡರ್ ಕೂಡ ಮುಗಿದು ಈ ಹೊಸ ಕಾಮಗಾರಿ ಪ್ರಾರಂಭವಾಗಿದೆ. ಜನರ ದಶಕದ ಕನಸು ಈಡೇರಿದೆ. ನಾಗಮಂಗಲ, ಕೌಡ್ಲು ತುಮಕೂರು ಕಡೆಗೆ ತೆರಳುವವರಿಗೆ ಈ ರಸ್ತೆ ಕಾಮಗಾರಿಯಿಂದ ಅನುಕೂಲವಾಗಲಿದೆ.
11 ಕೋಟಿ ರೂ ವೆಚ್ಚದ ಕಾಮಗಾರಿ ಇದಾಗಿದೆ. ಶೀಘ್ರದಲ್ಲೇ 150 ವೆಚ್ಚದಲ್ಲಿ ಜಿಲ್ಲೆಯ ವಿವಿಧ ಕಾಮಗಾರಿ ಪ್ರಾರಂಭವಾಗಲಿದೆ.
ಈ ಸಂದರ್ಭದಲ್ಲಿ ಮಂಡ್ಯ ಶಾಸಕರಾದ ಶ್ರೀ ಪಿ.ರವಿಕುಮಾರ್, ಮಂಡ್ಯ ಜಿಲ್ಲಾಧಿಕಾರಿಗಳಾದ ಶ್ರೀ ಕುಮಾರ್, ಮಂಡ್ಯ ಜಿಲ್ಲಾ ಪಂಚಾಯತ್ ಸಿ.ಇ.ಒ ಶ್ರೀ ಶೇಖ್ ತನ್ವೀರ್ ಆಸೀಫ್, ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಯತೀಶ್ ಅವರು ಹಾಗೂ ಅನೇಕ ಮುಖಂಡರುಗಳು ಉಪಸ್ಥಿತರಿದ್ದರು.
0 Comments