ಗ್ಯಾರಂಟಿ ಯೋಜನೆಗಳ ಜಾಗೃತಿ ಸಮಾವೇಶ ಟೀಕೆ-ಟಿಪ್ಪಣಿ ಹಾಗೂ ಕುಹಕಗಳಿಗೆ ಉತ್ತರವಾಗಿ ಗ್ಯಾರೆಂಟಿ ಯೋಜನೆಗಳು ಜಾರಿ- ಶಾಸಕ ಟಿ.ರಘುಮೂರ್ತಿ

by | 05/03/24 | ಸುದ್ದಿ

ಚಿತ್ರದುರ್ಗ ಮಾರ್ಚ್ 05:
ಚುನಾವಣೆ ಸಂದರ್ಭದಲ್ಲಿ ಜನರಿಗೆ ಅನ್ನಭಾಗ್ಯ, ಗೃಹಲಕ್ಷ್ಮೀ, ಗೃಹಜ್ಯೋತಿ, ಶಕ್ತಿ ಹಾಗೂ ಯುವನಿಧಿ ಯೋಜನಗಳನ್ನು ಜಾರಿ ಮಾಡುವ ಭರವಸೆಯನ್ನು ಪ್ರಣಾಳಿಕೆಯಲ್ಲಿ ನೀಡಲಾಗಿತ್ತು. ವಿರೋಧ ಪಕ್ಷಗಳು ಈ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದು ಸಾಧ್ಯವಿಲ್ಲ. ಒಂದು ವೇಳೆ ಜಾರಿ ಮಾಡಿದರೆ ರಾಜ್ಯ ದಿವಾಳಿಯಾಗುತ್ತದೆ ಎಂದು ಟೀಕೆ ಮಾಡುವುದರೊಂದಿಗೆ, ಕುಹಕದ ಮಾತುಗಳನ್ನು ಆಡಿದ್ದವು. ಆದರೆ ಮುಖ್ಯಮಂತ್ರಿ ಸಿದ್ಧರಾಮಯ್ಯ ನವರ ನೇತೃತ್ವದಲ್ಲಿ ಅಧಿಕಾರಕ್ಕೆ ಬಂದ ನಮ್ಮ ಸರ್ಕಾರ, ಕೊಟ್ಟ ಮಾತಿನಂತೆ ಯೋಜನೆಗಳನ್ನು ಯಶಸ್ವಿಯಾಗಿ ಜಾರಿ ಮಾಡಿ, ಟೀಕೆ ಟಿಪ್ಪಣಿ ಹಾಗೂ ಕುಹಕಗಳಿಗೆ ತಕ್ಕ ಉತ್ತರ ನೀಡಿದೆ ಎಂದು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಹೇಳಿದರು.
ಚಿತ್ರದುರ್ಗ ತಾಲ್ಲೂಕು ತುರುವನೂರು ಗ್ರಾಮದ ಪ್ರೌಢಶಾಲಾ ಆವರಣದಲ್ಲಿ ಮಂಗಳವಾರ ಆಯೋಜಿಸಲಾದ ಹೋಬಳಿ ಮಟ್ಟದ ಪಂಚ ಗ್ಯಾರಂಟಿ ಯೋಜನಗಳ ಜಾಗೃತಿ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
ಗ್ಯಾರಂಟಿ ಯೋಜನೆಗಳ ಜಾರಿಯಿಂದ ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿಲ್ಲ. ಮತ್ತಷ್ಟು ಬಲಿಷ್ಠವಾಗಿದೆ. ಈ ಬಾರಿ ಬಜೆಟ್‍ನ ಸುಮಾರು ರೂ.50 ಸಾವಿರ ಕೋಟಿಗೂ ಅಧಿಕ ಹಣವನ್ನು ಗ್ಯಾರಂಟಿ ಯೋಜನೆಗಳಿಗಾಗಿ ಮೀಸಲು ಇರಿಸಲಾಗಿದೆ. ಕಳೆದ ಜೂನ್ 21 ರಂದು ಶಕ್ತಿ ಯೋಜನೆಗೆ ಚಾಲನೆ ನೀಡಲಾಯಿತು. ಇದರಿಂದ ರಾಜ್ಯದ ಎಲ್ಲಾ ವರ್ಗದ ಮಹಿಳೆಯರು ಉಚಿತವಾಗಿ ರಾಜ್ಯಾದ್ಯಂತ ಪ್ರಯಾಣ ಮಾಡುವ ಅವಕಾಶ ಲಭಿಸಿದೆ. ದೇಶದಲ್ಲೇ ಪ್ರಥಮ ಬಾರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ನವರು ಅನ್ನಭಾಗ್ಯ ಯೋಜನೆ ಜಾರಿ ಮಾಡಿ, ಬಿಪಿಎಲ್ ಕುಟುಂಬದ ಪ್ರತಿ ವ್ಯಕ್ತಿಗೂ 5 ಕೆ.ಜಿ. ಉಚಿತ ಅಕ್ಕಿಯನ್ನು ನೀಡಿದರು. ಕಳೆದ ಬಾರಿ ನಮ್ಮ ಸರ್ಕಾರ ಇದ್ದಂತಹÀ ಅವಧಿಯಲ್ಲಿಯೇ 5 ಕೆ.ಜಿ. ಅಕ್ಕಿ ಪ್ರಮಾಣವನ್ನು 7 ಕೆ.ಜಿ.ಗೆ ಏರಿಸಲಾಗಿತ್ತು. ಆದರೆ ನಂತರ ಬಂದ ಸರ್ಕಾರ ಅನ್ನಭಾಗ್ಯ ಯೋಜನೆಯನ್ನು ನಿಲ್ಲಿಸುವ ಚಿಂತನೆ ನಡೆಸಿತ್ತು. ದೇಶ ಕೋವಿಡ್ ಮಹಾಮಾರಿಗೆ ಸಿಲುಕಿದ್ದರಿಂದ ಯೋಜನೆಯನ್ನು ಮುಂದುವರಿಸಲಾಯಿತು. ಬಡವರಿಗೆ ಅನ್ನಭಾಗ್ಯ, ಕೋವಿಡ್ ಲಾಕ್‍ಡೌನ್ ಸಂದರ್ಭದಲ್ಲಿ ಸಂಜೀವಿನಿ ಆಯಿತು. ನಮ್ಮ ಸರ್ಕಾರ ಅನ್ನಭಾಗ್ಯ ಯೋಜನೆಗೆ ಕೇಂದ್ರಕ್ಕೆ ಅಕ್ಕಿ ನೀಡಲು ಕೋರಿದಾಗ ಮನವಿಯನ್ನು ತಿರಸ್ಕರಿಸಲಾಯಿತು. ಹೀಗಾಗಿ ನಮ್ಮ ಸರ್ಕಾರ ಆಹಾರ ಧಾನ್ಯಕ್ಕೆ ಪ್ರತಿಯಾಗಿ ಪ್ರತಿ ತಿಂಗಳು ಪ್ರತಿ ಸದಸ್ಯರಿಗೆ ರೂ.170 ಮೊತ್ತವನ್ನು ಡಿಬಿಟಿ ಮೂಲಕ ಫಲಾನುಭವಿಗಳ ಖಾತೆಗೆ ಜಮೆ ಮಾಡುವ ನಿರ್ಧಾರ ಕೈಗೊಂಡು ಅದನ್ನು ಪಾಲಿಸಿಕೊಂಡು ಬರುತ್ತಿದ್ದೇವೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.
ಚುನಾವಣೆ ಸಂದರ್ಭದಲ್ಲಿ ನೀಡುತ್ತಿದ್ದ ಆಶ್ವಾಸನೆಗಳನ್ನು ಈಡೇರಿಸುವ ಬದ್ದತೆಗೆ ಹೊಸ ರೂಪವಾಗಿ ಗ್ಯಾರಂಟಿ ಎಂಬ ಮಾತು ಪ್ರಚಲಿತವಾಗಿದೆ. ಮಾರುಕಟ್ಟೆಯಲ್ಲಿ ಖರೀದಿಸುವ ವಸ್ತುಗಳಿಗೆ ತಯಾರಕರು ಗ್ಯಾರಂಟಿ ಅವಧಿಯ ಕಾರ್ಡುಗಳನ್ನು ನೀಡುತ್ತಾರೆ. ಅದೇ ರೀತಿ ಸರ್ಕಾರವು ಪ್ರಣಾಳಿಕೆಯಲ್ಲಿ ನೀಡಿದ ಆಶ್ವಾಸನೆಗಳನ್ನು ಈಡೇರಿಸುವ ಬದ್ದತೆ ತೋರಬೇಕು. ತುರುವನೂರು ಹೋಬಳಿಯಲ್ಲಿ ಶೇ.95 ರಷ್ಟು ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಫಲಾನುಭವಿಗಳಿಗೆ ನೀಡಲಾಗಿದೆ. ದಾಖಲೆಗಳ ಕೊರತೆ ಹಾಗೂ ತಾಂತ್ರಿಕ ಕಾರಣಗಳಿಂದ ಹಲವು ಜನರ ಅರ್ಜಿಗಳಲ್ಲಿ ತೊಂದರೆ ಉಂಟಾಗಿದೆ. ಇದನ್ನು ಸಹ ಸರಿಪಡಿಸಿ 100ಕ್ಕೆ 100 ರಷ್ಟು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದಾಗಿ ಶಾಸಕ ಟಿ.ರಘುಮೂರ್ತಿ ಹೇಳಿದರು.


ತಹಶೀಲ್ದಾರ್ ಡಾ.ನಾಗವೇಣಿ ಪ್ರಾಸ್ತಾವಿಕವಾಗಿ ಮಾತನಾಡಿ, ಹೋಬಳಿಯಲ್ಲಿ ಅನ್ನಭಾಗ್ಯ ಯೋಜನೆಯಡಿ 11,812 ಫಲಾನುಭವಿಗಳ ಪೈಕಿ 11,679 ಜನರಿಗೆ, ಗೃಹಲಕ್ಷ್ಮೀ ಯೋಜನೆಯಡಿ 9,832 ಫಲಾನುಭವಿಗಳ ಪೈಕಿ 9,784, ಗೃಹಜ್ಯೋತಿ ಯೋಜನೆಯಡಿ 9,247 ಫಲಾನುಭವಿಗಳ ಪೈಕಿ 8,641 ಫಲಾನುಭವಿಗಳು ಲಾಭ ಪಡೆಯುತ್ತಿದ್ದಾರೆ. ಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆಗಾಗಿ ಹೋಬಳಿಯ 3939 ಯುವಕರು ನೊಂದಣಿ ಮಾಡಿಕೊಂಡಿದ್ದಾರೆ. ಶಕ್ತಿ ಯೋಜನೆಯು ಹೋಬಳಿಯಲ್ಲಿ ಯಶಸ್ವಿಯಾಗಿದೆ. ಸರ್ಕಾರದ ಗ್ಯಾರಂಟಿ ಯೋಜನೆಗಳು ಮಹಿಳೆಯರ ಅಭ್ಯುದಯಕ್ಕೆ ಪೂರಕವಾಗಿವೆ ಎಂದರು.
ಫಲಾನುಭವಿಗಳಾದ ಬೆಳಗಟ್ಟ ಗ್ರಾಮದ ಹೇಮಲತಾ, ತುರುವನೂರು ಗ್ರಾಮದ ಲಲಿತಮ್ಮ ಗ್ಯಾರಂಟಿ ಯೋಜನೆಗಳ ಕುರಿತು ತಮ್ಮ ಅನಿಸಿಕೆ ಹಂಚಿಕೊಂಡರು.
ಇದೇ ಸಂದರ್ಭದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಯಿತು. ಇದರ ಅಂಗವಾಗಿ ಗ್ರಾಮದ ಪ್ರೌಢಶಾಲಾ ವಿಧ್ಯಾರ್ಥಿನಿಯರಿಗೆ ಏರ್ಪಡಿಸಲಾದ ಪ್ರಬಂಧ, ಚಿತ್ರಕಲೆ, ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ವೇದಿಕೆಯಲ್ಲಿ ಸನ್ಮಾನಿಸಿ ಪ್ರಮಾಣ ಪತ್ರ ವಿತರಿಸಲಾಯಿತು. ವಕೀಲರಾದ ದಿಲ್‍ಶಾದ್ ಮಹಿಳಾ ಕಾನೂನು ಹಾಗೂ ಮಹಿಳೆಯರ ಸುರಕ್ಷತೆ ಕುರಿತು ಉಪನ್ಯಾಸ ನೀಡಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಉಪಾಧ್ಯಕ್ಷ ಹಾಗೂ ಜಿ.ಪಂ. ಮಾಜಿ ಸದಸ್ಯ ಬಾಬುರೆಡ್ಡಿ, ತಾ.ಪಂ. ಇ.ಓ. ಅನಂತರಾಜು, ತುರುವನೂರು ಗ್ರಾ.ಪಂ. ಅಧ್ಯಕ್ಷೆ ದೀಪಾ.ಪಿ ಮಹೇಶ್, ಬೆಳಗಟ್ಟ ಗ್ರಾ.ಪಂ. ಅಧ್ಯಕ್ಷೆ ಮಂಜುಶ್ರೀ ಪಾಲಯ್ಯ, ಕೂನಬೇವು ಗ್ರಾ.ಪಂ. ಅಧ್ಯಕ್ಷ ಜಿ.ಪಿ. ಅನಿಲ್ ಕುಮಾರ್, ಮಾದನಾಯಕನಹಳ್ಳಿ ಗ್ರಾ.ಪಂ. ಅಧ್ಯಕ್ಷೆ ಕವಿತಾ ನಾಗರಾಜ್, ಮುದ್ದಾಪುರ ಗ್ರಾ.ಪಂ. ಅಧ್ಯಕ್ಷೆ ಮಂಗಳಾ, ಚಿಕ್ಕಗೊಂಡನಹಳ್ಳಿ ಗ್ರಾ.ಪಂ. ಅಧ್ಯಕ್ಷೆ ಮಹಾಂತಮ್ಮ, ಸಿಡಿಪಿಓ ಸುಧಾ, ವೈದ್ಯಾಧಿಕಾರಿ ಸುಶ್ಮಿತಾ ಉಪಸ್ಥಿತರಿದ್ದರು. ಕೂನಬೇವು ಪಿಡಿಓ ಧನಂಜಯ ಸ್ವಾಗತಿಸಿದರು. ತುರುವನೂರು ಪಿಡಿಓ ಖಲೀಂ ಕಾರ್ಯಕ್ರಮ ನಿರೂಪಿಸಿದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page