ಗ್ಯಾರೆಂಟಿ ಯೋಜನೆಗಳನ್ನು ರದ್ದು ಪಡಿಸಿ ಜನಪರ ರೈತಪರ ಯೋಜನೆಗಳನ್ನು ಜಾರಿಗೊಳಿಸುವಂತೆ ಜನಸಂಪರ್ಕ ಸಭೆಯಲ್ಲಿ ಅಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ನೀಡಲಾಗುವುದು ಕೆ.ಪಿ.ಭೂತಯ್ಯ.

by | 04/01/24 | ಜನಧ್ವನಿ

ಚಳ್ಳಕೆರೆ ಜನಧ್ವನಿ ವಾರ್ತೆ ಜ.4. ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಎಂಟು ತಿಂಗಳು ಕಳೆದರೂ ಯಾವುದೇ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡದೆ ಗ್ಯಾರೆಂಟಿ ಯೋಜನೆಗಳಿ ಹಣ ಜೋಡಿಸಲು ಸರ್ಕಸ್ ಮಾಡುತ್ತಿದೆ ಕೂಡಲೆ ಗ್ಯಾರೆಂಟಿ ಯೋಜನೆಗಳನ್ನು ರದ್ದು ಪಡಿಸಿ ರೈತಪರಯೋಜನೆಗಳನ್ನುಬಜಾರಿಗೊಳಿಸುವಂತೆ ಜ.6 ರಂದು ನಡೆಯಲಿರುವ ಜನ ಸಂಪರ್ಕ ಸಭೆಯಲ್ಲಿ ಅಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ನೀಡುವುದಾಗಿ ರಾಜ್ಯ ರೈತ ಸಂಘದ ಹಿರಿಯ ಉಪಾಧ್ಯಕ್ಷ ಕೆ.ಪಿ.ಭೂತಯ್ಯ ಅಕ್ರೋಶ ಹೊರಹಾಕಿದ್ದಾರೆ. ಕಾಂಗ್ರೆಸ್ ಸರಕಾರ ಗ್ಯಾರೆಂಟಿಗಳ ಭರವಸೆ ಮೇಲೆ ಅಧಿಕಾರಕ್ಕೆ ಬಂದು ಗಂಡನ ಜೇಬಿಗೆ ಕೈ ಹಾಕಿ ಹಣ ಪಡೆದು ಹೆಂಡತಿಯ ಖಾತೆ ಹಾಕುತ್ತಿದ್ದಾರೆ. ಗ್ಯಾರೆಂಟಿ ಯೋಜನೆಯ ಹಣ ತುಂಬಲು ಅಕ್ಕಿ.ಬೇಳೆ.ಎಣ್ಣೆ .ಗೊಬ್ಬರ .ಬಿತ್ತನೆ ಬೀಜ ದಿನಸಿ ಪದಾರ್ಥಗಳ ಬೆಲೆ ಏರಿಕೆ ಮಾಡಲಾಗಿದೆ. ಶಕ್ತಿ ಯೋಜನೆ ಮಹಿಳೆಯರಿಗೆ ಉಚಿತ ಸಾರಿಗೆ ಬಸ್ ಪ್ರಯಾಣ ಜಾರಿಗೊಳಿಸುವ ಮುನ್ನ ಹೆಚ್ಚುವರಿ ಬಸ್ ಗಳನ್ನು ರಸ್ತೆ ಬಿಡ ಬೇಕಿತ್ತು ಬಸ್ ಗಳ ಸಂಖ್ಯೆ ಕಡಿಮೆ ಇವೆ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜುಗಳಿಗೆ ಹೋಗಲು ಬಸ್ ನಲ್ಲಿ ಜಾಗವಿಲ್ಲದಂತಾಗಿದೆ. ಅತಿ ಹೆಚ್ಚು ಕಿ.ಮೀ ದೂರ ಓಡಿದ ಹಳೆಯ ಬಸ್ ಗಳಿದ್ದು ಎಲ್ಲೆಂದರಲ್ಲೆ ಕೆಟ್ಟು ನಿಲ್ಲುತ್ತವೆ ಹೆಚ್ಚುವರಿ ಬಸ್ ಖರೀದಿ ಮಾಡುತ್ತೇವೆ ಎಂದು ಸರಕಾರ ಹೇಳುತ್ತಿದೆ ಇದುವರೆಗೂ ಬಸ್ ಖರೀದಿ ಮಾಡಿಲ್ಲ. ಸರಕಾರವೇ ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಿದೆ ಇತ್ತ ಕೃಷಿ .ತೋಟಗಾರಿಕೆ ಇಲಾಖೆ ಅಧಿಕಾರಿಗಳು ಬೆಳೆ ನಷ್ಟವಾಗಿರುವ ಅಂಕಿ ಅಂಶಗಳನ್ನು ನೀಡಿದೆ ಕೇಂದ್ರ ಬರ ಅಧ್ಯಯನ ತಂಡ ಬಂದು ಬರ ಅಧ್ಯಯನ ಮಾಡಿದೆ ಹಾಗೂ ಬಿಜೆಪಿ ಪಕ್ಷದ ವರಿಷ್ಠ ರಿಂದಲೂ ಬರ ಅಧ್ಯಯನ ಮಾಡಿ ಹೋಗಿದ್ದಾರೆ. ರೈತರು ಮಳೆ ಬಾರದೆ ಬೆಳೆ ನಷ್ಟವಾಗಿದ್ದು ಬೆಳೆ ಕಟಾವಿಗೆ ಮುನ್ನವೇ ಜಾನುವಾರುಗಳ ಮೇವಿಗಾಗಿ ಬೆಳಡಯನ್ನು ಕಟಾವು ಮಾಡಿದ್ದಾರೆ ಬೆಳೆ ನಷ್ಟದ ಬಗ್ಗೆ ಜನಪ್ರತಿನಿಧಿಗಳು ಅಧಿಕಾರಿಗಳು ಬೆಳೆ ನಷ್ಟದ ಬಗ್ಗೆ ಅಧ್ಯಯನ ಮಾಡಿದರೂ ಸಹ ರೈತರಿಗೆ ಬೆಳೆ ಪರಿಹಾರಮ ಬೆಳೆ ವಿಮೆ ಹಾಕಲು ಸರಕಾರಗಳು ಮೀನಾ ಮೇಷ ಎಣಿಸುತ್ತಿವೆ. ರೈತರು ಬೆಳೆ ನಷ್ಟವಾಗಿ ಸಂಕಷ್ಟಕ್ಕೆ ಸಿಕುಕಿದ್ದರೂ ಕೃಷಿವಪರಿಕರಗಳ ಬೆಲೆ ಏರಿಗೆ ಹನಿ ನೀರಾವರಿ ಪೈಪ್ ಗಳ ಬೆಲೆ ಏರಿಗೆ ಒಮ್ಮೆ ಖರೀದಿ ಮಾಡಿದರೆ ಮತ್ತೆ ಏಳು ವರ್ಷದವರೆಗೆ ಕೊಡುವುದಿಲ್ಲ ಎಂಬ ಅವೈಜ್ಞಾನಿಕ ಪದ್ದತಿ. ರೈತರ ಭೂಮಿ ಬರಡಾಗಿದ್ದು ಫಲವತ್ತತೆಗೆ ಸರಕಾರ ರದ್ದು ಮಾಡಿರುವ ಕೃಷಿ ಭಾಗ್ಯ ಯೋಜನೆ ಜಾರಿಗೊಳಿಸ ಬೇಕು ಶೇಂಗಾ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡ ಬೇಕು. ಎಸ್ಟಿ ಮೀಸಲು ಕ್ಷೇತ್ರವಾಗಿದ್ದರೂ ಸಹ ಇದುವರೆಗೂ ಬಡವರಿಗೆ ವಸತಿಯೋಜನೆಯಡಿ ಮನೆ ವಿತರಣೆ ಮಾಡಿಲ್ಲ ಗಂಗಾ ಕಲ್ಯಾಣ ಯೋಜನೆ ಕಡಿಮೆ ಫಲಾನುಭವಿಗಳ ಆಯ್ಕೆ ಸೇರಿದಂತೆ ಸರಕಾರ ಕೂಡಲೆ ಉಚಿತ ಗ್ಯಾರೆಂಟಿ ಯೋಜನೆಗಳಿಂದ ಅಭಿವೃದ್ಧಿಗೆ ಮಾರಕವಾಗಿದ್ದು ಕೂಡಲೆ ಈ ಯೋಜನೆ ರದ್ದು ಪಡಿಸಿ ಜನಪರ.ರೈತಪರ ಯೋಜನೆಗಳನ್ನು ಜಾರಿಗೊಳಿಸುವಂತೆ ಜಿಲ್ಲಾ ಮಟ್ಟದ ಜನಸಂಪರ್ಕ ಸಭೆಯಲ್ಲಿ ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆವಮನವಿ ಸಲ್ಲಿಸಲಾಗುವುದು ಎಂದು ಜನಧ್ವನಿ ಡಿಜಿಟಲ್ ಮೀಡಿಯಾ ದೊಂದಿಗೆ ರೈತ ಸಂಘದ ಹಿರಿಯ ಉಪಾಧ್ಯಕ್ಷ ಕೆ.ಪಿ.ಭೂತಯ್ಯ ಮಾಹಿತಿ ಹಂಚಿಕೊಂಡಿದ್ದಾರೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page