ಚಳ್ಳಕೆರೆ ಜನಧ್ವನಿ ವಾರ್ತೆ ನ.31 ರಾಜ್ಯ ಸರ್ಕಾರ
ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳು ತಲುಪಿಸುವಂತೆ ತಹಶೀಲ್ದಾರ್ ರೇಹಾನ್ ಪಾಷ ಹೇಳಿದರು. ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆ ಅಧಿಕಾರಿಗಳಿಗೆ ಆಯೋಜಿಸಿದ್ದ ಗ್ಯಾರೆಂಟಿ ಯೋಜನೆಗಳ. ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತಮಾಡಿದರು.
ಗ್ಯರೆಂಟಿ ಯೋಜನೆಗಳಿಂದ ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಿಸುವ ನಿಟ್ಟಿನಲ್ಲಿ ಸಮಾವೇಶಗಳನ್ನು ಹಮ್ಮಿಕೊಳ್ಳಲಾಗುವುದು. ಯಾರು ಗ್ಯಾರೆಂಟಿ ಯೋಜನೆಗೆ ಅರ್ಜಿ ಹಾಕಿದರೂ ಹಣ ಬಂದಿಲ್ಲವೋ ಅಂತವರನ್ನು ಗುರುತಿಸಿ ಯಾವ ಉದ್ದೇಶಕ್ಕೆ ಹಣ ಬಂದಿಲ್ಲ ಎಂಬುದನ್ನು ಪತ್ತೆ ಮಾಡಿ ಅಂತವರ ಖಾತೆಗೆ ಹಣ ಜಮೆಯಾಗುವಂತೆ ನೋಡಿಕೊಳ್ಳಬೇಕು ಗ್ಯಾರೆಂಟಿ ಯೋಜನೆಗಳಿಂದ ಯಾರೂ ವಂಚಿತರಾಗ ಬಾರದು ಎಂದು ತಿಳಿಸಿದರು. ಗ್ಯಾರೆಂಟಿ ಯೋಜನೆಗಳನ್ನು ಸಮರ್ಪಕವಾಗಿ ತಲುಪಿಸುವ ಉದ್ದೇಶದಿಂದ. ಫೆ 3 ರಂದು ಬೆಳಗ್ಗೆ 10 ಗಂಟೆಗೆ ನಗರದ ರಾಘವೇಂದ್ರ ಕಲ್ಯಾಣ ಮಂಟಪ. ಫೆ 2 ರಂದು ಶ್ಯಾದಿ ಮಹಲ್ ತಳಕು ಬೆಳಗ್ಗೆ 10. ಫೆ 2 ರಂದು ಶ್ರೀ ಗುರು ತಿಪ್ಪೇರುದ್ರಸ್ವಾಮಿ ಒಳ ಮಠ ಮಧ್ಯಾಹ್ನ 2 ಗಂಟೆಗೆ. ಫೆ.5 ರಂದು ಪಬ್ಲಿಕ್ ಶಾಲೆ ಪರಶುರಾಂಪುರ ಬೆಳಗ್ಗೆ 10. ಗ್ಯಾರೆಂಟಿ ಯೋಜನೆಗಳ ಸಮಾವೇಶ ನಡೆಯಲಿದ್ದು ಸಮಾವೇಶದಲ್ಲಿ ಫಲಾನುಭವಿಗಳು ಭಾಗವಹಿಸುಂತೆ ಪ್ರಚಾರ ಮಾಡುವ ಮೂಲಕ ಯಾರೂ ಗ್ಯಾರೆಂಟಿ ಯೋಜನೆಗಳಿಂದ ವಂಚಿತರಾಗದಂತೆ ಅಧಿಕಾರಿಗಳು ನೋಡಿಕೊಳ್ಳುವಂತೆ ತಿಳಿಸಿದರು. ಸಭೆಯಲ್ಲಿ ತಾಪಂ ಇಒ ಶಶಿಧರ್ .ನಗರಸಭೆ ಪೌರಾಯುಕ್ತ ಚಂದ್ರಪ್ಪ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments